ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರ ದೂರದೃಷ್ಟಿ, ಕಾರ್ಯವೈಖರಿ ಮಕ್ಕಳಿಗೆ ಪ್ರೇರಣೆ ಆಗಬೇಕು: ಬಿ.ಎನ್ ಬಚ್ಚೇಗೌಡ

ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರು ಸಾಮಾನ್ಯ ಕುಟುಂಬದಲ್ಲಿ ಜನಿಸಿ, ವಿಜ್ಞಾನಿಯಾಗಿ, ದೇಶದ ರಾಷ್ಟ್ರಪತಿಗಳಾಗಿ, ದೇಶ ಕಂಡಂತಹ ಮಹಾನ್ ವ್ಯಕ್ತಿಗಳಲ್ಲಿ ಅವರೂ ಒಬ್ಬರು, ಅವರ ದೂರದೃಷ್ಟಿ, ಕಾರ್ಯ ವೈಖರಿಯು ಮಕ್ಕಳಿಗೆ ಸ್ಫೂರ್ತಿಯಾಗಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ಎನ್ ಬಚ್ಚೇಗೌಡ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಹೊಸಕೋಟೆ ತಾಲ್ಲೂಕಿನ ಗಿಡ್ಡಪ್ಪನಹಳ್ಳಿಯಲ್ಲಿ ನಿರ್ಮಿಸಿರುವ “ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಯ ವಸತಿ ಗೃಹಗಳ ಕಟ್ಟಡ ಉದ್ಘಾಟನೆಯನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ಎನ್ ಬಚ್ಚೇಗೌಡ ಅವರು ಉದ್ಘಾಟಿಸಿ ಮಾತನಾಡಿದರು.

ವಸತಿ ಶಾಲೆಗಳಿಗೆ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಹೆಸರಿಟ್ಟಿರುವುದು ಎಲ್ಲರೂ ಹೆಮ್ಮೆ ಪಡುವ ವಿಷಯ, ಅಂತಹ ಶಾಲೆಗಳಲ್ಲಿ ಮಕ್ಕಳು ವಿದ್ಯಾಭ್ಯಾಸ ಮಾಡುವುದರಿಂದ ಕಲಾಂ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ಒಳ್ಳೆಯ ವಿದ್ಯಾಭ್ಯಾಸ ಪಡೆದುಕೊಂಡು ಉನ್ನತ ಹುದ್ದೆಗಳನ್ನು ಪಡೆದುಕೊಳ್ಳಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರತ್ ಬಚ್ಚೇಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರನ್ನು ಸ್ಮರಿಸುತ್ತಾ, ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಕೊಡುವುದು ಸರ್ಕಾರದ ಜವಾಬ್ದಾರಿಯಾಗಿದ್ದು ರಾಜ್ಯಾದ್ಯಂತ ವಸತಿ ಶಾಲೆಗಳನ್ನು ಸರ್ಕಾರ ನಿರ್ಮಿಸಿದೆ. ಒಂದು ಶಾಲೆಯಲ್ಲಿ ಆಹಾರ, ಬಟ್ಟೆ, ವಸತಿ ಮೂಲಭೂತ ಸೌಕರ್ಯಗಳನ್ನು ಉಚಿತವಾಗಿ ಕಲ್ಪಿಸುವುದು ಅಂದರೆ ಅದು ಸರ್ಕಾರಿ ಶಾಲೆಗಳಲ್ಲಿ ಮಾತ್ರ ಎಂದರು.

ಈ ಸೌಲಭ್ಯವನ್ನು ಸಂಪೂರ್ಣವಾಗಿ ಮಕ್ಕಳು ಬಳಸಿಕೊಂಡು ಒಳ್ಳೆಯ ವಿದ್ಯಾಭ್ಯಾಸ ಪಡೆದುಕೊಳ್ಳಿ ಎಂದು ಮಕ್ಕಳಿಗೆ ಸಲಹೆ ನೀಡಿದರು.

ಕರ್ನಾಟಕ ಗೃಹಮಂಡಳಿಯ ಕಾರ್ಯಪಾಲಕ ಇಂಜಿನಿಯರ್ ಅನಿಲ್ ಸಂಕುಳ್ಳಿ, ಸಹಾಯಕ ಕಾರ್ಯಪಾಲಕರಾದ ಭವ್ಯ, ಹೊಸಕೋಟೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಚಂದ್ರಶೇಖರ್, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕವಿತಾ ಇ, ಶಾಲೆಯ ಪ್ರಾಂಶುಪಾಲರಾದ ಶಶಿಕಲಾ, ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್ ಬಾಬು, ಸದಸ್ಯರು ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

10 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

11 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

11 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

13 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

16 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

17 hours ago