ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರು ಸಾಮಾನ್ಯ ಕುಟುಂಬದಲ್ಲಿ ಜನಿಸಿ, ವಿಜ್ಞಾನಿಯಾಗಿ, ದೇಶದ ರಾಷ್ಟ್ರಪತಿಗಳಾಗಿ, ದೇಶ ಕಂಡಂತಹ ಮಹಾನ್ ವ್ಯಕ್ತಿಗಳಲ್ಲಿ ಅವರೂ ಒಬ್ಬರು, ಅವರ ದೂರದೃಷ್ಟಿ, ಕಾರ್ಯ ವೈಖರಿಯು ಮಕ್ಕಳಿಗೆ ಸ್ಫೂರ್ತಿಯಾಗಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ಎನ್ ಬಚ್ಚೇಗೌಡ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಹೊಸಕೋಟೆ ತಾಲ್ಲೂಕಿನ ಗಿಡ್ಡಪ್ಪನಹಳ್ಳಿಯಲ್ಲಿ ನಿರ್ಮಿಸಿರುವ “ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಯ ವಸತಿ ಗೃಹಗಳ ಕಟ್ಟಡ ಉದ್ಘಾಟನೆಯನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ಎನ್ ಬಚ್ಚೇಗೌಡ ಅವರು ಉದ್ಘಾಟಿಸಿ ಮಾತನಾಡಿದರು.
ವಸತಿ ಶಾಲೆಗಳಿಗೆ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಹೆಸರಿಟ್ಟಿರುವುದು ಎಲ್ಲರೂ ಹೆಮ್ಮೆ ಪಡುವ ವಿಷಯ, ಅಂತಹ ಶಾಲೆಗಳಲ್ಲಿ ಮಕ್ಕಳು ವಿದ್ಯಾಭ್ಯಾಸ ಮಾಡುವುದರಿಂದ ಕಲಾಂ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ಒಳ್ಳೆಯ ವಿದ್ಯಾಭ್ಯಾಸ ಪಡೆದುಕೊಂಡು ಉನ್ನತ ಹುದ್ದೆಗಳನ್ನು ಪಡೆದುಕೊಳ್ಳಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಈ ಸೌಲಭ್ಯವನ್ನು ಸಂಪೂರ್ಣವಾಗಿ ಮಕ್ಕಳು ಬಳಸಿಕೊಂಡು ಒಳ್ಳೆಯ ವಿದ್ಯಾಭ್ಯಾಸ ಪಡೆದುಕೊಳ್ಳಿ ಎಂದು ಮಕ್ಕಳಿಗೆ ಸಲಹೆ ನೀಡಿದರು.
ಕರ್ನಾಟಕ ಗೃಹಮಂಡಳಿಯ ಕಾರ್ಯಪಾಲಕ ಇಂಜಿನಿಯರ್ ಅನಿಲ್ ಸಂಕುಳ್ಳಿ, ಸಹಾಯಕ ಕಾರ್ಯಪಾಲಕರಾದ ಭವ್ಯ, ಹೊಸಕೋಟೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಚಂದ್ರಶೇಖರ್, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕವಿತಾ ಇ, ಶಾಲೆಯ ಪ್ರಾಂಶುಪಾಲರಾದ ಶಶಿಕಲಾ, ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್ ಬಾಬು, ಸದಸ್ಯರು ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…