ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಾ.ಕೆ.ಸುಧಾಕರ್ ಅವರು ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ತೂಬಗೆರೆ ಗ್ರಾಮದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಈ ವೇಳೆ ಮಾತನಾಡಿದ ಜಿಲ್ಲ ಬಿಜೆಪಿ ಕಾರ್ಯದರ್ಶಿ ಪ್ರತಾಪ್, ನೂತನ ಸಂಸದರಾಗಿ ಆಯ್ಕೆಯಾಗಿರುವ ಸುಧಾಕರ್ ಅವರಿಗೆ ಶುಭಾಶಯಗಳನ್ನು ತಿಳಿಸುತ್ತಾ.. ಫಲಿತಾಂಶಕ್ಕಾಗಿ ಹಗಲಿರುಳು ದುಡಿದ ಪಕ್ಷದ ಕಾರ್ಯಕರ್ತರು ಮುಖಂಡರು ಮತ್ತು ಪಕ್ಷದ ಪರವಾಗಿ ಮತ ಚಲಾಯಿಸಿದ ಎಲ್ಲಾ ಮತದಾರರಿಗೂ ಕೃತಜ್ಞತೆ ತಿಳಿಸಿದರು.
ಮುಂದಿನ ದಿನಗಳಲ್ಲಿ ಹೋಬಳಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಶ್ರಮಿಸುತ್ತೇವೆ. ದೇಶದಲ್ಲಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುತ್ತಾರೆ. ಇದು ಜನರು ನೀಡಿದ ಗೆಲುವು ಎಂದು ಬಣ್ಣಿಸಿದರು.
ಹೋಬಳಿ ಬಿಜೆಪಿ ಅಧ್ಯಕ್ಷ ವಾಸುದೇವ್, ಜೆಡಿಎಸ್ ಮುಖಂಡ ಉದಯ್ ಆರಾಧ್ಯ, ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಪ್ಪ, ಮುನಿಕೃಷ್ಣಪ್ಪ, ಮುಖಂಡರಾದ ಹರೀಶ್, ಕೃಷ್ಣಚಾರಿ, ದೇವರಾಜ್, ಗಂಗರಾಜು ಸೇರಿದಂತೆ ಇತರರು ಭಾಗವಹಿಸಿದ್ದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…