ಡಾಬಾ ಬಳಿ ಯುವಕನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಫೋಟೋ ಶೂಟ್ ವಿಚಾರಕ್ಕೆ ಜಗಳವಾಗಿ, ಕುಡಿದ ಅಮಲಿನಲ್ಲಿ ಯವಕನನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನ ದೊಡ್ಡಬೆಳವಂಗಲ ಪೊಲೀಸರು ಬಂಧಿಸಿದ್ದಾರೆ.

ದೊಡ್ಡಬಳ್ಳಾಪುರ ನಗರದ ಕಛೇರಿಪಾಳ್ಯ ನಿವಾಸಿ ಸೂರ್ಯ(ಸೂರಿ) ಕೊಲೆಯಾಗಿದ್ದ ಯುವಕ. ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಮತ್ತು ಕೊಡಿಗೇಹಳ್ಳಿಯವರಾದ ದಿಲೀಪ್, ಅವಿನಾಶ್, ಕಿರಣ್ ಮತ್ತು ಜಗದೀಶ್ ಬಂಧಿತ ಆರೋಪಿಗಳು. ಮತ್ತೋರ್ವ ಆರೋಪಿಯ ಬಂಧನಕ್ಕೂ ದೊಡ್ಡಬೆಳವಂಗಲ ಪೊಲೀಸರು ಬಲೆ ಬೀಸಿದ್ದಾರೆ.

ನ.12ರ ಭಾನುವಾರ ಸಂಜೆ ತಾಲೂಕಿನ ರಾಮೇಶ್ವರ ಗೇಟ್ ಸಮೀಪವಿರುವ ಖಾಸಗಿ ಡಾಬಾವೊಂದರಲ್ಲಿ ಯುವಕರು ಫೋಟೋ‌ ಶೂಟ್ ಮಾಡಿಕೊಳ್ಳುತ್ತಿರವಾಗ ಕಿಡಿಗೇಡಿಗಳ ಗುಂಪೊಂದು ಸ್ಥಳಕ್ಕೆ ಬಂದು ಬೇಕಂತಲೇ ಕಿರಿಕ್ ಮಾಡಿ ಸೂರ್ಯ(ಸೂರಿ) ಎಂಬ ಯುವಕನಿಗೆ ಥಳಿಸಿ, ಕೈಯಲ್ಲಿದ್ದ ಮೊನಚಾದ ವಸ್ತುವಿನಿಂದ ಹೃದಯ ಭಾಗಕ್ಕೆ ಇರಿದು ಕೊಲೆ ಮಾಡಲಾಗಿತ್ತು. ಇರಿತದ ರಭಸಕ್ಕೆ ಸುಮಾರು ಒಂದೂವರೆ ಇಂಚು ಯುವಕ‌ನ ಹೃದಯದೊಳಗೆ ಹೊಕ್ಕಿದೆ ಎನ್ನಲಾಗಿತ್ತು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 hour ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

12 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

13 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

13 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

16 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

19 hours ago