ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಚಾಲಕ ಸಾವನ್ನಪ್ಪಿರುವ ಘಟನೆ ದಾಬಸ್ ಪೇಟೆ – ಹೊಸಕೋಟೆ ಹೆದ್ದಾರಿಯ ರಾಮೇಶ್ವರ ಗೇಟ್ ನಲ್ಲಿ ಇಂದು ಬೆಳಗ್ಗೆ ಸುಮಾರು 6 ಗಂಟೆಯಲ್ಲಿ ನಡೆದಿದೆ…
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಚಿನ್ನಸಂದ್ರ ಗ್ರಾಮದ ಆನಂದ್(32), ಮೃತ ದುರ್ದೈವಿ.
ಇಂದು ಮುಂಜಾನೆ ಟೊಮೆಟೋ ಸಸಿಗಳಿಗೆ ಕಡ್ಡಿ ತರಲು ಚಿನ್ನಸಂದ್ರ ಗ್ರಾಮದಿಂದ ದಾಬಸ್ ಪೇಟೆ ಕಡೆಗೆ ಟ್ರ್ಯಾಕ್ಟರ್ ನಲ್ಲಿ ಹೋಗುತ್ತಿದ್ದಾಗ ಅದೇ ಮಾರ್ಗವಾಗಿ ಹಿಂದೆಯಿಂದ ಬರುತ್ತಿದ್ದ ಕ್ಯಾಂಟರ್ ರಾಮೇಶ್ವರ ಗೇಟ್ ನಲ್ಲಿ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ನಿಯಂತ್ರಣ ಕಳೆದುಕಡ ಟ್ರ್ಯಾಕ್ಟರ್ ಡಿವೈಡರ್ ಹಾರಿ ಪಕ್ಕದ ರಸ್ತೆಯಲ್ಲಿ ಪಲ್ಟಿ ಹೊಡೆದಿದೆ.. ಇದರ ಪರಿಣಾಮ ಟ್ರ್ಯಾಕ್ಟರ್ ಆನಂದ್ ಗೆ ಗಂಭೀರ ಗಾಯಗಳಾಗಿದ್ದವು, ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ…
ಘಟನೆಯಲ್ಲಿ ಕ್ಯಾಂಟರ್ ಚಾಲಕ ರವಿಗೂ ಕಾಲುಗಳಿಗೆ ಗಂಭೀರಗಾಯಳಾಗಿವೆ.
ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…
ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…
ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…
ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…