ಫೋಟೋ ಶೂಟ್ ವಿಚಾರಕ್ಕೆ ಜಗಳವಾಗಿ, ಕುಡಿದ ಅಮಲಿನಲ್ಲಿ ಯವಕನನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನ ದೊಡ್ಡಬೆಳವಂಗಲ ಪೊಲೀಸರು ಬಂಧಿಸಿದ್ದಾರೆ.
ದೊಡ್ಡಬಳ್ಳಾಪುರ ನಗರದ ಕಛೇರಿಪಾಳ್ಯ ನಿವಾಸಿ ಸೂರ್ಯ(ಸೂರಿ) ಕೊಲೆಯಾಗಿದ್ದ ಯುವಕ. ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಮತ್ತು ಕೊಡಿಗೇಹಳ್ಳಿಯವರಾದ ದಿಲೀಪ್, ಅವಿನಾಶ್, ಕಿರಣ್ ಮತ್ತು ಜಗದೀಶ್ ಬಂಧಿತ ಆರೋಪಿಗಳು. ಮತ್ತೋರ್ವ ಆರೋಪಿಯ ಬಂಧನಕ್ಕೂ ದೊಡ್ಡಬೆಳವಂಗಲ ಪೊಲೀಸರು ಬಲೆ ಬೀಸಿದ್ದಾರೆ.
ನ.12ರ ಭಾನುವಾರ ಸಂಜೆ ತಾಲೂಕಿನ ರಾಮೇಶ್ವರ ಗೇಟ್ ಸಮೀಪವಿರುವ ಖಾಸಗಿ ಡಾಬಾವೊಂದರಲ್ಲಿ ಯುವಕರು ಫೋಟೋ ಶೂಟ್ ಮಾಡಿಕೊಳ್ಳುತ್ತಿರವಾಗ ಕಿಡಿಗೇಡಿಗಳ ಗುಂಪೊಂದು ಸ್ಥಳಕ್ಕೆ ಬಂದು ಬೇಕಂತಲೇ ಕಿರಿಕ್ ಮಾಡಿ ಸೂರ್ಯ(ಸೂರಿ) ಎಂಬ ಯುವಕನಿಗೆ ಥಳಿಸಿ, ಕೈಯಲ್ಲಿದ್ದ ಮೊನಚಾದ ವಸ್ತುವಿನಿಂದ ಹೃದಯ ಭಾಗಕ್ಕೆ ಇರಿದು ಕೊಲೆ ಮಾಡಲಾಗಿತ್ತು. ಇರಿತದ ರಭಸಕ್ಕೆ ಸುಮಾರು ಒಂದೂವರೆ ಇಂಚು ಯುವಕನ ಹೃದಯದೊಳಗೆ ಹೊಕ್ಕಿದೆ ಎನ್ನಲಾಗಿತ್ತು.
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…