Categories: ಸಿನಿಮಾ

ಡಾಲಿ ಧನಂಜಯ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ಹಸಮಣೆ ಏರಲಿರುವ ಡಾಲಿ: ತಮ್ಮ ಬಾಳ ಸಂಗಾತಿಯನ್ನು ಸೋಷಿಯಲ್ ಮೀಡಿಯಾ ಮೂಲಕ ಪರಿಚಯ

ನಟ ಡಾಲಿ ಧನಂಜಯ್ ಅವರು ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ವೈಯಕ್ತಿಕ ಜೀವನದಲ್ಲಿ ವಿವಾಹ ಬಂಧನಕ್ಕೊಳಗಾಗುತ್ತಿದ್ದು, ತಮ್ಮ ಬಾಳ ಸಂಗಾತಿಯನ್ನು ಸೋಷಿಯಲ್ ಮೀಡಿಯಾ ಮೂಲಕ ಧನಂಜಯ್ ಪರಿಚಯಿಸಿದ್ದಾರೆ.

ಮುಂದಿನ ವರ್ಷ ಫೆಬ್ರವರಿ 16ರಂದು ಮದುವೆ ನಡೆಯಲಿದೆ. ಧನಂಜಯ್ ಅವರು ವೈದ್ಯೆಯನ್ನು ಮದುವೆಯಾಗುತ್ತಿರುವುದನ್ನ ಖಚಿತಪಡಿಸಿದ್ದಾರೆ.

ಹುಡುಗಿಯ ಹೆಸರು ಧನ್ಯತಾ. ಸ್ತ್ರೀರೋಗ ತಜ್ಞೆ ಧನ್ಯತಾ ಮತ್ತು ಡಾಲಿ ಅನೇಕ ವರ್ಷಗಳಿಂದ ಪರಿಚಿತರು. ಇದೀಗ ಮನೆಯವರ ಒಪ್ಪಿಗೆ ಪಡೆದು ಹಸೆಮಣೆ ಏರಲು ಸಿದ್ಧವಾಗಿದ್ದಾರೆ.

ಭಾವಿ ಪತ್ನಿ ಜೊತೆಗಿನ ಸುಂದರವಾದ ವಿಡೀಯೋವನ್ನ ಅವರು ಹಂಚಿಕೊಂಡಿದ್ದಾರೆ. ಧನ್ಯತಾ ಚಿತ್ರದುರ್ಗ ಮೂಲದವರು. ಓದಿದ್ದು ಮೈಸೂರಿನಲ್ಲಿ. ಸದ್ಯ ಶೇರ್ ಮಾಡಿರುವ ವಿಡಿಯೋದಲ್ಲಿ ಧನಂಜಯ್ ಅವರು ಭಾವಿ ಪತ್ನಿಗೆ ಸುಂದರ ಸಾಲುಗಳನ್ನು ಕೂಡ ಬರೆದಿದ್ದಾರೆ.

ಪ್ರೀತಿಯ ಕರುನಾಡಿಗೆ,

ನನ್ನಿಚ್ಛೆಯಂತೆ, ಕುಟುಂಬದ ಇಚ್ಛೆಯಂತೆ, ನಿಮ್ಮೆಲ್ಲರ ಇಚ್ಛೆಯಂತೆ, ಸದ್ಯದಲ್ಲೇ ಮದುವೆಯಾಗುತ್ತಿದ್ದೇನೆ. ಪ್ರತಿ ಹೆಜ್ಜೆಯಲ್ಲೂ ಕೈ ಹಿಡಿದು ನಡೆಸಿದ್ದೀರಿ, ಮನದಾಳದಿಂದ ಹರಸಿದ್ದೀರಿ. ಬದುಕಿನ ಮಹತ್ವವಾದ ಘಟ್ಟಕ್ಕೆ ಗೆಳತಿ ಧನ್ಯತಾಳೊಂದಿಗೆ ಹೆಜ್ಜೆಯಿಡುತ್ತಿದ್ದೇನೆ. ಪ್ರೀತಿ, ಆಶೀರ್ವಾದವಿರಲಿ.

ಮದುವೆಗೆ ಕರಿತೀನಿ, ಎಲ್ಲ ಬಂದು ಊಟ ಮಾಡಿಕೊಂಡು ಹೋಗ್ಬೇಕು.

ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿಯ ಶುಭಾಶಯಗಳು

ನಾನು ಧನ್ಯ ❤️

ಇಂತಿ ನಿಮ್ಮವ

ಧನಂಜಯ

ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…

2 hours ago

14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ- ಡಿಸಿ ಅನುರಾಧ

ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…

2 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ 34 ವರ್ಷದ ವ್ಯಕ್ತಿ ಸಾವು

ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…

3 hours ago

ನಾಳೆ (ಏ.9ಕ್ಕೆ) ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…

6 hours ago

ಕರ್ನಾಟಕ ವಿರೋಧಿ ‘ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ಬಿಟ್ಟು ತೊಲಗಲಿ’- ಕರ್ನಾಟಕ ರಕ್ಷಣಾ ವೇದಿಕೆ‌ ಜಿಲ್ಲಾಧ್ಯಕ್ಷ ಪುರುಷೋತ್ತಮಗೌಡ ಆಗ್ರಹ

ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…

8 hours ago

ಮಾನಸಿಕ ಗುಣಮಟ್ಟ ಪರೀಕ್ಷಿಸಿಕೊಳ್ಳುವ ಆತ್ಮಾವಲೋಕನ ನಡೆಯಲಿ…

ಭಾವ ಬಯಲಿನ‌ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…

13 hours ago