Categories: ಆರೋಗ್ಯ

ಡಯಾಬಿಟೀಸ್‌ನಿಂದ ಅಪರೂಪದ ಮೂತ್ರಪಿಂಡ ವೈಫಲ್ಯ – ಪತಿಯ ಜೀವ ಉಳಿಸಿದ ಪತ್ನಿಯ ತ್ಯಾಗ

ಬೆಂಗಳೂರು, ವೈಟ್‌ ಫೀಲ್ದ್‌ : ಪಶ್ಚಿಮ ಬಂಗಾಳದ 41 ವರ್ಷದ ವ್ಯಕ್ತಿಯೊಬ್ಬರಿಗೆ ಕೇವಲ 3 ವರ್ಷಗಳ ಡಯಾಬಿಟೀಸ್‌ನಿಂದ ಮೂತ್ರಪಿಂಡ ವೈಫಲ್ಯ ಉಂಟಾಯಿತು. ಪತಿಯ ಬದುಕು ಉಳಿಸಲು ಪತ್ನಿಯೇ ತನ್ನ ಮೂತ್ರಪಿಂಡವನ್ನು ದಾನ ಮಾಡಿದ್ದು, ಮೆಡಿಕವರ್ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಕಿಡ್ನಿ ಟ್ರಾನ್ಸ್‌ಪ್ಲಾಂಟ್ ನಡೆಸಿ ಅವರ ಜೀವ ಉಳಿಸಿದರು.

ಸಾಮಾನ್ಯವಾಗಿ ಡಯಾಬಿಟೀಸ್ ಹಾಗೂ ರಕ್ತದೊತ್ತಡದಿಂದ ಮೂತ್ರಪಿಂಡ ಹಾನಿ 10–15 ವರ್ಷಗಳ ಬಳಿಕವಾಗುತ್ತದೆ. ಆದರೆ ಈ ಪ್ರಕರಣದಲ್ಲಿ ಕೇವಲ 3 ವರ್ಷಗಳಲ್ಲಿ ಡಯಾಬಿಟಿಕ್ ಕಿಡ್ನಿ ಡಿಸೀಸ್ ದೃಢಪಟ್ಟಿತು. ಕಳೆದ 2 ತಿಂಗಳುಗಳಿಂದ ರೋಗಿ ವಾರಕ್ಕೆ 3 ಬಾರಿ ಡಯಾಲಿಸಿಸ್ ಮಾಡಿಸಿಕೊಂಡಿದ್ದರು.

ಮೆಡಿಕವರ್‌ ಆಸ್ಪತ್ರೆಯ ನುರಿತ ವೈದ್ಯರ ತಂಡ ಕಿಡ್ನಿ ಕಸಿಯನ್ನು ಯಶಸ್ವಿಯಾಗಿ ಪೂರೈಸಿದರು . ಮೂತ್ರ ಪಿಂಡ ಶಾಸ್ತ್ರಜ್ಞ ಡಾ .ಹರೀಶಾ ಬಾಬು ನೇತೃತ್ವದಲ್ಲಿ ಮೂತ್ರ ಶಾಸ್ತ್ರಜ್ಞ ಡಾ ದಿಲೀಪ್‌ ಹಾಗೂ ಡಾ ಪ್ರಮೋದ್‌ ನೇತ್ರತ್ವದಲ್ಲಿ ಕಡ್ನಿ ಕಿಸಿಯನ್ನು ಮಾಡಲಾಯಿತು. ನಂತರ ತಕ್ಷಣವೇ ಮೂತ್ರ ವಿಸರ್ಜನೆ ಪ್ರಾರಂಭವಾಗಿ,ರೋಗಿಯಲ್ಲಿ ಚೇತರಿಕೆ ಕಂಡು ಬಂದಿದೆ .

ಈ ಪ್ರಕರಣದ ಬಗ್ಗೆ ಮೆಡಿಕವರ್ ಆಸ್ಪತ್ರೆಯ ಹಿರಿಯ ನೇಫ್ರಾಲಜಿಸ್ಟ್ ಡಾ. ಹರೀಶಾ ಬಾಬು ಹೇಳಿದರು:
“ಡಯಾಬಿಟೀಸ್‌ನಿಂದಾಗಿ ಸಾಮಾನ್ಯವಾಗಿ 10 ವರ್ಷಗಳ ನಂತರವೇ ಕಿಡ್ನಿ ಹಾನಿ ಉಂಟಾಗುತ್ತದೆ. ಆದರೆ ಈ ಪ್ರಕರಣದಲ್ಲಿ ಕೇವಲ 3 ವರ್ಷಗಳಲ್ಲೇ ಮೂತ್ರಪಿಂಡ ವೈಫಲ್ಯ ಉಂಟಾಗಿದೆ. ಇದು ಪ್ರಾರಂಭಿಕ ಹಂತದಲ್ಲೇ ತಪಾಸಣೆ ಮತ್ತು ಚಿಕಿತ್ಸೆಯ ಮಹತ್ವವನ್ನು ತೋರಿಸುತ್ತದೆ. ನಿಯಮಿತ ತಪಾಸಣೆ, ಜೀವನ ಶೈಲಿಯ ಬದಲಾವಣೆಗಳು ಕಿಡ್ನಿ ಹಾನಿಯನ್ನು ತಡೆಯಬಹುದು.”

ಈ ಯಶಸ್ವಿ ಶಸ್ತ್ರಚಿಕಿತ್ಸೆ ಪತಿಯ ಬದುಕಿಗಾಗಿ ತ್ಯಾಗ ಮಾಡಿದ ಪತ್ನಿಯ ಪ್ರೀತಿ ಮತ್ತು ವೈದ್ಯಕೀಯ ವಿಜ್ಞಾನದ ಶಕ್ತಿಗೆ ಸಾಕ್ಷಿಯಾಗಿದೆ.

Ramesh Babu

Journalist

Share
Published by
Ramesh Babu

Recent Posts

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

11 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

12 hours ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

15 hours ago

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

24 hours ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

1 day ago