ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ(ಸಿ.ಬಿ.ಎಸ್.ಇ)ಯಲ್ಲಿ ಪ್ರಥಮ ಪಿ.ಯು.ಸಿ ಸಹ ಶಿಕ್ಷಣ 60 ಸಂಖ್ಯಾಬಲ (ಪಿ.ಸಿ.ಎಂ.ಬಿ) ತರಗತಿಗೆ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಶೈಕ್ಷಣಿಕ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲ್ಲೂಕು, ಗಿಡ್ಡಪ್ಪನಹಳ್ಳಿ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ|| ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ(ಸಿ.ಬಿ.ಎಸ್.ಇ)ಯಲ್ಲಿ ಪ್ರಥಮ ಪಿ.ಯು.ಸಿ ಸಹ ಶಿಕ್ಷಣ 60 ಸಂಖ್ಯಾಬಲ (ಪಿ.ಸಿ.ಎಂ.ಬಿ) ತರಗತಿಗೆ ಪ್ರವೇಶ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸದರಿ ವಸತಿ ಶಾಲೆಯಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಮತ್ತು ಸಿಖ್) ವಿದ್ಯಾರ್ಥಿಗಳಿಗೆ ಶೇ.75%ರಷ್ಟು ಹಾಗೂ ಇತರೆ ವರ್ಗಗಳ ಪ.ಜಾತಿ, ಪ.ಪಂಗಡ ಮತ್ತು ಇತರೆ ಹಿಂದುಳಿದ ವಿದ್ಯಾರ್ಥಿಗಳಿಗೆ ಶೇ.25%ರಷ್ಟು ಸ್ಥಾನ, ವಿಕಲಚೇತನರಿಗೆ ಶೇ.3ರಷ್ಟು ಪ್ರವೇಶ ಮೀಸಲಿರಿಸಿದೆ.

ಅಲ್ಪಸಂಖ್ಯಾತರ ಯಾವುದೇ ವಸತಿ ಶಾಲೆ/ಸರ್ಕಾರಿ/ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ಅಧ್ಯಯನ ಮಾಡಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪ್ರವೇಶ ಪಡೆಯಲು ಅರ್ಹರಿರುತ್ತಾರೆ. ದಾಖಲಾದ ವಿದ್ಯಾರ್ಥಿಗಳಿಗೆ ಉಚಿತ ವಸತಿ, ಶಿಕ್ಷಣ, ಪಠ್ಯ ಪುಸ್ತಕ, ಆಹಾರ, ಸಮವಸ್ತ್ರ, ಶುಚಿ ಸಂಭ್ರಮ ಕಿಟ್, ಲೇಖನ ಸಾಮಗ್ರಿ ಸೇರಿದಂತೆ ಇತರೆ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುವುದು.

ತಾಂತ್ರಿಕ ಮತ್ತು ವೈದ್ಯಕೀಯ ಮತ್ತು ಇತ್ಯಾದಿ ವೃತ್ತಿಪರ ಶಿಕ್ಷಣಕ್ಕೆ ಅನುಕೂಲವಾಗಲು ವಿಜ್ಞಾನ ವಿಷಯಗಳಿಗೆ PCMB ತರಗತಿಗಳನ್ನು ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುವುದು. ವೃತ್ತಿಪರ ಕೋರ್ಸುಗಳ (NETT/JEE(Mains & Advanced)KCET) ಪ್ರವೇಶ ಪರೀಕ್ಷೆಗೆ ವಿಶೇಷ ತರಬೇತಿಯನ್ನು ಉಚಿತವಾಗಿ ನೀಡಲಾಗುವುದು.

ಪ್ರಥಮ ಪಿ.ಯು.ಸಿ ಸಹ ಶಿಕ್ಷಣ (PCMB) ತರಗತಿಗೆ ದಾಖಲಾತಿ ಪ್ರವೇಶಕ್ಕೆ ಅರ್ಜಿಯನ್ನು ಪ್ರಾಂಶುಪಾಲರಿಂದ ಪಡೆದು, ಸಂಬಂಧಪಟ್ಟ ಪ್ರಾಂಶುಪಾಲರು, ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ, ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು ರವರಿಗೆ ದಿನಾಂಕ: 25/05/2023 ರೊಳಗೆ ಅರ್ಜಿ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಡಾ|| ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ, ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು, ದೂರವಾಣಿ ಸಂಖ್ಯೆ-9632933397, 8660971267, 9972238296, 9980903199. ಅಥವಾ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಛೇರಿ ಮತ್ತು ತಾಲ್ಲೂಕು ಮಾಹಿತಿ ಕೇಂದ್ರ, ಹೊಸಕೋಟೆ. ದೂರವಾಣಿ ಸಂಖ್ಯೆ- ದೂ:080-27931899, ಮೊ.8310397004 ಅಥವಾ ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು (ಗ್ರಾ) ಜಿಲ್ಲೆ. ನಂ.216, 2ನೇ ಮಹಡಿ, ಜಿಲ್ಲಾಧಿಕಾರಿಗಳ ಹೊಸ ಸಂಕೀರ್ಣ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ-562110. ದೂರವಾಣಿ ಸಂಖ್ಯೆ- 080-29787455. ಅವರನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

1 hour ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

2 hours ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

14 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

15 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

18 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

2 days ago