ತೆಲಂಗಾಣದ ಚಿಲ್ಕೂರು ಪ್ರದೇಶದ ರಾಜ್ ಬಹದ್ದೂರ್ ವೆಂಕಟರಂಗಾರೆಡ್ಡಿ ತೆಲಂಗಾಣ ಪೊಲೀಸ್ ಅಕಾಡೆಮಿಗೆ ಟ್ರೈನಿ ಐಎಎಸ್ ಅಧಿಕಾರಿಯಾಗಿ ಬಂದ ಮಗಳಿಗೆ ಅದೇ ಅಕಾಡೆಮಿಯಲ್ಲಿ IPS ಆಗಿ ಕರ್ತವ್ಯದಲ್ಲಿದ್ದ ತಂದೆ ಗೌರವದಿಂದ ಸೆಲ್ಯೂಟ್ ಮಾಡಿ, ಹೂಗುಚ್ಛ ನೀಡಿ ಶುಭ ಹಾರೈಸಿದ್ದಾರೆ.
ತೆಲಂಗಾಣದ ಉಮಾಹರತಿ ಅವರು ಯುಪಿಎಸ್ಸಿ ಸಿವಿಲ್ಸ್-2022ರ ಪರೀಕ್ಷೆಯಲ್ಲಿ 3ನೇ ರ್ಯಾಂಕ್ ಪಡೆದುಕೊಂಡಿದ್ದರು. ಈ ಹಿಂದೆ ನಾರಾಯಣಪೇಟ್ ಜಿಲ್ಲೆಯ ಎಸ್ಪಿಯಾಗಿ ಕೆಲಸ ಮಾಡಿದ್ದ ಆಕೆಯ ತಂದೆ ವೆಂಕಟೇಶ್ವರಲು ಪ್ರಸ್ತುತ ತೆಲಂಗಾಣದ ಪೊಲೀಸ್ ಅಕಾಡೆಮಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಈಗ ಇದೇ ಅಕಾಡೆಗೆ ಉಮಾಹರತಿ ಅವರು ಟ್ರೈನಿ ಐಎಎಸ್ ಅಧಿಕಾರಿಯಾಗಿ ಬರುತ್ತಿದ್ದಂತೆ ಕರ್ತವ್ಯದಲ್ಲಿದ್ದ ತಂದೆ ಮಗಳನ್ನು ಕಂಡು ಎದೆಗುಂದದೇ ಬಿಗ್ ಸೆಲ್ಯೂಟ್ ಮಾಡಿದ್ದಾರೆ.
ಮಗಳನ್ನು ಉನ್ನತ ಸ್ಥಾನದಲ್ಲಿ ತಂದೆ ಸಂತಸ ಪಟ್ಟುಕೊಂಡಿದ್ದಾರೆ. ಸದ್ಯ ಈ ಸಂಬಂಧದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿವೆ.
ಉಮಾಹರತಿ ಅವರು ಐಐಟಿ ಹೈದರಾಬಾದ್ನಿಂದ ಸಿವಿಲ್ ಇಂಜಿನಿಯರಿಂಗ್ನಲ್ಲಿ ಪದವಿ ಪಡೆದಿದ್ದಾರೆ. ಅವರ ಆರಂಭಿಕ ಶಿಕ್ಷಣ 10ನೇ ತರಗತಿಯವರೆಗೆ ಹೈದರಾಬಾದ್ನ ಭಾರತೀಯ ವಿದ್ಯಾಭವನದಲ್ಲಿ ನಡೆದಿದೆ. ಪದವಿ ನಂತರ ಉಮಾ ಅವರು ತಮ್ಮ ಐಚ್ಛಿಕ ವಿಷಯವಾಗಿ ಮಾನವಶಾಸ್ತ್ರವನ್ನು ಆಯ್ಕೆ ಮಾಡಿಕೊಂಡು UPSC ತಯಾರಿಯ ಪ್ರಯಾಣವನ್ನು ಆರಂಭಿಸಿದರು. ಉಮಾ ತನ್ನ ಯಶಸ್ಸಿಗೆ ಪೋಷಕರ ಅವಿರತ ಬೆಂಬಲ ಕಾರಣ ಎಂದು ಹೇಳುತ್ತಾರೆ.
ದೊಡ್ಡಬಳ್ಳಾಪುರ ತಾಲೂಕಿನ ಮಧುರನಹೊಸಹಳ್ಳಿ ಕಾಲೋನಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಪಟಾಕಿ ಸಿಡಿಸಿ, ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ…
14 ವರ್ಷದ ಮಗಳನ್ನು ಕೊಂದು ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್ ಫೀಲ್ಡ್ ಬಳಿಯ ಇಮ್ಮಡಿಹಳ್ಳಿಯಲ್ಲಿ ನಡೆದಿದೆ... ಮಗಳು…
ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆಯಾಗಿರುವ ಘಟನೆ ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ…
ವಿಜಯಪುರದಲ್ಲೋಂದು ವಿಚಿತ್ರ, ಅಮಾನವೀಯ, ಕರಳುಹಿಂಡುವ ಘಟನೆ ನಡೆದಿದೆ. ಇಲ್ಲೊಬ್ಬ ಕಿರಾತಕ ತಂದೆ ಮಗನನ್ನೇ ಕೊಲೆ ಮಾಡಿದ್ದಾನೆ. ಮಗ ನೋಡಲು ತನ್ನಂತೆ…
ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾವಿದ್ಯಾಲಯ ವತಿಯಿಂದ ಸಂವಿಧಾನ ಶಿಲ್ಪಿ,…
ಮನೆಯಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ನಿನ್ನೆ (ಏ.13) ರಾತ್ರಿ ನಡೆದಿದೆ... ವಿನೋದ್ ಕುಮಾರ್(44),…