Categories: ಆರೋಗ್ಯ

ಡಯಾಬಿಟೀಸ್‌ನಿಂದ ಅಪರೂಪದ ಮೂತ್ರಪಿಂಡ ವೈಫಲ್ಯ – ಪತಿಯ ಜೀವ ಉಳಿಸಿದ ಪತ್ನಿಯ ತ್ಯಾಗ

ಬೆಂಗಳೂರು, ವೈಟ್‌ ಫೀಲ್ದ್‌ : ಪಶ್ಚಿಮ ಬಂಗಾಳದ 41 ವರ್ಷದ ವ್ಯಕ್ತಿಯೊಬ್ಬರಿಗೆ ಕೇವಲ 3 ವರ್ಷಗಳ ಡಯಾಬಿಟೀಸ್‌ನಿಂದ ಮೂತ್ರಪಿಂಡ ವೈಫಲ್ಯ ಉಂಟಾಯಿತು. ಪತಿಯ ಬದುಕು ಉಳಿಸಲು ಪತ್ನಿಯೇ ತನ್ನ ಮೂತ್ರಪಿಂಡವನ್ನು ದಾನ ಮಾಡಿದ್ದು, ಮೆಡಿಕವರ್ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಕಿಡ್ನಿ ಟ್ರಾನ್ಸ್‌ಪ್ಲಾಂಟ್ ನಡೆಸಿ ಅವರ ಜೀವ ಉಳಿಸಿದರು.

ಸಾಮಾನ್ಯವಾಗಿ ಡಯಾಬಿಟೀಸ್ ಹಾಗೂ ರಕ್ತದೊತ್ತಡದಿಂದ ಮೂತ್ರಪಿಂಡ ಹಾನಿ 10–15 ವರ್ಷಗಳ ಬಳಿಕವಾಗುತ್ತದೆ. ಆದರೆ ಈ ಪ್ರಕರಣದಲ್ಲಿ ಕೇವಲ 3 ವರ್ಷಗಳಲ್ಲಿ ಡಯಾಬಿಟಿಕ್ ಕಿಡ್ನಿ ಡಿಸೀಸ್ ದೃಢಪಟ್ಟಿತು. ಕಳೆದ 2 ತಿಂಗಳುಗಳಿಂದ ರೋಗಿ ವಾರಕ್ಕೆ 3 ಬಾರಿ ಡಯಾಲಿಸಿಸ್ ಮಾಡಿಸಿಕೊಂಡಿದ್ದರು.

ಮೆಡಿಕವರ್‌ ಆಸ್ಪತ್ರೆಯ ನುರಿತ ವೈದ್ಯರ ತಂಡ ಕಿಡ್ನಿ ಕಸಿಯನ್ನು ಯಶಸ್ವಿಯಾಗಿ ಪೂರೈಸಿದರು . ಮೂತ್ರ ಪಿಂಡ ಶಾಸ್ತ್ರಜ್ಞ ಡಾ .ಹರೀಶಾ ಬಾಬು ನೇತೃತ್ವದಲ್ಲಿ ಮೂತ್ರ ಶಾಸ್ತ್ರಜ್ಞ ಡಾ ದಿಲೀಪ್‌ ಹಾಗೂ ಡಾ ಪ್ರಮೋದ್‌ ನೇತ್ರತ್ವದಲ್ಲಿ ಕಡ್ನಿ ಕಿಸಿಯನ್ನು ಮಾಡಲಾಯಿತು. ನಂತರ ತಕ್ಷಣವೇ ಮೂತ್ರ ವಿಸರ್ಜನೆ ಪ್ರಾರಂಭವಾಗಿ,ರೋಗಿಯಲ್ಲಿ ಚೇತರಿಕೆ ಕಂಡು ಬಂದಿದೆ .

ಈ ಪ್ರಕರಣದ ಬಗ್ಗೆ ಮೆಡಿಕವರ್ ಆಸ್ಪತ್ರೆಯ ಹಿರಿಯ ನೇಫ್ರಾಲಜಿಸ್ಟ್ ಡಾ. ಹರೀಶಾ ಬಾಬು ಹೇಳಿದರು:
“ಡಯಾಬಿಟೀಸ್‌ನಿಂದಾಗಿ ಸಾಮಾನ್ಯವಾಗಿ 10 ವರ್ಷಗಳ ನಂತರವೇ ಕಿಡ್ನಿ ಹಾನಿ ಉಂಟಾಗುತ್ತದೆ. ಆದರೆ ಈ ಪ್ರಕರಣದಲ್ಲಿ ಕೇವಲ 3 ವರ್ಷಗಳಲ್ಲೇ ಮೂತ್ರಪಿಂಡ ವೈಫಲ್ಯ ಉಂಟಾಗಿದೆ. ಇದು ಪ್ರಾರಂಭಿಕ ಹಂತದಲ್ಲೇ ತಪಾಸಣೆ ಮತ್ತು ಚಿಕಿತ್ಸೆಯ ಮಹತ್ವವನ್ನು ತೋರಿಸುತ್ತದೆ. ನಿಯಮಿತ ತಪಾಸಣೆ, ಜೀವನ ಶೈಲಿಯ ಬದಲಾವಣೆಗಳು ಕಿಡ್ನಿ ಹಾನಿಯನ್ನು ತಡೆಯಬಹುದು.”

ಈ ಯಶಸ್ವಿ ಶಸ್ತ್ರಚಿಕಿತ್ಸೆ ಪತಿಯ ಬದುಕಿಗಾಗಿ ತ್ಯಾಗ ಮಾಡಿದ ಪತ್ನಿಯ ಪ್ರೀತಿ ಮತ್ತು ವೈದ್ಯಕೀಯ ವಿಜ್ಞಾನದ ಶಕ್ತಿಗೆ ಸಾಕ್ಷಿಯಾಗಿದೆ.

Ramesh Babu

Journalist

Share
Published by
Ramesh Babu

Recent Posts

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

9 minutes ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

3 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

4 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

19 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

20 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 day ago