ಬೆಂಗಳೂರು, ವೈಟ್ ಫೀಲ್ದ್ : ಪಶ್ಚಿಮ ಬಂಗಾಳದ 41 ವರ್ಷದ ವ್ಯಕ್ತಿಯೊಬ್ಬರಿಗೆ ಕೇವಲ 3 ವರ್ಷಗಳ ಡಯಾಬಿಟೀಸ್ನಿಂದ ಮೂತ್ರಪಿಂಡ ವೈಫಲ್ಯ ಉಂಟಾಯಿತು. ಪತಿಯ ಬದುಕು ಉಳಿಸಲು ಪತ್ನಿಯೇ ತನ್ನ ಮೂತ್ರಪಿಂಡವನ್ನು ದಾನ ಮಾಡಿದ್ದು, ಮೆಡಿಕವರ್ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಕಿಡ್ನಿ ಟ್ರಾನ್ಸ್ಪ್ಲಾಂಟ್ ನಡೆಸಿ ಅವರ ಜೀವ ಉಳಿಸಿದರು.
ಸಾಮಾನ್ಯವಾಗಿ ಡಯಾಬಿಟೀಸ್ ಹಾಗೂ ರಕ್ತದೊತ್ತಡದಿಂದ ಮೂತ್ರಪಿಂಡ ಹಾನಿ 10–15 ವರ್ಷಗಳ ಬಳಿಕವಾಗುತ್ತದೆ. ಆದರೆ ಈ ಪ್ರಕರಣದಲ್ಲಿ ಕೇವಲ 3 ವರ್ಷಗಳಲ್ಲಿ ಡಯಾಬಿಟಿಕ್ ಕಿಡ್ನಿ ಡಿಸೀಸ್ ದೃಢಪಟ್ಟಿತು. ಕಳೆದ 2 ತಿಂಗಳುಗಳಿಂದ ರೋಗಿ ವಾರಕ್ಕೆ 3 ಬಾರಿ ಡಯಾಲಿಸಿಸ್ ಮಾಡಿಸಿಕೊಂಡಿದ್ದರು.
ಮೆಡಿಕವರ್ ಆಸ್ಪತ್ರೆಯ ನುರಿತ ವೈದ್ಯರ ತಂಡ ಕಿಡ್ನಿ ಕಸಿಯನ್ನು ಯಶಸ್ವಿಯಾಗಿ ಪೂರೈಸಿದರು . ಮೂತ್ರ ಪಿಂಡ ಶಾಸ್ತ್ರಜ್ಞ ಡಾ .ಹರೀಶಾ ಬಾಬು ನೇತೃತ್ವದಲ್ಲಿ ಮೂತ್ರ ಶಾಸ್ತ್ರಜ್ಞ ಡಾ ದಿಲೀಪ್ ಹಾಗೂ ಡಾ ಪ್ರಮೋದ್ ನೇತ್ರತ್ವದಲ್ಲಿ ಕಡ್ನಿ ಕಿಸಿಯನ್ನು ಮಾಡಲಾಯಿತು. ನಂತರ ತಕ್ಷಣವೇ ಮೂತ್ರ ವಿಸರ್ಜನೆ ಪ್ರಾರಂಭವಾಗಿ,ರೋಗಿಯಲ್ಲಿ ಚೇತರಿಕೆ ಕಂಡು ಬಂದಿದೆ .
ಈ ಪ್ರಕರಣದ ಬಗ್ಗೆ ಮೆಡಿಕವರ್ ಆಸ್ಪತ್ರೆಯ ಹಿರಿಯ ನೇಫ್ರಾಲಜಿಸ್ಟ್ ಡಾ. ಹರೀಶಾ ಬಾಬು ಹೇಳಿದರು:
“ಡಯಾಬಿಟೀಸ್ನಿಂದಾಗಿ ಸಾಮಾನ್ಯವಾಗಿ 10 ವರ್ಷಗಳ ನಂತರವೇ ಕಿಡ್ನಿ ಹಾನಿ ಉಂಟಾಗುತ್ತದೆ. ಆದರೆ ಈ ಪ್ರಕರಣದಲ್ಲಿ ಕೇವಲ 3 ವರ್ಷಗಳಲ್ಲೇ ಮೂತ್ರಪಿಂಡ ವೈಫಲ್ಯ ಉಂಟಾಗಿದೆ. ಇದು ಪ್ರಾರಂಭಿಕ ಹಂತದಲ್ಲೇ ತಪಾಸಣೆ ಮತ್ತು ಚಿಕಿತ್ಸೆಯ ಮಹತ್ವವನ್ನು ತೋರಿಸುತ್ತದೆ. ನಿಯಮಿತ ತಪಾಸಣೆ, ಜೀವನ ಶೈಲಿಯ ಬದಲಾವಣೆಗಳು ಕಿಡ್ನಿ ಹಾನಿಯನ್ನು ತಡೆಯಬಹುದು.”
ಈ ಯಶಸ್ವಿ ಶಸ್ತ್ರಚಿಕಿತ್ಸೆ ಪತಿಯ ಬದುಕಿಗಾಗಿ ತ್ಯಾಗ ಮಾಡಿದ ಪತ್ನಿಯ ಪ್ರೀತಿ ಮತ್ತು ವೈದ್ಯಕೀಯ ವಿಜ್ಞಾನದ ಶಕ್ತಿಗೆ ಸಾಕ್ಷಿಯಾಗಿದೆ.
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…