ನ.12ರ ಭಾನುವಾರ ಸಂಜೆ ತಾಲೂಕಿನ ರಾಮೇಶ್ವರ ಗೇಟ್ ಸಮೀಪವಿರುವ ಖಾಸಗಿ ಡಾಬಾವೊಂದರಲ್ಲಿ ಯುವಕರು ಫೋಟೋ ಶೂಟ್ ಮಾಡಿಕೊಳ್ಳುತ್ತಿರವಾಗ ಕಿಡಿಗೇಡಿಗಳ ಗುಂಪೊಂದು ಸ್ಥಳಕ್ಕೆ ಬಂದು ಬೇಕಂತಲೇ ಕಿರಿಕ್ ಮಾಡಿ ಸೂರ್ಯ(ಸೂರಿ) ಎಂಬ ಯುವಕನಿಗೆ ಥಳಿಸಿ, ಕೈಯಲ್ಲಿದ್ದ ಮೊನಚಾದ ವಸ್ತುವಿನಿಂದ ಹೃದಯ ಭಾಗಕ್ಕೆ ಇರಿದು ಕೊಲೆ ಮಾಡಲಾಗಿತ್ತು. ಇರಿತದ ರಭಸಕ್ಕೆ ಸುಮಾರು ಒಂದೂವರೆ ಇಂಚು ಯುವಕನ ಹೃದಯದೊಳಗೆ ಹೊಕ್ಕಿದೆ ಎನ್ನಲಾಗಿದೆ.
ಘಟನೆ ವಿವರ
ಕೊಲೆಗೀಡಾದ ಯುವಕ ಸೂರ್ಯನಿಗೆ ಫೋಟೋಗ್ರಾಫಿಯ ಹವ್ಯಾಸ ಇತ್ತು, ನಿನ್ನೆ ಪ್ರಿವೆಡ್ಡಿಂಗ್ ಶೂಟ್ ಮಾಡಲು ಸ್ನೇಹಿತರಿಂದ ಕ್ಯಾಮೆರಾ ತೆಗೆದುಕೊಂಡು ಬಂದಿದ್ದ, ಪ್ರಿವೆಂಡ್ಡಿಂಗ್ ಶೂಟ್ ಮುಗಿದ ನಂತರ ತನ್ನ ಸ್ನೇಹಿತರ ಜೊತೆ ಫೋಟೋ ಶೂಟ್ ಮಾಡಲು ಎ ಡಾರ್ಕ್ ಫ್ಯಾಮಿಲಿ ರೆಸ್ಟೋರೆಂಟ್ ಗೆ ಬಂದಿದ್ದ, ರೆಸ್ಟೋರೆಂಟ್ ಮುಂಭಾಗದಲ್ಲಿನ ಸೀನರಿಯ ಮುಂದೆ ಫೋಟೋ ಶೂಟ್ ಮಾಡುವಾಗ, ಮದ್ಯ ಸೇವನೆಗೆಂದು ಬಂದಿದ್ದ ದಿಲೀಪ್ ಮತ್ತು ಆತನ ಸ್ನೇಹಿತರು ಡಾಬಾದಿಂದ ಹೊರಗೆ ಬಂದಿದ್ದಾರೆ, ದಿಲೀಪ್ ಮತ್ತು ಆತನ ಗ್ಯಾಂಗ್ ತಮ್ಮ ಫೋಟೋ ಹಿಡಿಯುವಂತೆ ಸೂರ್ಯನಿಗೆ ಹೇಳಿದ್ದಾರೆ, ಸೂರ್ಯ ಅವರ ಫೋಟೋಗಳನ್ನ ಸೆರೆ ಹಿಡಿದಿದ್ದಾನೆ, ತೆಗೆದ ಫೋಟೋಗಳನ್ನ ಮೊಬೈಲ್ ಗೆ ಕಳಿಸೆಂದು ದಿಲೀಪ್ ಗ್ಯಾಂಗ್ ನಲ್ಲಿದ್ದ ಒಬ್ಬ ಹೇಳಿದ್ದಾನೆ. ಕ್ಯಾಮೆರಾದಿಂದ ಮೊಬೈಲ್ ಗೆ ಫೋಟೋ ಕಳಿಸಲು ಆಗೋದಿಲ್ಲ ಎಂದೇಳಿದ್ದಾನೆ , ಇಷ್ಟಕ್ಕೆ ಕೋಪಗೊಂಡ ದಿಲೀಪ ಸೂರ್ಯನ ಕೈಯಿಂದ ಕ್ಯಾಮೆರಾ ಕಿತ್ತುಕೊಂಡಿದ್ದಾನೆ. ಇದರಿಂದ ಕೆರಳಿದ ಸೂರ್ಯ ದಿಲೀಪನ ಕುತ್ತಿಗೆ ಪಟ್ಟಿಯನ್ನ ಹಿಡಿದುಕೊಂಡಿದ್ದಾನೆ, ಈ ವೇಳೆ ದಿಲೀಪ ತನ್ನ ಕೈಯಲ್ಲಿದ್ದ ಚುಪಾದ ವಸ್ತುವಿನಿಂದ ಎದೆಗೆ ಚುಚ್ಚಿದ್ದಾನೆ, ಎದೆಯನ್ನ ಹಿಡಿದುಕೊಂಡ ಸೂರ್ಯ ಅಲ್ಲಿಯೇ ಕುಸಿದು ಬಿದ್ದಿದ್ದಾನೆ, ತಕ್ಷಣವೇ ಆಸ್ಪತ್ರೆಗೆ ಸೂರ್ಯನನ್ನ ಸಾಗಿಸಲಾಯಿತು, ಆದರೆ ತೀರ್ವ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾನೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…