ತೆಲಂಗಾಣದ ಚಿಲ್ಕೂರು ಪ್ರದೇಶದ ರಾಜ್ ಬಹದ್ದೂರ್ ವೆಂಕಟರಂಗಾರೆಡ್ಡಿ ತೆಲಂಗಾಣ ಪೊಲೀಸ್ ಅಕಾಡೆಮಿಗೆ ಟ್ರೈನಿ ಐಎಎಸ್ ಅಧಿಕಾರಿಯಾಗಿ ಬಂದ ಮಗಳಿಗೆ ಅದೇ ಅಕಾಡೆಮಿಯಲ್ಲಿ IPS ಆಗಿ ಕರ್ತವ್ಯದಲ್ಲಿದ್ದ ತಂದೆ ಗೌರವದಿಂದ ಸೆಲ್ಯೂಟ್ ಮಾಡಿ, ಹೂಗುಚ್ಛ ನೀಡಿ ಶುಭ ಹಾರೈಸಿದ್ದಾರೆ.
ತೆಲಂಗಾಣದ ಉಮಾಹರತಿ ಅವರು ಯುಪಿಎಸ್ಸಿ ಸಿವಿಲ್ಸ್-2022ರ ಪರೀಕ್ಷೆಯಲ್ಲಿ 3ನೇ ರ್ಯಾಂಕ್ ಪಡೆದುಕೊಂಡಿದ್ದರು. ಈ ಹಿಂದೆ ನಾರಾಯಣಪೇಟ್ ಜಿಲ್ಲೆಯ ಎಸ್ಪಿಯಾಗಿ ಕೆಲಸ ಮಾಡಿದ್ದ ಆಕೆಯ ತಂದೆ ವೆಂಕಟೇಶ್ವರಲು ಪ್ರಸ್ತುತ ತೆಲಂಗಾಣದ ಪೊಲೀಸ್ ಅಕಾಡೆಮಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಈಗ ಇದೇ ಅಕಾಡೆಗೆ ಉಮಾಹರತಿ ಅವರು ಟ್ರೈನಿ ಐಎಎಸ್ ಅಧಿಕಾರಿಯಾಗಿ ಬರುತ್ತಿದ್ದಂತೆ ಕರ್ತವ್ಯದಲ್ಲಿದ್ದ ತಂದೆ ಮಗಳನ್ನು ಕಂಡು ಎದೆಗುಂದದೇ ಬಿಗ್ ಸೆಲ್ಯೂಟ್ ಮಾಡಿದ್ದಾರೆ.
ಮಗಳನ್ನು ಉನ್ನತ ಸ್ಥಾನದಲ್ಲಿ ತಂದೆ ಸಂತಸ ಪಟ್ಟುಕೊಂಡಿದ್ದಾರೆ. ಸದ್ಯ ಈ ಸಂಬಂಧದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿವೆ.
ಉಮಾಹರತಿ ಅವರು ಐಐಟಿ ಹೈದರಾಬಾದ್ನಿಂದ ಸಿವಿಲ್ ಇಂಜಿನಿಯರಿಂಗ್ನಲ್ಲಿ ಪದವಿ ಪಡೆದಿದ್ದಾರೆ. ಅವರ ಆರಂಭಿಕ ಶಿಕ್ಷಣ 10ನೇ ತರಗತಿಯವರೆಗೆ ಹೈದರಾಬಾದ್ನ ಭಾರತೀಯ ವಿದ್ಯಾಭವನದಲ್ಲಿ ನಡೆದಿದೆ. ಪದವಿ ನಂತರ ಉಮಾ ಅವರು ತಮ್ಮ ಐಚ್ಛಿಕ ವಿಷಯವಾಗಿ ಮಾನವಶಾಸ್ತ್ರವನ್ನು ಆಯ್ಕೆ ಮಾಡಿಕೊಂಡು UPSC ತಯಾರಿಯ ಪ್ರಯಾಣವನ್ನು ಆರಂಭಿಸಿದರು. ಉಮಾ ತನ್ನ ಯಶಸ್ಸಿಗೆ ಪೋಷಕರ ಅವಿರತ ಬೆಂಬಲ ಕಾರಣ ಎಂದು ಹೇಳುತ್ತಾರೆ.
ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…
ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…
ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…