ನ.12ರ ಭಾನುವಾರ ಸಂಜೆ ತಾಲೂಕಿನ ರಾಮೇಶ್ವರ ಗೇಟ್ ಸಮೀಪವಿರುವ ಖಾಸಗಿ ಡಾಬಾವೊಂದರಲ್ಲಿ ಯುವಕರು ಫೋಟೋ ಶೂಟ್ ಮಾಡಿಕೊಳ್ಳುತ್ತಿರವಾಗ ಕಿಡಿಗೇಡಿಗಳ ಗುಂಪೊಂದು ಸ್ಥಳಕ್ಕೆ ಬಂದು ಬೇಕಂತಲೇ ಕಿರಿಕ್ ಮಾಡಿ ಸೂರ್ಯ(ಸೂರಿ) ಎಂಬ ಯುವಕನಿಗೆ ಥಳಿಸಿ, ಕೈಯಲ್ಲಿದ್ದ ಮೊನಚಾದ ವಸ್ತುವಿನಿಂದ ಹೃದಯ ಭಾಗಕ್ಕೆ ಇರಿದು ಕೊಲೆ ಮಾಡಲಾಗಿತ್ತು. ಇರಿತದ ರಭಸಕ್ಕೆ ಸುಮಾರು ಒಂದೂವರೆ ಇಂಚು ಯುವಕನ ಹೃದಯದೊಳಗೆ ಹೊಕ್ಕಿದೆ ಎನ್ನಲಾಗಿದೆ.
ಘಟನೆ ವಿವರ
ಕೊಲೆಗೀಡಾದ ಯುವಕ ಸೂರ್ಯನಿಗೆ ಫೋಟೋಗ್ರಾಫಿಯ ಹವ್ಯಾಸ ಇತ್ತು, ನಿನ್ನೆ ಪ್ರಿವೆಡ್ಡಿಂಗ್ ಶೂಟ್ ಮಾಡಲು ಸ್ನೇಹಿತರಿಂದ ಕ್ಯಾಮೆರಾ ತೆಗೆದುಕೊಂಡು ಬಂದಿದ್ದ, ಪ್ರಿವೆಂಡ್ಡಿಂಗ್ ಶೂಟ್ ಮುಗಿದ ನಂತರ ತನ್ನ ಸ್ನೇಹಿತರ ಜೊತೆ ಫೋಟೋ ಶೂಟ್ ಮಾಡಲು ಎ ಡಾರ್ಕ್ ಫ್ಯಾಮಿಲಿ ರೆಸ್ಟೋರೆಂಟ್ ಗೆ ಬಂದಿದ್ದ, ರೆಸ್ಟೋರೆಂಟ್ ಮುಂಭಾಗದಲ್ಲಿನ ಸೀನರಿಯ ಮುಂದೆ ಫೋಟೋ ಶೂಟ್ ಮಾಡುವಾಗ, ಮದ್ಯ ಸೇವನೆಗೆಂದು ಬಂದಿದ್ದ ದಿಲೀಪ್ ಮತ್ತು ಆತನ ಸ್ನೇಹಿತರು ಡಾಬಾದಿಂದ ಹೊರಗೆ ಬಂದಿದ್ದಾರೆ, ದಿಲೀಪ್ ಮತ್ತು ಆತನ ಗ್ಯಾಂಗ್ ತಮ್ಮ ಫೋಟೋ ಹಿಡಿಯುವಂತೆ ಸೂರ್ಯನಿಗೆ ಹೇಳಿದ್ದಾರೆ, ಸೂರ್ಯ ಅವರ ಫೋಟೋಗಳನ್ನ ಸೆರೆ ಹಿಡಿದಿದ್ದಾನೆ, ತೆಗೆದ ಫೋಟೋಗಳನ್ನ ಮೊಬೈಲ್ ಗೆ ಕಳಿಸೆಂದು ದಿಲೀಪ್ ಗ್ಯಾಂಗ್ ನಲ್ಲಿದ್ದ ಒಬ್ಬ ಹೇಳಿದ್ದಾನೆ. ಕ್ಯಾಮೆರಾದಿಂದ ಮೊಬೈಲ್ ಗೆ ಫೋಟೋ ಕಳಿಸಲು ಆಗೋದಿಲ್ಲ ಎಂದೇಳಿದ್ದಾನೆ , ಇಷ್ಟಕ್ಕೆ ಕೋಪಗೊಂಡ ದಿಲೀಪ ಸೂರ್ಯನ ಕೈಯಿಂದ ಕ್ಯಾಮೆರಾ ಕಿತ್ತುಕೊಂಡಿದ್ದಾನೆ. ಇದರಿಂದ ಕೆರಳಿದ ಸೂರ್ಯ ದಿಲೀಪನ ಕುತ್ತಿಗೆ ಪಟ್ಟಿಯನ್ನ ಹಿಡಿದುಕೊಂಡಿದ್ದಾನೆ, ಈ ವೇಳೆ ದಿಲೀಪ ತನ್ನ ಕೈಯಲ್ಲಿದ್ದ ಚುಪಾದ ವಸ್ತುವಿನಿಂದ ಎದೆಗೆ ಚುಚ್ಚಿದ್ದಾನೆ, ಎದೆಯನ್ನ ಹಿಡಿದುಕೊಂಡ ಸೂರ್ಯ ಅಲ್ಲಿಯೇ ಕುಸಿದು ಬಿದ್ದಿದ್ದಾನೆ, ತಕ್ಷಣವೇ ಆಸ್ಪತ್ರೆಗೆ ಸೂರ್ಯನನ್ನ ಸಾಗಿಸಲಾಯಿತು, ಆದರೆ ತೀರ್ವ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾನೆ.
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…