ಡಾಬಾ ಬಳಿ ಯುವಕನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಫೋಟೋ ಶೂಟ್ ವಿಚಾರಕ್ಕೆ ಜಗಳವಾಗಿ, ಕುಡಿದ ಅಮಲಿನಲ್ಲಿ ಯವಕನನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನ ದೊಡ್ಡಬೆಳವಂಗಲ ಪೊಲೀಸರು ಬಂಧಿಸಿದ್ದಾರೆ.

ದೊಡ್ಡಬಳ್ಳಾಪುರ ನಗರದ ಕಛೇರಿಪಾಳ್ಯ ನಿವಾಸಿ ಸೂರ್ಯ(ಸೂರಿ) ಕೊಲೆಯಾಗಿದ್ದ ಯುವಕ. ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಮತ್ತು ಕೊಡಿಗೇಹಳ್ಳಿಯವರಾದ ದಿಲೀಪ್, ಅವಿನಾಶ್, ಕಿರಣ್ ಮತ್ತು ಜಗದೀಶ್ ಬಂಧಿತ ಆರೋಪಿಗಳು. ಮತ್ತೋರ್ವ ಆರೋಪಿಯ ಬಂಧನಕ್ಕೂ ದೊಡ್ಡಬೆಳವಂಗಲ ಪೊಲೀಸರು ಬಲೆ ಬೀಸಿದ್ದಾರೆ.

ನ.12ರ ಭಾನುವಾರ ಸಂಜೆ ತಾಲೂಕಿನ ರಾಮೇಶ್ವರ ಗೇಟ್ ಸಮೀಪವಿರುವ ಖಾಸಗಿ ಡಾಬಾವೊಂದರಲ್ಲಿ ಯುವಕರು ಫೋಟೋ‌ ಶೂಟ್ ಮಾಡಿಕೊಳ್ಳುತ್ತಿರವಾಗ ಕಿಡಿಗೇಡಿಗಳ ಗುಂಪೊಂದು ಸ್ಥಳಕ್ಕೆ ಬಂದು ಬೇಕಂತಲೇ ಕಿರಿಕ್ ಮಾಡಿ ಸೂರ್ಯ(ಸೂರಿ) ಎಂಬ ಯುವಕನಿಗೆ ಥಳಿಸಿ, ಕೈಯಲ್ಲಿದ್ದ ಮೊನಚಾದ ವಸ್ತುವಿನಿಂದ ಹೃದಯ ಭಾಗಕ್ಕೆ ಇರಿದು ಕೊಲೆ ಮಾಡಲಾಗಿತ್ತು. ಇರಿತದ ರಭಸಕ್ಕೆ ಸುಮಾರು ಒಂದೂವರೆ ಇಂಚು ಯುವಕ‌ನ ಹೃದಯದೊಳಗೆ ಹೊಕ್ಕಿದೆ ಎನ್ನಲಾಗಿತ್ತು.

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

9 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

9 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

12 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

2 days ago