ನ.12ರ ಭಾನುವಾರ ಸಂಜೆ ತಾಲೂಕಿನ ರಾಮೇಶ್ವರ ಗೇಟ್ ಸಮೀಪವಿರುವ ಖಾಸಗಿ ಡಾಬಾವೊಂದರಲ್ಲಿ ಯುವಕರು ಫೋಟೋ ಶೂಟ್ ಮಾಡಿಕೊಳ್ಳುತ್ತಿರವಾಗ ಕಿಡಿಗೇಡಿಗಳ ಗುಂಪೊಂದು ಸ್ಥಳಕ್ಕೆ ಬಂದು ಬೇಕಂತಲೇ ಕಿರಿಕ್ ಮಾಡಿ ಸೂರ್ಯ(ಸೂರಿ) ಎಂಬ ಯುವಕನಿಗೆ ಥಳಿಸಿ, ಕೈಯಲ್ಲಿದ್ದ ಮೊನಚಾದ ವಸ್ತುವಿನಿಂದ ಹೃದಯ ಭಾಗಕ್ಕೆ ಇರಿದು ಕೊಲೆ ಮಾಡಲಾಗಿತ್ತು. ಇರಿತದ ರಭಸಕ್ಕೆ ಸುಮಾರು ಒಂದೂವರೆ ಇಂಚು ಯುವಕನ ಹೃದಯದೊಳಗೆ ಹೊಕ್ಕಿದೆ ಎನ್ನಲಾಗಿದೆ.
ಘಟನೆ ವಿವರ
ಕೊಲೆಗೀಡಾದ ಯುವಕ ಸೂರ್ಯನಿಗೆ ಫೋಟೋಗ್ರಾಫಿಯ ಹವ್ಯಾಸ ಇತ್ತು, ನಿನ್ನೆ ಪ್ರಿವೆಡ್ಡಿಂಗ್ ಶೂಟ್ ಮಾಡಲು ಸ್ನೇಹಿತರಿಂದ ಕ್ಯಾಮೆರಾ ತೆಗೆದುಕೊಂಡು ಬಂದಿದ್ದ, ಪ್ರಿವೆಂಡ್ಡಿಂಗ್ ಶೂಟ್ ಮುಗಿದ ನಂತರ ತನ್ನ ಸ್ನೇಹಿತರ ಜೊತೆ ಫೋಟೋ ಶೂಟ್ ಮಾಡಲು ಎ ಡಾರ್ಕ್ ಫ್ಯಾಮಿಲಿ ರೆಸ್ಟೋರೆಂಟ್ ಗೆ ಬಂದಿದ್ದ, ರೆಸ್ಟೋರೆಂಟ್ ಮುಂಭಾಗದಲ್ಲಿನ ಸೀನರಿಯ ಮುಂದೆ ಫೋಟೋ ಶೂಟ್ ಮಾಡುವಾಗ, ಮದ್ಯ ಸೇವನೆಗೆಂದು ಬಂದಿದ್ದ ದಿಲೀಪ್ ಮತ್ತು ಆತನ ಸ್ನೇಹಿತರು ಡಾಬಾದಿಂದ ಹೊರಗೆ ಬಂದಿದ್ದಾರೆ, ದಿಲೀಪ್ ಮತ್ತು ಆತನ ಗ್ಯಾಂಗ್ ತಮ್ಮ ಫೋಟೋ ಹಿಡಿಯುವಂತೆ ಸೂರ್ಯನಿಗೆ ಹೇಳಿದ್ದಾರೆ, ಸೂರ್ಯ ಅವರ ಫೋಟೋಗಳನ್ನ ಸೆರೆ ಹಿಡಿದಿದ್ದಾನೆ, ತೆಗೆದ ಫೋಟೋಗಳನ್ನ ಮೊಬೈಲ್ ಗೆ ಕಳಿಸೆಂದು ದಿಲೀಪ್ ಗ್ಯಾಂಗ್ ನಲ್ಲಿದ್ದ ಒಬ್ಬ ಹೇಳಿದ್ದಾನೆ. ಕ್ಯಾಮೆರಾದಿಂದ ಮೊಬೈಲ್ ಗೆ ಫೋಟೋ ಕಳಿಸಲು ಆಗೋದಿಲ್ಲ ಎಂದೇಳಿದ್ದಾನೆ , ಇಷ್ಟಕ್ಕೆ ಕೋಪಗೊಂಡ ದಿಲೀಪ ಸೂರ್ಯನ ಕೈಯಿಂದ ಕ್ಯಾಮೆರಾ ಕಿತ್ತುಕೊಂಡಿದ್ದಾನೆ. ಇದರಿಂದ ಕೆರಳಿದ ಸೂರ್ಯ ದಿಲೀಪನ ಕುತ್ತಿಗೆ ಪಟ್ಟಿಯನ್ನ ಹಿಡಿದುಕೊಂಡಿದ್ದಾನೆ, ಈ ವೇಳೆ ದಿಲೀಪ ತನ್ನ ಕೈಯಲ್ಲಿದ್ದ ಚುಪಾದ ವಸ್ತುವಿನಿಂದ ಎದೆಗೆ ಚುಚ್ಚಿದ್ದಾನೆ, ಎದೆಯನ್ನ ಹಿಡಿದುಕೊಂಡ ಸೂರ್ಯ ಅಲ್ಲಿಯೇ ಕುಸಿದು ಬಿದ್ದಿದ್ದಾನೆ, ತಕ್ಷಣವೇ ಆಸ್ಪತ್ರೆಗೆ ಸೂರ್ಯನನ್ನ ಸಾಗಿಸಲಾಯಿತು, ಆದರೆ ತೀರ್ವ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾನೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…