ತಾಲೂಕಿನ ಕೂಗೇನಹಳ್ಳಿ ಸಮೀಪದ ಖಾಸಗಿ ಡಾಬಾ ಬಳಿ ತನ್ನ ಪಾಡಿಗೆ ತಾನು ಫೋಟೋ ಶೂಟ್ ಮಾಡುವ ವೇಳೆ ಯುವಕನೊಂದಿಗೆ ಕಿರಿಕ್ ತೆಗೆದ ಕಿಡಿಗೇಡಿಗಳು, ಈ ಕಿರಿಕ್ ತಾರಕಕ್ಕೇರಿ ಕೊಲೆಯಲ್ಲಿ ಸಮಾಪ್ತಿಗೊಂಡಿದೆ.
ನಗರದ ಕಚೇರಿಪಾಳ್ಯದ ನಿವಾಸಿಯಾದ ಸುಮಾರು 22 ವರ್ಷದ ಸೂರ್ಯ (ಸೂರಿ) ಕೊಲೆಗೀಡಾದ ಯುವಕ.
ದೀಪಾವಳಿ ವಿಶೇಷ, ರಾಮೇಶ್ವರ ಬಳಿಯ ಖಾಸಗಿ ಡಾಬದ ಮುಂಭಾಗ ಅಲಂಕರಿಸಲಾಗಿದ್ದ ಸೀನರಿ ಬಳಿ ಮೃತ ಸೂರ್ಯ ಜೊತೆ ತೆರಳಿದ್ದ ನಾಲ್ವರು ಯುವಕರು ನಡೆಸುತ್ತಿದ್ದ ಫೋಟೋ ಶೂಟ್ ಮಾಡಿಕೊಳ್ಳುತ್ತಿರುತ್ತಾರೆ. ಅಲ್ಲಿಗೆ ಬಂದ ಅಪರಿಚಿತ ಗುಂಪೊಂದು ನಮ್ಮದು ಫೋಟೋ ತೆಗೆಯುವಂತೆ ಸುಖಾಸುಮ್ಮನೆ ಕಿರಿಕ್ ತೆಗೆದಿದ್ದಾರೆ.
ಈ ವೇಳೆ ಫೋಟೋ ಯುವಕರು ತೆಗೆಯುತ್ತಾರೆ. ಅಲ್ಲಿಗೆ ಸುಮ್ಮನಾಗದ ಕಿರಿಕ್ ಗುಂಪು ಯುವಕರಿಂದ ಕ್ಯಾಮೆರಾ ಕಬಳಿಸಿ ಹಲ್ಲೆ ಮಾಡಿದ್ದಲ್ಲದೆ, ಸೂರಿಯ ಎದೆಯ ಭಾಗಕ್ಕೆ ಕೀ ಚೈನ್ ನಿಂದ ಚುಚ್ಚಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಲವಾದ ಪೆಟ್ಟು ಬಿದ್ದಿದ್ದರಿಂದ ಸೂರ್ಯ ಅಲ್ಲೇ ಕುಸಿದು ನಿತ್ರಾಣನಾಗಿದ್ದರಿಂದ ಆಸ್ಪತ್ರೆಗೆ ರವಾನೆ ಮಾಡಲಾಗುತ್ತದೆ. ಆದರೆ ತೀವ್ರ ರಕ್ತಸ್ರಾವ ಆಗಿದ್ದರಿಂದ ಸಾವನ್ನಪ್ಪುತ್ತಾನೆ ಎಂದು ತಿಳಿದು ಬಂದಿದೆ. ಆಸ್ಪತ್ರೆ ಬಳಿ ಮೃತ ಯುವಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಎಂ.ಆರ್.ಹರೀಶ್ ಹಾಗೂ ಸಿಬ್ಬಂದಿ ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ದೊಡ್ಡಬೆಳವಂಗಲ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಸಾದುಮಠದಲ್ಲಿ ನಡೆದಿದೆ.. ಊರ ಹೊರವಲಯದಲ್ಲಿರುವ ಹಲಸಿನ ಮರಕ್ಕೆ…
ಇದೇ ಏಪ್ರಿಲ್ ತಿಂಗಳಾಂತ್ಯಕ್ಕೆ ರೈತರಿಗೆ ಭೂ ಮಂಜೂರು ಮಾಡುವ ಬಗರ್ ಹುಕುಂ ಸಮತಿ ಸಭೆಯನ್ನು ಮಾಡಲಾಗುವುದು, ಸಭೆಯಲ್ಲಿ ಕನಿಷ್ಟ 100…
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ…
ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು…
ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…
Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…