ನ.12ರ ಭಾನುವಾರ ಸಂಜೆ ತಾಲೂಕಿನ ರಾಮೇಶ್ವರ ಗೇಟ್ ಸಮೀಪವಿರುವ ಖಾಸಗಿ ಡಾಬಾವೊಂದರಲ್ಲಿ ಯುವಕರು ಫೋಟೋ ಶೂಟ್ ಮಾಡಿಕೊಳ್ಳುತ್ತಿರವಾಗ ಕಿಡಿಗೇಡಿಗಳ ಗುಂಪೊಂದು ಸ್ಥಳಕ್ಕೆ ಬಂದು ಬೇಕಂತಲೇ ಕಿರಿಕ್ ಮಾಡಿ ಸೂರ್ಯ(ಸೂರಿ) ಎಂಬ ಯುವಕನಿಗೆ ಥಳಿಸಿ, ಕೈಯಲ್ಲಿದ್ದ ಮೊನಚಾದ ವಸ್ತುವಿನಿಂದ ಹೃದಯ ಭಾಗಕ್ಕೆ ಇರಿದು ಕೊಲೆ ಮಾಡಲಾಗಿತ್ತು. ಇರಿತದ ರಭಸಕ್ಕೆ ಸುಮಾರು ಒಂದೂವರೆ ಇಂಚು ಯುವಕನ ಹೃದಯದೊಳಗೆ ಹೊಕ್ಕಿದೆ ಎನ್ನಲಾಗಿದೆ.
ಘಟನೆ ವಿವರ
ಕೊಲೆಗೀಡಾದ ಯುವಕ ಸೂರ್ಯನಿಗೆ ಫೋಟೋಗ್ರಾಫಿಯ ಹವ್ಯಾಸ ಇತ್ತು, ನಿನ್ನೆ ಪ್ರಿವೆಡ್ಡಿಂಗ್ ಶೂಟ್ ಮಾಡಲು ಸ್ನೇಹಿತರಿಂದ ಕ್ಯಾಮೆರಾ ತೆಗೆದುಕೊಂಡು ಬಂದಿದ್ದ, ಪ್ರಿವೆಂಡ್ಡಿಂಗ್ ಶೂಟ್ ಮುಗಿದ ನಂತರ ತನ್ನ ಸ್ನೇಹಿತರ ಜೊತೆ ಫೋಟೋ ಶೂಟ್ ಮಾಡಲು ಎ ಡಾರ್ಕ್ ಫ್ಯಾಮಿಲಿ ರೆಸ್ಟೋರೆಂಟ್ ಗೆ ಬಂದಿದ್ದ, ರೆಸ್ಟೋರೆಂಟ್ ಮುಂಭಾಗದಲ್ಲಿನ ಸೀನರಿಯ ಮುಂದೆ ಫೋಟೋ ಶೂಟ್ ಮಾಡುವಾಗ, ಮದ್ಯ ಸೇವನೆಗೆಂದು ಬಂದಿದ್ದ ದಿಲೀಪ್ ಮತ್ತು ಆತನ ಸ್ನೇಹಿತರು ಡಾಬಾದಿಂದ ಹೊರಗೆ ಬಂದಿದ್ದಾರೆ, ದಿಲೀಪ್ ಮತ್ತು ಆತನ ಗ್ಯಾಂಗ್ ತಮ್ಮ ಫೋಟೋ ಹಿಡಿಯುವಂತೆ ಸೂರ್ಯನಿಗೆ ಹೇಳಿದ್ದಾರೆ, ಸೂರ್ಯ ಅವರ ಫೋಟೋಗಳನ್ನ ಸೆರೆ ಹಿಡಿದಿದ್ದಾನೆ, ತೆಗೆದ ಫೋಟೋಗಳನ್ನ ಮೊಬೈಲ್ ಗೆ ಕಳಿಸೆಂದು ದಿಲೀಪ್ ಗ್ಯಾಂಗ್ ನಲ್ಲಿದ್ದ ಒಬ್ಬ ಹೇಳಿದ್ದಾನೆ. ಕ್ಯಾಮೆರಾದಿಂದ ಮೊಬೈಲ್ ಗೆ ಫೋಟೋ ಕಳಿಸಲು ಆಗೋದಿಲ್ಲ ಎಂದೇಳಿದ್ದಾನೆ , ಇಷ್ಟಕ್ಕೆ ಕೋಪಗೊಂಡ ದಿಲೀಪ ಸೂರ್ಯನ ಕೈಯಿಂದ ಕ್ಯಾಮೆರಾ ಕಿತ್ತುಕೊಂಡಿದ್ದಾನೆ. ಇದರಿಂದ ಕೆರಳಿದ ಸೂರ್ಯ ದಿಲೀಪನ ಕುತ್ತಿಗೆ ಪಟ್ಟಿಯನ್ನ ಹಿಡಿದುಕೊಂಡಿದ್ದಾನೆ, ಈ ವೇಳೆ ದಿಲೀಪ ತನ್ನ ಕೈಯಲ್ಲಿದ್ದ ಚುಪಾದ ವಸ್ತುವಿನಿಂದ ಎದೆಗೆ ಚುಚ್ಚಿದ್ದಾನೆ, ಎದೆಯನ್ನ ಹಿಡಿದುಕೊಂಡ ಸೂರ್ಯ ಅಲ್ಲಿಯೇ ಕುಸಿದು ಬಿದ್ದಿದ್ದಾನೆ, ತಕ್ಷಣವೇ ಆಸ್ಪತ್ರೆಗೆ ಸೂರ್ಯನನ್ನ ಸಾಗಿಸಲಾಯಿತು, ಆದರೆ ತೀರ್ವ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾನೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…