ನ.12ರ ಭಾನುವಾರ ಸಂಜೆ ತಾಲೂಕಿನ ರಾಮೇಶ್ವರ ಗೇಟ್ ಸಮೀಪವಿರುವ ಖಾಸಗಿ ಡಾಬಾವೊಂದರಲ್ಲಿ ಯುವಕರು ಫೋಟೋ ಶೂಟ್ ಮಾಡಿಕೊಳ್ಳುತ್ತಿರವಾಗ ಕಿಡಿಗೇಡಿಗಳ ಗುಂಪೊಂದು ಸ್ಥಳಕ್ಕೆ ಬಂದು ಬೇಕಂತಲೇ ಕಿರಿಕ್ ಮಾಡಿ ಸೂರ್ಯ(ಸೂರಿ) ಎಂಬ ಯುವಕನಿಗೆ ಥಳಿಸಿ, ಕೈಯಲ್ಲಿದ್ದ ಮೊನಚಾದ ವಸ್ತುವಿನಿಂದ ಹೃದಯ ಭಾಗಕ್ಕೆ ಇರಿದು ಕೊಲೆ ಮಾಡಲಾಗಿತ್ತು. ಇರಿತದ ರಭಸಕ್ಕೆ ಸುಮಾರು ಒಂದೂವರೆ ಇಂಚು ಯುವಕನ ಹೃದಯದೊಳಗೆ ಹೊಕ್ಕಿದೆ ಎನ್ನಲಾಗಿದೆ.
ಘಟನೆ ವಿವರ
ಕೊಲೆಗೀಡಾದ ಯುವಕ ಸೂರ್ಯನಿಗೆ ಫೋಟೋಗ್ರಾಫಿಯ ಹವ್ಯಾಸ ಇತ್ತು, ನಿನ್ನೆ ಪ್ರಿವೆಡ್ಡಿಂಗ್ ಶೂಟ್ ಮಾಡಲು ಸ್ನೇಹಿತರಿಂದ ಕ್ಯಾಮೆರಾ ತೆಗೆದುಕೊಂಡು ಬಂದಿದ್ದ, ಪ್ರಿವೆಂಡ್ಡಿಂಗ್ ಶೂಟ್ ಮುಗಿದ ನಂತರ ತನ್ನ ಸ್ನೇಹಿತರ ಜೊತೆ ಫೋಟೋ ಶೂಟ್ ಮಾಡಲು ಎ ಡಾರ್ಕ್ ಫ್ಯಾಮಿಲಿ ರೆಸ್ಟೋರೆಂಟ್ ಗೆ ಬಂದಿದ್ದ, ರೆಸ್ಟೋರೆಂಟ್ ಮುಂಭಾಗದಲ್ಲಿನ ಸೀನರಿಯ ಮುಂದೆ ಫೋಟೋ ಶೂಟ್ ಮಾಡುವಾಗ, ಮದ್ಯ ಸೇವನೆಗೆಂದು ಬಂದಿದ್ದ ದಿಲೀಪ್ ಮತ್ತು ಆತನ ಸ್ನೇಹಿತರು ಡಾಬಾದಿಂದ ಹೊರಗೆ ಬಂದಿದ್ದಾರೆ, ದಿಲೀಪ್ ಮತ್ತು ಆತನ ಗ್ಯಾಂಗ್ ತಮ್ಮ ಫೋಟೋ ಹಿಡಿಯುವಂತೆ ಸೂರ್ಯನಿಗೆ ಹೇಳಿದ್ದಾರೆ, ಸೂರ್ಯ ಅವರ ಫೋಟೋಗಳನ್ನ ಸೆರೆ ಹಿಡಿದಿದ್ದಾನೆ, ತೆಗೆದ ಫೋಟೋಗಳನ್ನ ಮೊಬೈಲ್ ಗೆ ಕಳಿಸೆಂದು ದಿಲೀಪ್ ಗ್ಯಾಂಗ್ ನಲ್ಲಿದ್ದ ಒಬ್ಬ ಹೇಳಿದ್ದಾನೆ. ಕ್ಯಾಮೆರಾದಿಂದ ಮೊಬೈಲ್ ಗೆ ಫೋಟೋ ಕಳಿಸಲು ಆಗೋದಿಲ್ಲ ಎಂದೇಳಿದ್ದಾನೆ , ಇಷ್ಟಕ್ಕೆ ಕೋಪಗೊಂಡ ದಿಲೀಪ ಸೂರ್ಯನ ಕೈಯಿಂದ ಕ್ಯಾಮೆರಾ ಕಿತ್ತುಕೊಂಡಿದ್ದಾನೆ. ಇದರಿಂದ ಕೆರಳಿದ ಸೂರ್ಯ ದಿಲೀಪನ ಕುತ್ತಿಗೆ ಪಟ್ಟಿಯನ್ನ ಹಿಡಿದುಕೊಂಡಿದ್ದಾನೆ, ಈ ವೇಳೆ ದಿಲೀಪ ತನ್ನ ಕೈಯಲ್ಲಿದ್ದ ಚುಪಾದ ವಸ್ತುವಿನಿಂದ ಎದೆಗೆ ಚುಚ್ಚಿದ್ದಾನೆ, ಎದೆಯನ್ನ ಹಿಡಿದುಕೊಂಡ ಸೂರ್ಯ ಅಲ್ಲಿಯೇ ಕುಸಿದು ಬಿದ್ದಿದ್ದಾನೆ, ತಕ್ಷಣವೇ ಆಸ್ಪತ್ರೆಗೆ ಸೂರ್ಯನನ್ನ ಸಾಗಿಸಲಾಯಿತು, ಆದರೆ ತೀರ್ವ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾನೆ.
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…