ನ.12ರ ಭಾನುವಾರ ಸಂಜೆ ತಾಲೂಕಿನ ರಾಮೇಶ್ವರ ಗೇಟ್ ಸಮೀಪವಿರುವ ಖಾಸಗಿ ಡಾಬಾವೊಂದರಲ್ಲಿ ಯುವಕರು ಫೋಟೋ ಶೂಟ್ ಮಾಡಿಕೊಳ್ಳುತ್ತಿರವಾಗ ಕಿಡಿಗೇಡಿಗಳ ಗುಂಪೊಂದು ಸ್ಥಳಕ್ಕೆ ಬಂದು ಬೇಕಂತಲೇ ಕಿರಿಕ್ ಮಾಡಿ ಸೂರ್ಯ(ಸೂರಿ) ಎಂಬ ಯುವಕನಿಗೆ ಥಳಿಸಿ, ಕೈಯಲ್ಲಿದ್ದ ಮೊನಚಾದ ವಸ್ತುವಿನಿಂದ ಹೃದಯ ಭಾಗಕ್ಕೆ ಇರಿದು ಕೊಲೆ ಮಾಡಲಾಗಿತ್ತು. ಇರಿತದ ರಭಸಕ್ಕೆ ಸುಮಾರು ಒಂದೂವರೆ ಇಂಚು ಯುವಕನ ಹೃದಯದೊಳಗೆ ಹೊಕ್ಕಿದೆ ಎನ್ನಲಾಗಿದೆ.
ಘಟನೆ ವಿವರ
ಕೊಲೆಗೀಡಾದ ಯುವಕ ಸೂರ್ಯನಿಗೆ ಫೋಟೋಗ್ರಾಫಿಯ ಹವ್ಯಾಸ ಇತ್ತು, ನಿನ್ನೆ ಪ್ರಿವೆಡ್ಡಿಂಗ್ ಶೂಟ್ ಮಾಡಲು ಸ್ನೇಹಿತರಿಂದ ಕ್ಯಾಮೆರಾ ತೆಗೆದುಕೊಂಡು ಬಂದಿದ್ದ, ಪ್ರಿವೆಂಡ್ಡಿಂಗ್ ಶೂಟ್ ಮುಗಿದ ನಂತರ ತನ್ನ ಸ್ನೇಹಿತರ ಜೊತೆ ಫೋಟೋ ಶೂಟ್ ಮಾಡಲು ಎ ಡಾರ್ಕ್ ಫ್ಯಾಮಿಲಿ ರೆಸ್ಟೋರೆಂಟ್ ಗೆ ಬಂದಿದ್ದ, ರೆಸ್ಟೋರೆಂಟ್ ಮುಂಭಾಗದಲ್ಲಿನ ಸೀನರಿಯ ಮುಂದೆ ಫೋಟೋ ಶೂಟ್ ಮಾಡುವಾಗ, ಮದ್ಯ ಸೇವನೆಗೆಂದು ಬಂದಿದ್ದ ದಿಲೀಪ್ ಮತ್ತು ಆತನ ಸ್ನೇಹಿತರು ಡಾಬಾದಿಂದ ಹೊರಗೆ ಬಂದಿದ್ದಾರೆ, ದಿಲೀಪ್ ಮತ್ತು ಆತನ ಗ್ಯಾಂಗ್ ತಮ್ಮ ಫೋಟೋ ಹಿಡಿಯುವಂತೆ ಸೂರ್ಯನಿಗೆ ಹೇಳಿದ್ದಾರೆ, ಸೂರ್ಯ ಅವರ ಫೋಟೋಗಳನ್ನ ಸೆರೆ ಹಿಡಿದಿದ್ದಾನೆ, ತೆಗೆದ ಫೋಟೋಗಳನ್ನ ಮೊಬೈಲ್ ಗೆ ಕಳಿಸೆಂದು ದಿಲೀಪ್ ಗ್ಯಾಂಗ್ ನಲ್ಲಿದ್ದ ಒಬ್ಬ ಹೇಳಿದ್ದಾನೆ. ಕ್ಯಾಮೆರಾದಿಂದ ಮೊಬೈಲ್ ಗೆ ಫೋಟೋ ಕಳಿಸಲು ಆಗೋದಿಲ್ಲ ಎಂದೇಳಿದ್ದಾನೆ , ಇಷ್ಟಕ್ಕೆ ಕೋಪಗೊಂಡ ದಿಲೀಪ ಸೂರ್ಯನ ಕೈಯಿಂದ ಕ್ಯಾಮೆರಾ ಕಿತ್ತುಕೊಂಡಿದ್ದಾನೆ. ಇದರಿಂದ ಕೆರಳಿದ ಸೂರ್ಯ ದಿಲೀಪನ ಕುತ್ತಿಗೆ ಪಟ್ಟಿಯನ್ನ ಹಿಡಿದುಕೊಂಡಿದ್ದಾನೆ, ಈ ವೇಳೆ ದಿಲೀಪ ತನ್ನ ಕೈಯಲ್ಲಿದ್ದ ಚುಪಾದ ವಸ್ತುವಿನಿಂದ ಎದೆಗೆ ಚುಚ್ಚಿದ್ದಾನೆ, ಎದೆಯನ್ನ ಹಿಡಿದುಕೊಂಡ ಸೂರ್ಯ ಅಲ್ಲಿಯೇ ಕುಸಿದು ಬಿದ್ದಿದ್ದಾನೆ, ತಕ್ಷಣವೇ ಆಸ್ಪತ್ರೆಗೆ ಸೂರ್ಯನನ್ನ ಸಾಗಿಸಲಾಯಿತು, ಆದರೆ ತೀರ್ವ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾನೆ.
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…