ಡಾಬಾ ಬಳಿ ಫೋಟೋ ಶೂಟ್ ವೇಳೆ ಕಿಡಿಗೇಡಿಗಳಿಂದ ಕಿರಿಕ್: ಕಿರಿಕ್ ಕೊಲೆಯಲ್ಲಿ ಅಂತ್ಯ

ತಾಲೂಕಿನ ಕೂಗೇನಹಳ್ಳಿ ಸಮೀಪದ ಖಾಸಗಿ ಡಾಬಾ ಬಳಿ ತನ್ನ ಪಾಡಿಗೆ ತಾನು ಫೋಟೋ ಶೂಟ್ ಮಾಡುವ ವೇಳೆ ಯುವಕನೊಂದಿಗೆ ಕಿರಿಕ್ ತೆಗೆದ ಕಿಡಿಗೇಡಿಗಳು, ಈ ಕಿರಿಕ್ ತಾರಕಕ್ಕೇರಿ ಕೊಲೆಯಲ್ಲಿ ಸಮಾಪ್ತಿಗೊಂಡಿದೆ.

ನಗರದ ಕಚೇರಿಪಾಳ್ಯದ ನಿವಾಸಿಯಾದ ಸುಮಾರು 22 ವರ್ಷದ ಸೂರ್ಯ (ಸೂರಿ) ಕೊಲೆಗೀಡಾದ ಯುವಕ.

ದೀಪಾವಳಿ ವಿಶೇಷ, ರಾಮೇಶ್ವರ ಬಳಿಯ ಖಾಸಗಿ ಡಾಬದ ಮುಂಭಾಗ ಅಲಂಕರಿಸಲಾಗಿದ್ದ ಸೀನರಿ ಬಳಿ ಮೃತ ಸೂರ್ಯ ಜೊತೆ ತೆರಳಿದ್ದ ನಾಲ್ವರು ಯುವಕರು ನಡೆಸುತ್ತಿದ್ದ ಫೋಟೋ ಶೂಟ್ ಮಾಡಿಕೊಳ್ಳುತ್ತಿರುತ್ತಾರೆ. ಅಲ್ಲಿಗೆ ಬಂದ ಅಪರಿಚಿತ ಗುಂಪೊಂದು ನಮ್ಮದು ಫೋಟೋ ತೆಗೆಯುವಂತೆ ಸುಖಾಸುಮ್ಮನೆ ಕಿರಿಕ್ ತೆಗೆದಿದ್ದಾರೆ.

ಈ ವೇಳೆ ಫೋಟೋ ಯುವಕರು ತೆಗೆಯುತ್ತಾರೆ. ಅಲ್ಲಿಗೆ ಸುಮ್ಮನಾಗದ ಕಿರಿಕ್ ಗುಂಪು ಯುವಕರಿಂದ ಕ್ಯಾಮೆರಾ ಕಬಳಿಸಿ ಹಲ್ಲೆ ಮಾಡಿದ್ದಲ್ಲದೆ, ಸೂರಿಯ ಎದೆಯ ಭಾಗಕ್ಕೆ ಕೀ ಚೈನ್ ನಿಂದ ಚುಚ್ಚಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಲವಾದ ಪೆಟ್ಟು ಬಿದ್ದಿದ್ದರಿಂದ ಸೂರ್ಯ ಅಲ್ಲೇ ಕುಸಿದು ನಿತ್ರಾಣನಾಗಿದ್ದರಿಂದ ಆಸ್ಪತ್ರೆಗೆ ರವಾನೆ ಮಾಡಲಾಗುತ್ತದೆ. ಆದರೆ ತೀವ್ರ ರಕ್ತಸ್ರಾವ ಆಗಿದ್ದರಿಂದ ಸಾವನ್ನಪ್ಪುತ್ತಾನೆ ಎಂದು ತಿಳಿದು ಬಂದಿದೆ. ಆಸ್ಪತ್ರೆ ಬಳಿ ಮೃತ ಯುವಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಎಂ.ಆರ್.ಹರೀಶ್ ಹಾಗೂ ಸಿಬ್ಬಂದಿ ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ದೊಡ್ಡಬೆಳವಂಗಲ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Ramesh Babu

Journalist

Recent Posts

ನಾಳೆ ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾ ವಿದ್ಯಾಲಯದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ.ಆರ್. ಅಂಬೇಡ್ಕರ್‌ ಅವರ 135ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಆಯೋಜನೆ

ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾ ವಿದ್ಯಾಲಯ ವತಿಯಿಂದ ಸಂವಿಧಾನ…

1 hour ago

ವ್ಯಕ್ತಿಯೋರ್ವ ನೇಣಿಗೆ ಶರಣು

  ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಸಾದುಮಠದಲ್ಲಿ ನಡೆದಿದೆ.. ಊರ ಹೊರವಲಯದಲ್ಲಿರುವ ಹಲಸಿನ ಮರಕ್ಕೆ…

2 hours ago

ತಿಂಗಳಾಂತ್ಯಕ್ಕೆ ಮೊದಲ ಬಗರ್ ಹುಕುಂ ಸಮಿತಿ ಸಭೆ – ಶಾಸಕ ಧೀರಜ್ ಮುನಿರಾಜು

ಇದೇ ಏಪ್ರಿಲ್ ತಿಂಗಳಾಂತ್ಯಕ್ಕೆ ರೈತರಿಗೆ ಭೂ ಮಂಜೂರು ಮಾಡುವ ಬಗರ್ ಹುಕುಂ ಸಮತಿ ಸಭೆಯನ್ನು ಮಾಡಲಾಗುವುದು, ಸಭೆಯಲ್ಲಿ ಕನಿಷ್ಟ 100…

2 hours ago

ಭೂ ಮಾಪನ ಕಾರ್ಯ ಸ್ಥಗಿತ, ರೈತರ ಆಕ್ರೋಶ: ಪರ್ಯಾಯ ವ್ಯವಸ್ಥೆ ಮಾಡುವಂತೆ ಒತ್ತಾಯ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ…

3 hours ago

ಮಹಿಳೆಯರ ಸಬಲೀಕರಣಕ್ಕೆ ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆ ಜಾರಿ- ಬಿಜೆಪಿ ರಾಜ್ಯ ವಕ್ತಾರರಾದ ಅಶ್ವಿನಿ ಶಂಕರ್

ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು…

4 hours ago

ಆಶಾ ಭೋಸ್ಲೆ…..ಸುಮಾರು 12000ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾಗಿದ್ದವರು- ಅವರಿಗೆ ‌ಭಾವಪೂರ್ಣ ಶ್ರದ್ಧಾಂಜಲಿ……

ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…

14 hours ago