ತಾಲೂಕಿನ ಕೂಗೇನಹಳ್ಳಿ ಸಮೀಪದ ಖಾಸಗಿ ಡಾಬಾ ಬಳಿ ತನ್ನ ಪಾಡಿಗೆ ತಾನು ಫೋಟೋ ಶೂಟ್ ಮಾಡುವ ವೇಳೆ ಯುವಕನೊಂದಿಗೆ ಕಿರಿಕ್ ತೆಗೆದ ಕಿಡಿಗೇಡಿಗಳು, ಈ ಕಿರಿಕ್ ತಾರಕಕ್ಕೇರಿ ಕೊಲೆಯಲ್ಲಿ ಸಮಾಪ್ತಿಗೊಂಡಿದೆ.
ನಗರದ ಕಚೇರಿಪಾಳ್ಯದ ನಿವಾಸಿ ಸೂರ್ಯ(22), ಕೊಲೆಗೀಡಾದ ಯುವಕ.
ದೀಪಾವಳಿ ವಿಶೇಷ, ರಾಮೇಶ್ವರ ಬಳಿಯ ಖಾಸಗಿ ಡಾಬದ ಮುಂಭಾಗ ಅಲಂಕರಿಸಲಾಗಿದ್ದ ಸೀನರಿ ಬಳಿ ಮೃತ ಸೂರ್ಯ ಜೊತೆ ತೆರಳಿದ್ದ ನಾಲ್ವರು ಯುವಕರು ನಡೆಸುತ್ತಿದ್ದ ಫೋಟೋ ಶೂಟ್ ಮಾಡಿಕೊಳ್ಳುತ್ತಿರುತ್ತಾರೆ. ಅಲ್ಲಿಗೆ ಬಂದ ಅಪರಿಚಿತ ಗುಂಪೊಂದು ನಮ್ಮದು ಫೋಟೋ ತೆಗೆಯುವಂತೆ ಸುಖಾಸುಮ್ಮನೆ ಕಿರಿಕ್ ತೆಗೆದಿದ್ದಾರೆ.
ಈ ವೇಳೆ ಫೋಟೋ ಯುವಕರು ತೆಗೆಯುತ್ತಾರೆ. ಅಲ್ಲಿಗೆ ಸುಮ್ಮನಾಗದ ಕಿರಿಕ್ ಗುಂಪು ಯುವಕರಿಂದ ಕ್ಯಾಮೆರಾ ಕಬಳಿಸಿ ಹಲ್ಲೆ ಮಾಡಿದ್ದಲ್ಲದೆ, ಸೂರ್ಯ ಎದೆಯ ಭಾಗಕ್ಕೆ ಕೀ ಚೈನ್ ನಿಂದ ಚುಚ್ಚಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಲವಾದ ಪೆಟ್ಟು ಬಿದ್ದಿದ್ದರಿಂದ ಸೂರ್ಯ ಅಲ್ಲೇ ಕುಸಿದು ನಿತ್ರಾಣನಾಗಿದ್ದರಿಂದ ಆಸ್ಪತ್ರೆಗೆ ರವಾನೆ ಮಾಡಲಾಗುತ್ತದೆ. ಆದರೆ ತೀವ್ರ ರಕ್ತಸ್ರಾವ ಆಗಿದ್ದರಿಂದ ಸಾವನ್ನಪ್ಪುತ್ತಾನೆ ಎಂದು ತಿಳಿದು ಬಂದಿದೆ. ಆಸ್ಪತ್ರೆ ಬಳಿ ಮೃತ ಯುವಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಎಂ.ಆರ್.ಹರೀಶ್ ಹಾಗೂ ಸಿಬ್ಬಂದಿ ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ದೊಡ್ಡಬೆಳವಂಗಲ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…