ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರ ದೂರದೃಷ್ಟಿ, ಕಾರ್ಯವೈಖರಿ ಮಕ್ಕಳಿಗೆ ಪ್ರೇರಣೆ ಆಗಬೇಕು: ಬಿ.ಎನ್ ಬಚ್ಚೇಗೌಡ

ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರು ಸಾಮಾನ್ಯ ಕುಟುಂಬದಲ್ಲಿ ಜನಿಸಿ, ವಿಜ್ಞಾನಿಯಾಗಿ, ದೇಶದ ರಾಷ್ಟ್ರಪತಿಗಳಾಗಿ, ದೇಶ ಕಂಡಂತಹ ಮಹಾನ್ ವ್ಯಕ್ತಿಗಳಲ್ಲಿ ಅವರೂ ಒಬ್ಬರು, ಅವರ ದೂರದೃಷ್ಟಿ, ಕಾರ್ಯ ವೈಖರಿಯು ಮಕ್ಕಳಿಗೆ ಸ್ಫೂರ್ತಿಯಾಗಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ಎನ್ ಬಚ್ಚೇಗೌಡ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಹೊಸಕೋಟೆ ತಾಲ್ಲೂಕಿನ ಗಿಡ್ಡಪ್ಪನಹಳ್ಳಿಯಲ್ಲಿ ನಿರ್ಮಿಸಿರುವ “ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಯ ವಸತಿ ಗೃಹಗಳ ಕಟ್ಟಡ ಉದ್ಘಾಟನೆಯನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ಎನ್ ಬಚ್ಚೇಗೌಡ ಅವರು ಉದ್ಘಾಟಿಸಿ ಮಾತನಾಡಿದರು.

ವಸತಿ ಶಾಲೆಗಳಿಗೆ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಹೆಸರಿಟ್ಟಿರುವುದು ಎಲ್ಲರೂ ಹೆಮ್ಮೆ ಪಡುವ ವಿಷಯ, ಅಂತಹ ಶಾಲೆಗಳಲ್ಲಿ ಮಕ್ಕಳು ವಿದ್ಯಾಭ್ಯಾಸ ಮಾಡುವುದರಿಂದ ಕಲಾಂ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ಒಳ್ಳೆಯ ವಿದ್ಯಾಭ್ಯಾಸ ಪಡೆದುಕೊಂಡು ಉನ್ನತ ಹುದ್ದೆಗಳನ್ನು ಪಡೆದುಕೊಳ್ಳಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರತ್ ಬಚ್ಚೇಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರನ್ನು ಸ್ಮರಿಸುತ್ತಾ, ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಕೊಡುವುದು ಸರ್ಕಾರದ ಜವಾಬ್ದಾರಿಯಾಗಿದ್ದು ರಾಜ್ಯಾದ್ಯಂತ ವಸತಿ ಶಾಲೆಗಳನ್ನು ಸರ್ಕಾರ ನಿರ್ಮಿಸಿದೆ. ಒಂದು ಶಾಲೆಯಲ್ಲಿ ಆಹಾರ, ಬಟ್ಟೆ, ವಸತಿ ಮೂಲಭೂತ ಸೌಕರ್ಯಗಳನ್ನು ಉಚಿತವಾಗಿ ಕಲ್ಪಿಸುವುದು ಅಂದರೆ ಅದು ಸರ್ಕಾರಿ ಶಾಲೆಗಳಲ್ಲಿ ಮಾತ್ರ ಎಂದರು.

ಈ ಸೌಲಭ್ಯವನ್ನು ಸಂಪೂರ್ಣವಾಗಿ ಮಕ್ಕಳು ಬಳಸಿಕೊಂಡು ಒಳ್ಳೆಯ ವಿದ್ಯಾಭ್ಯಾಸ ಪಡೆದುಕೊಳ್ಳಿ ಎಂದು ಮಕ್ಕಳಿಗೆ ಸಲಹೆ ನೀಡಿದರು.

ಕರ್ನಾಟಕ ಗೃಹಮಂಡಳಿಯ ಕಾರ್ಯಪಾಲಕ ಇಂಜಿನಿಯರ್ ಅನಿಲ್ ಸಂಕುಳ್ಳಿ, ಸಹಾಯಕ ಕಾರ್ಯಪಾಲಕರಾದ ಭವ್ಯ, ಹೊಸಕೋಟೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಚಂದ್ರಶೇಖರ್, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕವಿತಾ ಇ, ಶಾಲೆಯ ಪ್ರಾಂಶುಪಾಲರಾದ ಶಶಿಕಲಾ, ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್ ಬಾಬು, ಸದಸ್ಯರು ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

4 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

9 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

9 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

17 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago