ಬೆಂಗಳೂರು, ವೈಟ್ ಫೀಲ್ದ್ : ಪಶ್ಚಿಮ ಬಂಗಾಳದ 41 ವರ್ಷದ ವ್ಯಕ್ತಿಯೊಬ್ಬರಿಗೆ ಕೇವಲ 3 ವರ್ಷಗಳ ಡಯಾಬಿಟೀಸ್ನಿಂದ ಮೂತ್ರಪಿಂಡ ವೈಫಲ್ಯ ಉಂಟಾಯಿತು. ಪತಿಯ ಬದುಕು ಉಳಿಸಲು ಪತ್ನಿಯೇ ತನ್ನ ಮೂತ್ರಪಿಂಡವನ್ನು ದಾನ ಮಾಡಿದ್ದು, ಮೆಡಿಕವರ್ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಕಿಡ್ನಿ ಟ್ರಾನ್ಸ್ಪ್ಲಾಂಟ್ ನಡೆಸಿ ಅವರ ಜೀವ ಉಳಿಸಿದರು.
ಸಾಮಾನ್ಯವಾಗಿ ಡಯಾಬಿಟೀಸ್ ಹಾಗೂ ರಕ್ತದೊತ್ತಡದಿಂದ ಮೂತ್ರಪಿಂಡ ಹಾನಿ 10–15 ವರ್ಷಗಳ ಬಳಿಕವಾಗುತ್ತದೆ. ಆದರೆ ಈ ಪ್ರಕರಣದಲ್ಲಿ ಕೇವಲ 3 ವರ್ಷಗಳಲ್ಲಿ ಡಯಾಬಿಟಿಕ್ ಕಿಡ್ನಿ ಡಿಸೀಸ್ ದೃಢಪಟ್ಟಿತು. ಕಳೆದ 2 ತಿಂಗಳುಗಳಿಂದ ರೋಗಿ ವಾರಕ್ಕೆ 3 ಬಾರಿ ಡಯಾಲಿಸಿಸ್ ಮಾಡಿಸಿಕೊಂಡಿದ್ದರು.
ಮೆಡಿಕವರ್ ಆಸ್ಪತ್ರೆಯ ನುರಿತ ವೈದ್ಯರ ತಂಡ ಕಿಡ್ನಿ ಕಸಿಯನ್ನು ಯಶಸ್ವಿಯಾಗಿ ಪೂರೈಸಿದರು . ಮೂತ್ರ ಪಿಂಡ ಶಾಸ್ತ್ರಜ್ಞ ಡಾ .ಹರೀಶಾ ಬಾಬು ನೇತೃತ್ವದಲ್ಲಿ ಮೂತ್ರ ಶಾಸ್ತ್ರಜ್ಞ ಡಾ ದಿಲೀಪ್ ಹಾಗೂ ಡಾ ಪ್ರಮೋದ್ ನೇತ್ರತ್ವದಲ್ಲಿ ಕಡ್ನಿ ಕಿಸಿಯನ್ನು ಮಾಡಲಾಯಿತು. ನಂತರ ತಕ್ಷಣವೇ ಮೂತ್ರ ವಿಸರ್ಜನೆ ಪ್ರಾರಂಭವಾಗಿ,ರೋಗಿಯಲ್ಲಿ ಚೇತರಿಕೆ ಕಂಡು ಬಂದಿದೆ .
ಈ ಪ್ರಕರಣದ ಬಗ್ಗೆ ಮೆಡಿಕವರ್ ಆಸ್ಪತ್ರೆಯ ಹಿರಿಯ ನೇಫ್ರಾಲಜಿಸ್ಟ್ ಡಾ. ಹರೀಶಾ ಬಾಬು ಹೇಳಿದರು:
“ಡಯಾಬಿಟೀಸ್ನಿಂದಾಗಿ ಸಾಮಾನ್ಯವಾಗಿ 10 ವರ್ಷಗಳ ನಂತರವೇ ಕಿಡ್ನಿ ಹಾನಿ ಉಂಟಾಗುತ್ತದೆ. ಆದರೆ ಈ ಪ್ರಕರಣದಲ್ಲಿ ಕೇವಲ 3 ವರ್ಷಗಳಲ್ಲೇ ಮೂತ್ರಪಿಂಡ ವೈಫಲ್ಯ ಉಂಟಾಗಿದೆ. ಇದು ಪ್ರಾರಂಭಿಕ ಹಂತದಲ್ಲೇ ತಪಾಸಣೆ ಮತ್ತು ಚಿಕಿತ್ಸೆಯ ಮಹತ್ವವನ್ನು ತೋರಿಸುತ್ತದೆ. ನಿಯಮಿತ ತಪಾಸಣೆ, ಜೀವನ ಶೈಲಿಯ ಬದಲಾವಣೆಗಳು ಕಿಡ್ನಿ ಹಾನಿಯನ್ನು ತಡೆಯಬಹುದು.”
ಈ ಯಶಸ್ವಿ ಶಸ್ತ್ರಚಿಕಿತ್ಸೆ ಪತಿಯ ಬದುಕಿಗಾಗಿ ತ್ಯಾಗ ಮಾಡಿದ ಪತ್ನಿಯ ಪ್ರೀತಿ ಮತ್ತು ವೈದ್ಯಕೀಯ ವಿಜ್ಞಾನದ ಶಕ್ತಿಗೆ ಸಾಕ್ಷಿಯಾಗಿದೆ.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…