Categories: ಆರೋಗ್ಯ

ಡಯಾಬಿಟೀಸ್‌ನಿಂದ ಅಪರೂಪದ ಮೂತ್ರಪಿಂಡ ವೈಫಲ್ಯ – ಪತಿಯ ಜೀವ ಉಳಿಸಿದ ಪತ್ನಿಯ ತ್ಯಾಗ

ಬೆಂಗಳೂರು, ವೈಟ್‌ ಫೀಲ್ದ್‌ : ಪಶ್ಚಿಮ ಬಂಗಾಳದ 41 ವರ್ಷದ ವ್ಯಕ್ತಿಯೊಬ್ಬರಿಗೆ ಕೇವಲ 3 ವರ್ಷಗಳ ಡಯಾಬಿಟೀಸ್‌ನಿಂದ ಮೂತ್ರಪಿಂಡ ವೈಫಲ್ಯ ಉಂಟಾಯಿತು. ಪತಿಯ ಬದುಕು ಉಳಿಸಲು ಪತ್ನಿಯೇ ತನ್ನ ಮೂತ್ರಪಿಂಡವನ್ನು ದಾನ ಮಾಡಿದ್ದು, ಮೆಡಿಕವರ್ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಕಿಡ್ನಿ ಟ್ರಾನ್ಸ್‌ಪ್ಲಾಂಟ್ ನಡೆಸಿ ಅವರ ಜೀವ ಉಳಿಸಿದರು.

ಸಾಮಾನ್ಯವಾಗಿ ಡಯಾಬಿಟೀಸ್ ಹಾಗೂ ರಕ್ತದೊತ್ತಡದಿಂದ ಮೂತ್ರಪಿಂಡ ಹಾನಿ 10–15 ವರ್ಷಗಳ ಬಳಿಕವಾಗುತ್ತದೆ. ಆದರೆ ಈ ಪ್ರಕರಣದಲ್ಲಿ ಕೇವಲ 3 ವರ್ಷಗಳಲ್ಲಿ ಡಯಾಬಿಟಿಕ್ ಕಿಡ್ನಿ ಡಿಸೀಸ್ ದೃಢಪಟ್ಟಿತು. ಕಳೆದ 2 ತಿಂಗಳುಗಳಿಂದ ರೋಗಿ ವಾರಕ್ಕೆ 3 ಬಾರಿ ಡಯಾಲಿಸಿಸ್ ಮಾಡಿಸಿಕೊಂಡಿದ್ದರು.

ಮೆಡಿಕವರ್‌ ಆಸ್ಪತ್ರೆಯ ನುರಿತ ವೈದ್ಯರ ತಂಡ ಕಿಡ್ನಿ ಕಸಿಯನ್ನು ಯಶಸ್ವಿಯಾಗಿ ಪೂರೈಸಿದರು . ಮೂತ್ರ ಪಿಂಡ ಶಾಸ್ತ್ರಜ್ಞ ಡಾ .ಹರೀಶಾ ಬಾಬು ನೇತೃತ್ವದಲ್ಲಿ ಮೂತ್ರ ಶಾಸ್ತ್ರಜ್ಞ ಡಾ ದಿಲೀಪ್‌ ಹಾಗೂ ಡಾ ಪ್ರಮೋದ್‌ ನೇತ್ರತ್ವದಲ್ಲಿ ಕಡ್ನಿ ಕಿಸಿಯನ್ನು ಮಾಡಲಾಯಿತು. ನಂತರ ತಕ್ಷಣವೇ ಮೂತ್ರ ವಿಸರ್ಜನೆ ಪ್ರಾರಂಭವಾಗಿ,ರೋಗಿಯಲ್ಲಿ ಚೇತರಿಕೆ ಕಂಡು ಬಂದಿದೆ .

ಈ ಪ್ರಕರಣದ ಬಗ್ಗೆ ಮೆಡಿಕವರ್ ಆಸ್ಪತ್ರೆಯ ಹಿರಿಯ ನೇಫ್ರಾಲಜಿಸ್ಟ್ ಡಾ. ಹರೀಶಾ ಬಾಬು ಹೇಳಿದರು:
“ಡಯಾಬಿಟೀಸ್‌ನಿಂದಾಗಿ ಸಾಮಾನ್ಯವಾಗಿ 10 ವರ್ಷಗಳ ನಂತರವೇ ಕಿಡ್ನಿ ಹಾನಿ ಉಂಟಾಗುತ್ತದೆ. ಆದರೆ ಈ ಪ್ರಕರಣದಲ್ಲಿ ಕೇವಲ 3 ವರ್ಷಗಳಲ್ಲೇ ಮೂತ್ರಪಿಂಡ ವೈಫಲ್ಯ ಉಂಟಾಗಿದೆ. ಇದು ಪ್ರಾರಂಭಿಕ ಹಂತದಲ್ಲೇ ತಪಾಸಣೆ ಮತ್ತು ಚಿಕಿತ್ಸೆಯ ಮಹತ್ವವನ್ನು ತೋರಿಸುತ್ತದೆ. ನಿಯಮಿತ ತಪಾಸಣೆ, ಜೀವನ ಶೈಲಿಯ ಬದಲಾವಣೆಗಳು ಕಿಡ್ನಿ ಹಾನಿಯನ್ನು ತಡೆಯಬಹುದು.”

ಈ ಯಶಸ್ವಿ ಶಸ್ತ್ರಚಿಕಿತ್ಸೆ ಪತಿಯ ಬದುಕಿಗಾಗಿ ತ್ಯಾಗ ಮಾಡಿದ ಪತ್ನಿಯ ಪ್ರೀತಿ ಮತ್ತು ವೈದ್ಯಕೀಯ ವಿಜ್ಞಾನದ ಶಕ್ತಿಗೆ ಸಾಕ್ಷಿಯಾಗಿದೆ.

Ramesh Babu

Journalist

Share
Published by
Ramesh Babu

Recent Posts

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

12 minutes ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

1 hour ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

1 hour ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

5 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

16 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

17 hours ago