Categories: ಸಿನಿಮಾ

ಡಾಲಿ ಧನಂಜಯ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ಹಸಮಣೆ ಏರಲಿರುವ ಡಾಲಿ: ತಮ್ಮ ಬಾಳ ಸಂಗಾತಿಯನ್ನು ಸೋಷಿಯಲ್ ಮೀಡಿಯಾ ಮೂಲಕ ಪರಿಚಯ

ನಟ ಡಾಲಿ ಧನಂಜಯ್ ಅವರು ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ವೈಯಕ್ತಿಕ ಜೀವನದಲ್ಲಿ ವಿವಾಹ ಬಂಧನಕ್ಕೊಳಗಾಗುತ್ತಿದ್ದು, ತಮ್ಮ ಬಾಳ ಸಂಗಾತಿಯನ್ನು ಸೋಷಿಯಲ್ ಮೀಡಿಯಾ ಮೂಲಕ ಧನಂಜಯ್ ಪರಿಚಯಿಸಿದ್ದಾರೆ.

ಮುಂದಿನ ವರ್ಷ ಫೆಬ್ರವರಿ 16ರಂದು ಮದುವೆ ನಡೆಯಲಿದೆ. ಧನಂಜಯ್ ಅವರು ವೈದ್ಯೆಯನ್ನು ಮದುವೆಯಾಗುತ್ತಿರುವುದನ್ನ ಖಚಿತಪಡಿಸಿದ್ದಾರೆ.

ಹುಡುಗಿಯ ಹೆಸರು ಧನ್ಯತಾ. ಸ್ತ್ರೀರೋಗ ತಜ್ಞೆ ಧನ್ಯತಾ ಮತ್ತು ಡಾಲಿ ಅನೇಕ ವರ್ಷಗಳಿಂದ ಪರಿಚಿತರು. ಇದೀಗ ಮನೆಯವರ ಒಪ್ಪಿಗೆ ಪಡೆದು ಹಸೆಮಣೆ ಏರಲು ಸಿದ್ಧವಾಗಿದ್ದಾರೆ.

ಭಾವಿ ಪತ್ನಿ ಜೊತೆಗಿನ ಸುಂದರವಾದ ವಿಡೀಯೋವನ್ನ ಅವರು ಹಂಚಿಕೊಂಡಿದ್ದಾರೆ. ಧನ್ಯತಾ ಚಿತ್ರದುರ್ಗ ಮೂಲದವರು. ಓದಿದ್ದು ಮೈಸೂರಿನಲ್ಲಿ. ಸದ್ಯ ಶೇರ್ ಮಾಡಿರುವ ವಿಡಿಯೋದಲ್ಲಿ ಧನಂಜಯ್ ಅವರು ಭಾವಿ ಪತ್ನಿಗೆ ಸುಂದರ ಸಾಲುಗಳನ್ನು ಕೂಡ ಬರೆದಿದ್ದಾರೆ.

ಪ್ರೀತಿಯ ಕರುನಾಡಿಗೆ,

ನನ್ನಿಚ್ಛೆಯಂತೆ, ಕುಟುಂಬದ ಇಚ್ಛೆಯಂತೆ, ನಿಮ್ಮೆಲ್ಲರ ಇಚ್ಛೆಯಂತೆ, ಸದ್ಯದಲ್ಲೇ ಮದುವೆಯಾಗುತ್ತಿದ್ದೇನೆ. ಪ್ರತಿ ಹೆಜ್ಜೆಯಲ್ಲೂ ಕೈ ಹಿಡಿದು ನಡೆಸಿದ್ದೀರಿ, ಮನದಾಳದಿಂದ ಹರಸಿದ್ದೀರಿ. ಬದುಕಿನ ಮಹತ್ವವಾದ ಘಟ್ಟಕ್ಕೆ ಗೆಳತಿ ಧನ್ಯತಾಳೊಂದಿಗೆ ಹೆಜ್ಜೆಯಿಡುತ್ತಿದ್ದೇನೆ. ಪ್ರೀತಿ, ಆಶೀರ್ವಾದವಿರಲಿ.

ಮದುವೆಗೆ ಕರಿತೀನಿ, ಎಲ್ಲ ಬಂದು ಊಟ ಮಾಡಿಕೊಂಡು ಹೋಗ್ಬೇಕು.

ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿಯ ಶುಭಾಶಯಗಳು

ನಾನು ಧನ್ಯ ❤️

ಇಂತಿ ನಿಮ್ಮವ

ಧನಂಜಯ

ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

3 hours ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

7 hours ago

ಜು.25ರಂದು ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ಬೆಸ್ಕಾಂ ವತಿಯಿಂದ ತುರ್ತು ನಿರ್ವಹಣೆ ಮತ್ತು ವಿದ್ಯುತ್ ಮಾರ್ಗಗಳ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 25ರಂದು (ಶನಿವಾರ) ದೊಡ್ಡಬಳ್ಳಾಪುರ ನಗರದ…

7 hours ago

ಆಕ್ರೋಶ, ಅರಾಜಕತೆ ಮತ್ತು ಮಾಧ್ಯಮಗಳು…..

ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಕಳೆದ ಕೆಲವು ದಿನಗಳ ಘಟನೆಗಳನ್ನು ನೋಡುತ್ತಿದ್ದರೆ ನಮ್ಮ ದೇಶದ ಸುತ್ತಮುತ್ತ ನಡೆದ ಬಾಂಗ್ಲಾ,…

15 hours ago

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ ಕರ್ನಾಟಕ ಮುಕ್ತ – ಖಾಸಗಿ ಹೂಡಿಕೆದಾರರಿಗೆ ಸರ್ಕಾರದಿಂದ ಸಂಪೂರ್ಣ ಬೆಂಬಲ- ಸಚಿವ ಕೆ.ಜೆ. ಜಾರ್ಜ್

ಕರ್ನಾಟಕವನ್ನು ದೇಶದ ಹೂಡಿಕೆ ಸ್ನೇಹಿ ಪ್ರವಾಸೋದ್ಯಮ ರಾಜ್ಯವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಪ್ರವಾಸೋದ್ಯಮ ನೀತಿಗಳನ್ನು ಮತ್ತಷ್ಟು ಸರಳೀಕರಿಸುತ್ತಿದ್ದು, ಖಾಸಗಿ ಹೂಡಿಕೆದಾರರಿಗೆ…

16 hours ago

ಹೆದ್ದಾರಿಯಿಂದ ನಗರ ಬೀದಿವರೆಗೆ ಶುಭಾಶಯ, ಸ್ವಾಗತ ಬ್ಯಾನರ್‌ಗಳದ್ದೇ ಆರ್ಭಟ: ನ್ಯಾಯಾಲಯದ ನಿರ್ದೇಶನಕ್ಕೂ ಸೊಪ್ಪು ಹಾಕದ ಅನಧಿಕೃತ ಫ್ಲೆಕ್ಸ್‌ಗಳು: ಸ್ವಚ್ಛತೆ, ಸುರಕ್ಷತೆ ಹಾಗೂ ಪರಿಸರಕ್ಕೆ ದೊಡ್ಡ ಸವಾಲು

ಬೆಂಗಳೂರು ಗ್ರಾಮಾಂತರ: ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಕಟೌಟ್ ಹಾಗೂ ಬಿಲ್‌ಬೋರ್ಡ್‌ಗಳನ್ನು ಅಳವಡಿಸದಂತೆ ರಾಜ್ಯ ಸರ್ಕಾರ ಮತ್ತು ನ್ಯಾಯಾಲಯಗಳು…

2 days ago