ಬೆಂಗಳೂರು, ವೈಟ್ ಫೀಲ್ದ್ : ಪಶ್ಚಿಮ ಬಂಗಾಳದ 41 ವರ್ಷದ ವ್ಯಕ್ತಿಯೊಬ್ಬರಿಗೆ ಕೇವಲ 3 ವರ್ಷಗಳ ಡಯಾಬಿಟೀಸ್ನಿಂದ ಮೂತ್ರಪಿಂಡ ವೈಫಲ್ಯ ಉಂಟಾಯಿತು. ಪತಿಯ ಬದುಕು ಉಳಿಸಲು ಪತ್ನಿಯೇ ತನ್ನ ಮೂತ್ರಪಿಂಡವನ್ನು ದಾನ ಮಾಡಿದ್ದು, ಮೆಡಿಕವರ್ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಕಿಡ್ನಿ ಟ್ರಾನ್ಸ್ಪ್ಲಾಂಟ್ ನಡೆಸಿ ಅವರ ಜೀವ ಉಳಿಸಿದರು.
ಸಾಮಾನ್ಯವಾಗಿ ಡಯಾಬಿಟೀಸ್ ಹಾಗೂ ರಕ್ತದೊತ್ತಡದಿಂದ ಮೂತ್ರಪಿಂಡ ಹಾನಿ 10–15 ವರ್ಷಗಳ ಬಳಿಕವಾಗುತ್ತದೆ. ಆದರೆ ಈ ಪ್ರಕರಣದಲ್ಲಿ ಕೇವಲ 3 ವರ್ಷಗಳಲ್ಲಿ ಡಯಾಬಿಟಿಕ್ ಕಿಡ್ನಿ ಡಿಸೀಸ್ ದೃಢಪಟ್ಟಿತು. ಕಳೆದ 2 ತಿಂಗಳುಗಳಿಂದ ರೋಗಿ ವಾರಕ್ಕೆ 3 ಬಾರಿ ಡಯಾಲಿಸಿಸ್ ಮಾಡಿಸಿಕೊಂಡಿದ್ದರು.
ಮೆಡಿಕವರ್ ಆಸ್ಪತ್ರೆಯ ನುರಿತ ವೈದ್ಯರ ತಂಡ ಕಿಡ್ನಿ ಕಸಿಯನ್ನು ಯಶಸ್ವಿಯಾಗಿ ಪೂರೈಸಿದರು . ಮೂತ್ರ ಪಿಂಡ ಶಾಸ್ತ್ರಜ್ಞ ಡಾ .ಹರೀಶಾ ಬಾಬು ನೇತೃತ್ವದಲ್ಲಿ ಮೂತ್ರ ಶಾಸ್ತ್ರಜ್ಞ ಡಾ ದಿಲೀಪ್ ಹಾಗೂ ಡಾ ಪ್ರಮೋದ್ ನೇತ್ರತ್ವದಲ್ಲಿ ಕಡ್ನಿ ಕಿಸಿಯನ್ನು ಮಾಡಲಾಯಿತು. ನಂತರ ತಕ್ಷಣವೇ ಮೂತ್ರ ವಿಸರ್ಜನೆ ಪ್ರಾರಂಭವಾಗಿ,ರೋಗಿಯಲ್ಲಿ ಚೇತರಿಕೆ ಕಂಡು ಬಂದಿದೆ .
ಈ ಪ್ರಕರಣದ ಬಗ್ಗೆ ಮೆಡಿಕವರ್ ಆಸ್ಪತ್ರೆಯ ಹಿರಿಯ ನೇಫ್ರಾಲಜಿಸ್ಟ್ ಡಾ. ಹರೀಶಾ ಬಾಬು ಹೇಳಿದರು:
“ಡಯಾಬಿಟೀಸ್ನಿಂದಾಗಿ ಸಾಮಾನ್ಯವಾಗಿ 10 ವರ್ಷಗಳ ನಂತರವೇ ಕಿಡ್ನಿ ಹಾನಿ ಉಂಟಾಗುತ್ತದೆ. ಆದರೆ ಈ ಪ್ರಕರಣದಲ್ಲಿ ಕೇವಲ 3 ವರ್ಷಗಳಲ್ಲೇ ಮೂತ್ರಪಿಂಡ ವೈಫಲ್ಯ ಉಂಟಾಗಿದೆ. ಇದು ಪ್ರಾರಂಭಿಕ ಹಂತದಲ್ಲೇ ತಪಾಸಣೆ ಮತ್ತು ಚಿಕಿತ್ಸೆಯ ಮಹತ್ವವನ್ನು ತೋರಿಸುತ್ತದೆ. ನಿಯಮಿತ ತಪಾಸಣೆ, ಜೀವನ ಶೈಲಿಯ ಬದಲಾವಣೆಗಳು ಕಿಡ್ನಿ ಹಾನಿಯನ್ನು ತಡೆಯಬಹುದು.”
ಈ ಯಶಸ್ವಿ ಶಸ್ತ್ರಚಿಕಿತ್ಸೆ ಪತಿಯ ಬದುಕಿಗಾಗಿ ತ್ಯಾಗ ಮಾಡಿದ ಪತ್ನಿಯ ಪ್ರೀತಿ ಮತ್ತು ವೈದ್ಯಕೀಯ ವಿಜ್ಞಾನದ ಶಕ್ತಿಗೆ ಸಾಕ್ಷಿಯಾಗಿದೆ.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…