Categories: ಆರೋಗ್ಯ

ಡಯಾಬಿಟೀಸ್‌ನಿಂದ ಅಪರೂಪದ ಮೂತ್ರಪಿಂಡ ವೈಫಲ್ಯ – ಪತಿಯ ಜೀವ ಉಳಿಸಿದ ಪತ್ನಿಯ ತ್ಯಾಗ

ಬೆಂಗಳೂರು, ವೈಟ್‌ ಫೀಲ್ದ್‌ : ಪಶ್ಚಿಮ ಬಂಗಾಳದ 41 ವರ್ಷದ ವ್ಯಕ್ತಿಯೊಬ್ಬರಿಗೆ ಕೇವಲ 3 ವರ್ಷಗಳ ಡಯಾಬಿಟೀಸ್‌ನಿಂದ ಮೂತ್ರಪಿಂಡ ವೈಫಲ್ಯ ಉಂಟಾಯಿತು. ಪತಿಯ ಬದುಕು ಉಳಿಸಲು ಪತ್ನಿಯೇ ತನ್ನ ಮೂತ್ರಪಿಂಡವನ್ನು ದಾನ ಮಾಡಿದ್ದು, ಮೆಡಿಕವರ್ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಕಿಡ್ನಿ ಟ್ರಾನ್ಸ್‌ಪ್ಲಾಂಟ್ ನಡೆಸಿ ಅವರ ಜೀವ ಉಳಿಸಿದರು.

ಸಾಮಾನ್ಯವಾಗಿ ಡಯಾಬಿಟೀಸ್ ಹಾಗೂ ರಕ್ತದೊತ್ತಡದಿಂದ ಮೂತ್ರಪಿಂಡ ಹಾನಿ 10–15 ವರ್ಷಗಳ ಬಳಿಕವಾಗುತ್ತದೆ. ಆದರೆ ಈ ಪ್ರಕರಣದಲ್ಲಿ ಕೇವಲ 3 ವರ್ಷಗಳಲ್ಲಿ ಡಯಾಬಿಟಿಕ್ ಕಿಡ್ನಿ ಡಿಸೀಸ್ ದೃಢಪಟ್ಟಿತು. ಕಳೆದ 2 ತಿಂಗಳುಗಳಿಂದ ರೋಗಿ ವಾರಕ್ಕೆ 3 ಬಾರಿ ಡಯಾಲಿಸಿಸ್ ಮಾಡಿಸಿಕೊಂಡಿದ್ದರು.

ಮೆಡಿಕವರ್‌ ಆಸ್ಪತ್ರೆಯ ನುರಿತ ವೈದ್ಯರ ತಂಡ ಕಿಡ್ನಿ ಕಸಿಯನ್ನು ಯಶಸ್ವಿಯಾಗಿ ಪೂರೈಸಿದರು . ಮೂತ್ರ ಪಿಂಡ ಶಾಸ್ತ್ರಜ್ಞ ಡಾ .ಹರೀಶಾ ಬಾಬು ನೇತೃತ್ವದಲ್ಲಿ ಮೂತ್ರ ಶಾಸ್ತ್ರಜ್ಞ ಡಾ ದಿಲೀಪ್‌ ಹಾಗೂ ಡಾ ಪ್ರಮೋದ್‌ ನೇತ್ರತ್ವದಲ್ಲಿ ಕಡ್ನಿ ಕಿಸಿಯನ್ನು ಮಾಡಲಾಯಿತು. ನಂತರ ತಕ್ಷಣವೇ ಮೂತ್ರ ವಿಸರ್ಜನೆ ಪ್ರಾರಂಭವಾಗಿ,ರೋಗಿಯಲ್ಲಿ ಚೇತರಿಕೆ ಕಂಡು ಬಂದಿದೆ .

ಈ ಪ್ರಕರಣದ ಬಗ್ಗೆ ಮೆಡಿಕವರ್ ಆಸ್ಪತ್ರೆಯ ಹಿರಿಯ ನೇಫ್ರಾಲಜಿಸ್ಟ್ ಡಾ. ಹರೀಶಾ ಬಾಬು ಹೇಳಿದರು:
“ಡಯಾಬಿಟೀಸ್‌ನಿಂದಾಗಿ ಸಾಮಾನ್ಯವಾಗಿ 10 ವರ್ಷಗಳ ನಂತರವೇ ಕಿಡ್ನಿ ಹಾನಿ ಉಂಟಾಗುತ್ತದೆ. ಆದರೆ ಈ ಪ್ರಕರಣದಲ್ಲಿ ಕೇವಲ 3 ವರ್ಷಗಳಲ್ಲೇ ಮೂತ್ರಪಿಂಡ ವೈಫಲ್ಯ ಉಂಟಾಗಿದೆ. ಇದು ಪ್ರಾರಂಭಿಕ ಹಂತದಲ್ಲೇ ತಪಾಸಣೆ ಮತ್ತು ಚಿಕಿತ್ಸೆಯ ಮಹತ್ವವನ್ನು ತೋರಿಸುತ್ತದೆ. ನಿಯಮಿತ ತಪಾಸಣೆ, ಜೀವನ ಶೈಲಿಯ ಬದಲಾವಣೆಗಳು ಕಿಡ್ನಿ ಹಾನಿಯನ್ನು ತಡೆಯಬಹುದು.”

ಈ ಯಶಸ್ವಿ ಶಸ್ತ್ರಚಿಕಿತ್ಸೆ ಪತಿಯ ಬದುಕಿಗಾಗಿ ತ್ಯಾಗ ಮಾಡಿದ ಪತ್ನಿಯ ಪ್ರೀತಿ ಮತ್ತು ವೈದ್ಯಕೀಯ ವಿಜ್ಞಾನದ ಶಕ್ತಿಗೆ ಸಾಕ್ಷಿಯಾಗಿದೆ.

Ramesh Babu

Journalist

Share
Published by
Ramesh Babu

Recent Posts

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

4 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

5 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

16 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

20 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

21 hours ago