ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ(ಸಿ.ಬಿ.ಎಸ್.ಇ)ಯಲ್ಲಿ ಪ್ರಥಮ ಪಿ.ಯು.ಸಿ ಸಹ ಶಿಕ್ಷಣ 60 ಸಂಖ್ಯಾಬಲ (ಪಿ.ಸಿ.ಎಂ.ಬಿ) ತರಗತಿಗೆ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಶೈಕ್ಷಣಿಕ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲ್ಲೂಕು, ಗಿಡ್ಡಪ್ಪನಹಳ್ಳಿ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ|| ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ(ಸಿ.ಬಿ.ಎಸ್.ಇ)ಯಲ್ಲಿ ಪ್ರಥಮ ಪಿ.ಯು.ಸಿ ಸಹ ಶಿಕ್ಷಣ 60 ಸಂಖ್ಯಾಬಲ (ಪಿ.ಸಿ.ಎಂ.ಬಿ) ತರಗತಿಗೆ ಪ್ರವೇಶ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸದರಿ ವಸತಿ ಶಾಲೆಯಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಮತ್ತು ಸಿಖ್) ವಿದ್ಯಾರ್ಥಿಗಳಿಗೆ ಶೇ.75%ರಷ್ಟು ಹಾಗೂ ಇತರೆ ವರ್ಗಗಳ ಪ.ಜಾತಿ, ಪ.ಪಂಗಡ ಮತ್ತು ಇತರೆ ಹಿಂದುಳಿದ ವಿದ್ಯಾರ್ಥಿಗಳಿಗೆ ಶೇ.25%ರಷ್ಟು ಸ್ಥಾನ, ವಿಕಲಚೇತನರಿಗೆ ಶೇ.3ರಷ್ಟು ಪ್ರವೇಶ ಮೀಸಲಿರಿಸಿದೆ.

ಅಲ್ಪಸಂಖ್ಯಾತರ ಯಾವುದೇ ವಸತಿ ಶಾಲೆ/ಸರ್ಕಾರಿ/ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ಅಧ್ಯಯನ ಮಾಡಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪ್ರವೇಶ ಪಡೆಯಲು ಅರ್ಹರಿರುತ್ತಾರೆ. ದಾಖಲಾದ ವಿದ್ಯಾರ್ಥಿಗಳಿಗೆ ಉಚಿತ ವಸತಿ, ಶಿಕ್ಷಣ, ಪಠ್ಯ ಪುಸ್ತಕ, ಆಹಾರ, ಸಮವಸ್ತ್ರ, ಶುಚಿ ಸಂಭ್ರಮ ಕಿಟ್, ಲೇಖನ ಸಾಮಗ್ರಿ ಸೇರಿದಂತೆ ಇತರೆ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುವುದು.

ತಾಂತ್ರಿಕ ಮತ್ತು ವೈದ್ಯಕೀಯ ಮತ್ತು ಇತ್ಯಾದಿ ವೃತ್ತಿಪರ ಶಿಕ್ಷಣಕ್ಕೆ ಅನುಕೂಲವಾಗಲು ವಿಜ್ಞಾನ ವಿಷಯಗಳಿಗೆ PCMB ತರಗತಿಗಳನ್ನು ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುವುದು. ವೃತ್ತಿಪರ ಕೋರ್ಸುಗಳ (NETT/JEE(Mains & Advanced)KCET) ಪ್ರವೇಶ ಪರೀಕ್ಷೆಗೆ ವಿಶೇಷ ತರಬೇತಿಯನ್ನು ಉಚಿತವಾಗಿ ನೀಡಲಾಗುವುದು.

ಪ್ರಥಮ ಪಿ.ಯು.ಸಿ ಸಹ ಶಿಕ್ಷಣ (PCMB) ತರಗತಿಗೆ ದಾಖಲಾತಿ ಪ್ರವೇಶಕ್ಕೆ ಅರ್ಜಿಯನ್ನು ಪ್ರಾಂಶುಪಾಲರಿಂದ ಪಡೆದು, ಸಂಬಂಧಪಟ್ಟ ಪ್ರಾಂಶುಪಾಲರು, ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ, ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು ರವರಿಗೆ ದಿನಾಂಕ: 25/05/2023 ರೊಳಗೆ ಅರ್ಜಿ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಡಾ|| ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ, ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು, ದೂರವಾಣಿ ಸಂಖ್ಯೆ-9632933397, 8660971267, 9972238296, 9980903199. ಅಥವಾ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಛೇರಿ ಮತ್ತು ತಾಲ್ಲೂಕು ಮಾಹಿತಿ ಕೇಂದ್ರ, ಹೊಸಕೋಟೆ. ದೂರವಾಣಿ ಸಂಖ್ಯೆ- ದೂ:080-27931899, ಮೊ.8310397004 ಅಥವಾ ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು (ಗ್ರಾ) ಜಿಲ್ಲೆ. ನಂ.216, 2ನೇ ಮಹಡಿ, ಜಿಲ್ಲಾಧಿಕಾರಿಗಳ ಹೊಸ ಸಂಕೀರ್ಣ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ-562110. ದೂರವಾಣಿ ಸಂಖ್ಯೆ- 080-29787455. ಅವರನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…

1 hour ago

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

9 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

12 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

20 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

1 day ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

1 day ago