ತಾಲೂಕಿನ ಕೂಗೇನಹಳ್ಳಿ ಸಮೀಪದ ಖಾಸಗಿ ಡಾಬಾ ಬಳಿ ತನ್ನ ಪಾಡಿಗೆ ತಾನು ಫೋಟೋ ಶೂಟ್ ಮಾಡುವ ವೇಳೆ ಯುವಕನೊಂದಿಗೆ ಕಿರಿಕ್ ತೆಗೆದ ಕಿಡಿಗೇಡಿಗಳು, ಈ ಕಿರಿಕ್ ತಾರಕಕ್ಕೇರಿ ಕೊಲೆಯಲ್ಲಿ ಸಮಾಪ್ತಿಗೊಂಡಿದೆ.
ನಗರದ ಕಚೇರಿಪಾಳ್ಯದ ನಿವಾಸಿ ಸೂರ್ಯ(22), ಕೊಲೆಗೀಡಾದ ಯುವಕ.
ದೀಪಾವಳಿ ವಿಶೇಷ, ರಾಮೇಶ್ವರ ಬಳಿಯ ಖಾಸಗಿ ಡಾಬದ ಮುಂಭಾಗ ಅಲಂಕರಿಸಲಾಗಿದ್ದ ಸೀನರಿ ಬಳಿ ಮೃತ ಸೂರ್ಯ ಜೊತೆ ತೆರಳಿದ್ದ ನಾಲ್ವರು ಯುವಕರು ನಡೆಸುತ್ತಿದ್ದ ಫೋಟೋ ಶೂಟ್ ಮಾಡಿಕೊಳ್ಳುತ್ತಿರುತ್ತಾರೆ. ಅಲ್ಲಿಗೆ ಬಂದ ಅಪರಿಚಿತ ಗುಂಪೊಂದು ನಮ್ಮದು ಫೋಟೋ ತೆಗೆಯುವಂತೆ ಸುಖಾಸುಮ್ಮನೆ ಕಿರಿಕ್ ತೆಗೆದಿದ್ದಾರೆ.
ಈ ವೇಳೆ ಫೋಟೋ ಯುವಕರು ತೆಗೆಯುತ್ತಾರೆ. ಅಲ್ಲಿಗೆ ಸುಮ್ಮನಾಗದ ಕಿರಿಕ್ ಗುಂಪು ಯುವಕರಿಂದ ಕ್ಯಾಮೆರಾ ಕಬಳಿಸಿ ಹಲ್ಲೆ ಮಾಡಿದ್ದಲ್ಲದೆ, ಸೂರ್ಯ ಎದೆಯ ಭಾಗಕ್ಕೆ ಕೀ ಚೈನ್ ನಿಂದ ಚುಚ್ಚಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಲವಾದ ಪೆಟ್ಟು ಬಿದ್ದಿದ್ದರಿಂದ ಸೂರ್ಯ ಅಲ್ಲೇ ಕುಸಿದು ನಿತ್ರಾಣನಾಗಿದ್ದರಿಂದ ಆಸ್ಪತ್ರೆಗೆ ರವಾನೆ ಮಾಡಲಾಗುತ್ತದೆ. ಆದರೆ ತೀವ್ರ ರಕ್ತಸ್ರಾವ ಆಗಿದ್ದರಿಂದ ಸಾವನ್ನಪ್ಪುತ್ತಾನೆ ಎಂದು ತಿಳಿದು ಬಂದಿದೆ. ಆಸ್ಪತ್ರೆ ಬಳಿ ಮೃತ ಯುವಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಎಂ.ಆರ್.ಹರೀಶ್ ಹಾಗೂ ಸಿಬ್ಬಂದಿ ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ದೊಡ್ಡಬೆಳವಂಗಲ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…