ಬೆಂಗಳೂರು, ವೈಟ್ ಫೀಲ್ದ್ : ಪಶ್ಚಿಮ ಬಂಗಾಳದ 41 ವರ್ಷದ ವ್ಯಕ್ತಿಯೊಬ್ಬರಿಗೆ ಕೇವಲ 3 ವರ್ಷಗಳ ಡಯಾಬಿಟೀಸ್ನಿಂದ ಮೂತ್ರಪಿಂಡ ವೈಫಲ್ಯ ಉಂಟಾಯಿತು. ಪತಿಯ ಬದುಕು ಉಳಿಸಲು ಪತ್ನಿಯೇ ತನ್ನ ಮೂತ್ರಪಿಂಡವನ್ನು ದಾನ ಮಾಡಿದ್ದು, ಮೆಡಿಕವರ್ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಕಿಡ್ನಿ ಟ್ರಾನ್ಸ್ಪ್ಲಾಂಟ್ ನಡೆಸಿ ಅವರ ಜೀವ ಉಳಿಸಿದರು.
ಸಾಮಾನ್ಯವಾಗಿ ಡಯಾಬಿಟೀಸ್ ಹಾಗೂ ರಕ್ತದೊತ್ತಡದಿಂದ ಮೂತ್ರಪಿಂಡ ಹಾನಿ 10–15 ವರ್ಷಗಳ ಬಳಿಕವಾಗುತ್ತದೆ. ಆದರೆ ಈ ಪ್ರಕರಣದಲ್ಲಿ ಕೇವಲ 3 ವರ್ಷಗಳಲ್ಲಿ ಡಯಾಬಿಟಿಕ್ ಕಿಡ್ನಿ ಡಿಸೀಸ್ ದೃಢಪಟ್ಟಿತು. ಕಳೆದ 2 ತಿಂಗಳುಗಳಿಂದ ರೋಗಿ ವಾರಕ್ಕೆ 3 ಬಾರಿ ಡಯಾಲಿಸಿಸ್ ಮಾಡಿಸಿಕೊಂಡಿದ್ದರು.
ಮೆಡಿಕವರ್ ಆಸ್ಪತ್ರೆಯ ನುರಿತ ವೈದ್ಯರ ತಂಡ ಕಿಡ್ನಿ ಕಸಿಯನ್ನು ಯಶಸ್ವಿಯಾಗಿ ಪೂರೈಸಿದರು . ಮೂತ್ರ ಪಿಂಡ ಶಾಸ್ತ್ರಜ್ಞ ಡಾ .ಹರೀಶಾ ಬಾಬು ನೇತೃತ್ವದಲ್ಲಿ ಮೂತ್ರ ಶಾಸ್ತ್ರಜ್ಞ ಡಾ ದಿಲೀಪ್ ಹಾಗೂ ಡಾ ಪ್ರಮೋದ್ ನೇತ್ರತ್ವದಲ್ಲಿ ಕಡ್ನಿ ಕಿಸಿಯನ್ನು ಮಾಡಲಾಯಿತು. ನಂತರ ತಕ್ಷಣವೇ ಮೂತ್ರ ವಿಸರ್ಜನೆ ಪ್ರಾರಂಭವಾಗಿ,ರೋಗಿಯಲ್ಲಿ ಚೇತರಿಕೆ ಕಂಡು ಬಂದಿದೆ .
ಈ ಪ್ರಕರಣದ ಬಗ್ಗೆ ಮೆಡಿಕವರ್ ಆಸ್ಪತ್ರೆಯ ಹಿರಿಯ ನೇಫ್ರಾಲಜಿಸ್ಟ್ ಡಾ. ಹರೀಶಾ ಬಾಬು ಹೇಳಿದರು:
“ಡಯಾಬಿಟೀಸ್ನಿಂದಾಗಿ ಸಾಮಾನ್ಯವಾಗಿ 10 ವರ್ಷಗಳ ನಂತರವೇ ಕಿಡ್ನಿ ಹಾನಿ ಉಂಟಾಗುತ್ತದೆ. ಆದರೆ ಈ ಪ್ರಕರಣದಲ್ಲಿ ಕೇವಲ 3 ವರ್ಷಗಳಲ್ಲೇ ಮೂತ್ರಪಿಂಡ ವೈಫಲ್ಯ ಉಂಟಾಗಿದೆ. ಇದು ಪ್ರಾರಂಭಿಕ ಹಂತದಲ್ಲೇ ತಪಾಸಣೆ ಮತ್ತು ಚಿಕಿತ್ಸೆಯ ಮಹತ್ವವನ್ನು ತೋರಿಸುತ್ತದೆ. ನಿಯಮಿತ ತಪಾಸಣೆ, ಜೀವನ ಶೈಲಿಯ ಬದಲಾವಣೆಗಳು ಕಿಡ್ನಿ ಹಾನಿಯನ್ನು ತಡೆಯಬಹುದು.”
ಈ ಯಶಸ್ವಿ ಶಸ್ತ್ರಚಿಕಿತ್ಸೆ ಪತಿಯ ಬದುಕಿಗಾಗಿ ತ್ಯಾಗ ಮಾಡಿದ ಪತ್ನಿಯ ಪ್ರೀತಿ ಮತ್ತು ವೈದ್ಯಕೀಯ ವಿಜ್ಞಾನದ ಶಕ್ತಿಗೆ ಸಾಕ್ಷಿಯಾಗಿದೆ.
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…