ಡಯಾಲಿಸಿಸ್ ಅಂತಿಮವಲ್ಲ: ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು

ಬೆಂಗಳೂರು , ವೈಟ್‌ಫೀಲ್ದ್‌ – 48 ವರ್ಷದ ಉನ್ನಿಕೃಷ್ಣನ್ ಅವರ ಜೀವನ ಹಲವು ವರ್ಷಗಳಿಂದ ಡಯಾಲಿಸಿಸ್‌, ಔಷಧ ಮತ್ತುಬದುಕುವ ನಿರೀಕ್ಷೆಯಲ್ಲೇ ಸಾಗುತ್ತಿತ್ತು. 2022ರಲ್ಲಿ ಕೊನೆ ಹಂತದ ಕಿಡ್ನಿ ವೈಫಲ್ಯ ದೃಢಪಟ್ಟ ಬಳಿಕ ಭರವಸೆಯನ್ನು ಕಳೆದುಕೊಂಡಿದ್ದು , ಅವರಿಗೆ ನಿಯಮಿತ ಡಯಾಲಿಸಿಸ್ ಆರಂಭಿಸಲಾಯಿತು. ಕುಟುಂಬದಲ್ಲಿ ಸೂಕ್ತ ದಾನಿದಾರರಿಲ್ಲದೇ ಮೃತ ದಾನಿದಾರರ ಕಿಡ್ನಿ ಕಸಿ ನಿರೀಕ್ಷಾ ಪಟ್ಟಿಯಲ್ಲಿ ಸೇರಿದರು.

36 ತಿಂಗಳ ಡಯಾಲಿಸಿಸ್ ಇತಿಹಾಸ, ನಿಯಂತ್ರಣದಲ್ಲಿರದ ರಕ್ತದೊತ್ತಡ ಹಾಗೂ 2024ರಲ್ಲಿ ಸಂಭವಿಸಿದ ಹೈಪರ್‌ಟೆನ್ಷನ್‌ ಸ್ಟ್ರೋಕ್‌ನಂತಹ ಆರೋಗ್ಯ ಸವಾಲುಗಳ ನಡುವೆಯೂ ಅವರು ಚಿಕಿತ್ಸೆ ಪಾಲನೆ, ನಿಯಮಿತ ಡಯಾಲಿಸಿಸ್‌ ಮತ್ತು ಶಿಸ್ತಿನಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಂಡರು.

ಸುಮಾರು ಮೂರು ವರ್ಷಗಳ ಕಾಯುವಿಕೆಯ ನಂತರ, ರಸ್ತೆ ಅಪಘಾತದಲ್ಲಿ ಮೃತಪಟ್ಟ 18 ವರ್ಷದ ಯುವಕನ ಮೃತ ದಾನಿದಾರ ಕಿಡ್ನಿ ಲಭ್ಯವಾಯಿತು. ದಾನಿದಾರ ಕಿಡ್ನಿಯ ಕಾರ್ಯಕ್ಷಮತೆ ಉತ್ತಮವಾಗಿದ್ದು, ಕಸಿಗೆ ಸೂಕ್ತವಾಗಿತ್ತು.

ನೆಫ್ರಾಲಜಿಸ್ಟ್ ಡಾ. ನಿಶ್ಚಯ್ ಬಿ, ಹಾಗೂ ಟ್ರಾನ್ಸ್‌ಪ್ಲಾಂಟ್ ಶಸ್ತ್ರಚಿಕಿತ್ಸಕರಾದ ಡಾ. ಪ್ರಮೋದ್ ಎಸ್ ಮತ್ತು ಡಾ. ದಿಲೀಪ್ ಎಂ ರವರ ವೈದ್ಯರ ತಂಡದೊಂದಿಗೆ ನೇತೃತ್ವದಲ್ಲಿ ಕಿಡ್ನಿ ಕಸಿ ಯಶಸ್ವಿಯಾಗಿ ನೆರವೇರಿತು. ತಜ್ಞರ ನಿಗಾ ಮತ್ತು ಸೂಕ್ತ ಚಿಕಿತ್ಸೆಯಿಂದ ಕಿಡ್ನಿಯ ಕಾರ್ಯಕ್ಷಮತೆ ಕ್ರಮೇಣ ಸುಧಾರಿಸಿತು.

ಇಂದು ಉನ್ನಿಕೃಷ್ಣನ್ ಡಯಾಲಿಸಿಸ್‌ನಿಂದ ಮುಕ್ತರಾಗಿ, ಉತ್ತಮ ಕಿಡ್ನಿ ಕಾರ್ಯಕ್ಷಮತೆಯೊಂದಿಗೆ ಸಾಮಾನ್ಯ ಜೀವನ ನಡೆಸುತ್ತಿದ್ದಾರೆ.

“ಕಿಡ್ನಿ ಕಸಿ ಪಡೆಯಲು ಅರ್ಹರಾದ ರೋಗಿಗಳಿಗೆ ಡಯಾಲಿಸಿಸ್ ಅಂತಿಮ ಆಯ್ಕೆಯಲ್ಲ. ಸೂಕ್ತ ಪರಿಶೀಲನೆ ಮತ್ತು ತನಿಖೆಗಳ ನಂತರ ಇಂತಹ ರೋಗಿಗಳನ್ನು ಮೃತ ದಾನಿದಾರ ಕಿಡ್ನಿ ಕಸಿ ನಿರೀಕ್ಷಾ ಪಟ್ಟಿಯಲ್ಲಿ ಸೇರಿಸಿ, ಡಯಾಲಿಸಿಸ್ ಮುಂದುವರೆಸಬಹುದು. ಶಿಸ್ತು, ನಿಯಮಿತ ಫಾಲೋ-ಅಪ್ ಮತ್ತು ಸಮಯೋಚಿತ ಚಿಕಿತ್ಸೆ ಇದ್ದರೆ ಯಶಸ್ವಿ ಕಿಡ್ನಿ ಕಸಿ ಸಂಪೂರ್ಣ ಸಾಧ್ಯ,” ಎಂದು ಡಾ. ನಿಶ್ಚಯ್ ಹೇಳಿದರು.

ಡಯಾಲಿಸಿಸ್ ಜೀವನಪೂರ್ತಿ ಎನ್ನುವ ತಪ್ಪು ಕಲ್ಪನೆಯಿಂದ ಅನೇಕರು ನಿರಾಶರಾಗುತ್ತಾರೆ. ಆದರೆ ಮೃತ ಅಂಗದಾನದ ಮೂಲಕ ಕಿಡ್ನಿ ಕಸಿ ಸಾವಿರಾರು ರೋಗಿಗಳಿಗೆ ಹೊಸ ಬದುಕಿನ ಅವಕಾಶ ನೀಡುತ್ತಿದೆ ಎಂದು ವೈದ್ಯರು ತಿಳಿಸಿದರು.

Ramesh Babu

Journalist

Recent Posts

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

6 hours ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

6 hours ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

11 hours ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

3 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

3 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

3 days ago