Categories: ಸಿನಿಮಾ

ಡಾಲಿ ಧನಂಜಯ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ಹಸಮಣೆ ಏರಲಿರುವ ಡಾಲಿ: ತಮ್ಮ ಬಾಳ ಸಂಗಾತಿಯನ್ನು ಸೋಷಿಯಲ್ ಮೀಡಿಯಾ ಮೂಲಕ ಪರಿಚಯ

ನಟ ಡಾಲಿ ಧನಂಜಯ್ ಅವರು ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ವೈಯಕ್ತಿಕ ಜೀವನದಲ್ಲಿ ವಿವಾಹ ಬಂಧನಕ್ಕೊಳಗಾಗುತ್ತಿದ್ದು, ತಮ್ಮ ಬಾಳ ಸಂಗಾತಿಯನ್ನು ಸೋಷಿಯಲ್ ಮೀಡಿಯಾ ಮೂಲಕ ಧನಂಜಯ್ ಪರಿಚಯಿಸಿದ್ದಾರೆ.

ಮುಂದಿನ ವರ್ಷ ಫೆಬ್ರವರಿ 16ರಂದು ಮದುವೆ ನಡೆಯಲಿದೆ. ಧನಂಜಯ್ ಅವರು ವೈದ್ಯೆಯನ್ನು ಮದುವೆಯಾಗುತ್ತಿರುವುದನ್ನ ಖಚಿತಪಡಿಸಿದ್ದಾರೆ.

ಹುಡುಗಿಯ ಹೆಸರು ಧನ್ಯತಾ. ಸ್ತ್ರೀರೋಗ ತಜ್ಞೆ ಧನ್ಯತಾ ಮತ್ತು ಡಾಲಿ ಅನೇಕ ವರ್ಷಗಳಿಂದ ಪರಿಚಿತರು. ಇದೀಗ ಮನೆಯವರ ಒಪ್ಪಿಗೆ ಪಡೆದು ಹಸೆಮಣೆ ಏರಲು ಸಿದ್ಧವಾಗಿದ್ದಾರೆ.

ಭಾವಿ ಪತ್ನಿ ಜೊತೆಗಿನ ಸುಂದರವಾದ ವಿಡೀಯೋವನ್ನ ಅವರು ಹಂಚಿಕೊಂಡಿದ್ದಾರೆ. ಧನ್ಯತಾ ಚಿತ್ರದುರ್ಗ ಮೂಲದವರು. ಓದಿದ್ದು ಮೈಸೂರಿನಲ್ಲಿ. ಸದ್ಯ ಶೇರ್ ಮಾಡಿರುವ ವಿಡಿಯೋದಲ್ಲಿ ಧನಂಜಯ್ ಅವರು ಭಾವಿ ಪತ್ನಿಗೆ ಸುಂದರ ಸಾಲುಗಳನ್ನು ಕೂಡ ಬರೆದಿದ್ದಾರೆ.

ಪ್ರೀತಿಯ ಕರುನಾಡಿಗೆ,

ನನ್ನಿಚ್ಛೆಯಂತೆ, ಕುಟುಂಬದ ಇಚ್ಛೆಯಂತೆ, ನಿಮ್ಮೆಲ್ಲರ ಇಚ್ಛೆಯಂತೆ, ಸದ್ಯದಲ್ಲೇ ಮದುವೆಯಾಗುತ್ತಿದ್ದೇನೆ. ಪ್ರತಿ ಹೆಜ್ಜೆಯಲ್ಲೂ ಕೈ ಹಿಡಿದು ನಡೆಸಿದ್ದೀರಿ, ಮನದಾಳದಿಂದ ಹರಸಿದ್ದೀರಿ. ಬದುಕಿನ ಮಹತ್ವವಾದ ಘಟ್ಟಕ್ಕೆ ಗೆಳತಿ ಧನ್ಯತಾಳೊಂದಿಗೆ ಹೆಜ್ಜೆಯಿಡುತ್ತಿದ್ದೇನೆ. ಪ್ರೀತಿ, ಆಶೀರ್ವಾದವಿರಲಿ.

ಮದುವೆಗೆ ಕರಿತೀನಿ, ಎಲ್ಲ ಬಂದು ಊಟ ಮಾಡಿಕೊಂಡು ಹೋಗ್ಬೇಕು.

ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿಯ ಶುಭಾಶಯಗಳು

ನಾನು ಧನ್ಯ ❤️

ಇಂತಿ ನಿಮ್ಮವ

ಧನಂಜಯ

ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

6 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

7 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

7 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

9 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

12 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

13 hours ago