ಡಾಬಾ ಬಳಿ ಫೋಟೋ ಶೂಟ್ ವೇಳೆ ಕಿಡಿಗೇಡಿಗಳಿಂದ ಕಿರಿಕ್: ಕಿರಿಕ್ ಕೊಲೆಯಲ್ಲಿ ಅಂತ್ಯ

ತಾಲೂಕಿನ ಕೂಗೇನಹಳ್ಳಿ ಸಮೀಪದ ಖಾಸಗಿ ಡಾಬಾ ಬಳಿ ತನ್ನ ಪಾಡಿಗೆ ತಾನು ಫೋಟೋ ಶೂಟ್ ಮಾಡುವ ವೇಳೆ ಯುವಕನೊಂದಿಗೆ ಕಿರಿಕ್ ತೆಗೆದ ಕಿಡಿಗೇಡಿಗಳು, ಈ ಕಿರಿಕ್ ತಾರಕಕ್ಕೇರಿ ಕೊಲೆಯಲ್ಲಿ ಸಮಾಪ್ತಿಗೊಂಡಿದೆ.

ನಗರದ ಕಚೇರಿಪಾಳ್ಯದ ನಿವಾಸಿ ಸೂರ್ಯ(22), ಕೊಲೆಗೀಡಾದ ಯುವಕ.

ದೀಪಾವಳಿ ವಿಶೇಷ, ರಾಮೇಶ್ವರ ಬಳಿಯ ಖಾಸಗಿ ಡಾಬದ ಮುಂಭಾಗ ಅಲಂಕರಿಸಲಾಗಿದ್ದ ಸೀನರಿ ಬಳಿ ಮೃತ ಸೂರ್ಯ ಜೊತೆ ತೆರಳಿದ್ದ ನಾಲ್ವರು ಯುವಕರು ನಡೆಸುತ್ತಿದ್ದ ಫೋಟೋ ಶೂಟ್ ಮಾಡಿಕೊಳ್ಳುತ್ತಿರುತ್ತಾರೆ. ಅಲ್ಲಿಗೆ ಬಂದ ಅಪರಿಚಿತ ಗುಂಪೊಂದು ನಮ್ಮದು ಫೋಟೋ ತೆಗೆಯುವಂತೆ ಸುಖಾಸುಮ್ಮನೆ ಕಿರಿಕ್ ತೆಗೆದಿದ್ದಾರೆ.

ಈ ವೇಳೆ ಫೋಟೋ ಯುವಕರು ತೆಗೆಯುತ್ತಾರೆ. ಅಲ್ಲಿಗೆ ಸುಮ್ಮನಾಗದ ಕಿರಿಕ್ ಗುಂಪು ಯುವಕರಿಂದ ಕ್ಯಾಮೆರಾ ಕಬಳಿಸಿ ಹಲ್ಲೆ ಮಾಡಿದ್ದಲ್ಲದೆ, ಸೂರ್ಯ ಎದೆಯ ಭಾಗಕ್ಕೆ ಕೀ ಚೈನ್ ನಿಂದ ಚುಚ್ಚಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಲವಾದ ಪೆಟ್ಟು ಬಿದ್ದಿದ್ದರಿಂದ ಸೂರ್ಯ ಅಲ್ಲೇ ಕುಸಿದು ನಿತ್ರಾಣನಾಗಿದ್ದರಿಂದ ಆಸ್ಪತ್ರೆಗೆ ರವಾನೆ ಮಾಡಲಾಗುತ್ತದೆ. ಆದರೆ ತೀವ್ರ ರಕ್ತಸ್ರಾವ ಆಗಿದ್ದರಿಂದ ಸಾವನ್ನಪ್ಪುತ್ತಾನೆ ಎಂದು ತಿಳಿದು ಬಂದಿದೆ. ಆಸ್ಪತ್ರೆ ಬಳಿ ಮೃತ ಯುವಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಎಂ.ಆರ್.ಹರೀಶ್ ಹಾಗೂ ಸಿಬ್ಬಂದಿ ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ದೊಡ್ಡಬೆಳವಂಗಲ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

14 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

22 hours ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

1 day ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago

ಜು.25ರಂದು ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ಬೆಸ್ಕಾಂ ವತಿಯಿಂದ ತುರ್ತು ನಿರ್ವಹಣೆ ಮತ್ತು ವಿದ್ಯುತ್ ಮಾರ್ಗಗಳ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 25ರಂದು (ಶನಿವಾರ) ದೊಡ್ಡಬಳ್ಳಾಪುರ ನಗರದ…

2 days ago

ಆಕ್ರೋಶ, ಅರಾಜಕತೆ ಮತ್ತು ಮಾಧ್ಯಮಗಳು…..

ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಕಳೆದ ಕೆಲವು ದಿನಗಳ ಘಟನೆಗಳನ್ನು ನೋಡುತ್ತಿದ್ದರೆ ನಮ್ಮ ದೇಶದ ಸುತ್ತಮುತ್ತ ನಡೆದ ಬಾಂಗ್ಲಾ,…

2 days ago