ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಾ.ಕೆ.ಸುಧಾಕರ್ ಅವರು ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ತೂಬಗೆರೆ ಗ್ರಾಮದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಈ ವೇಳೆ ಮಾತನಾಡಿದ ಜಿಲ್ಲ ಬಿಜೆಪಿ ಕಾರ್ಯದರ್ಶಿ ಪ್ರತಾಪ್, ನೂತನ ಸಂಸದರಾಗಿ ಆಯ್ಕೆಯಾಗಿರುವ ಸುಧಾಕರ್ ಅವರಿಗೆ ಶುಭಾಶಯಗಳನ್ನು ತಿಳಿಸುತ್ತಾ.. ಫಲಿತಾಂಶಕ್ಕಾಗಿ ಹಗಲಿರುಳು ದುಡಿದ ಪಕ್ಷದ ಕಾರ್ಯಕರ್ತರು ಮುಖಂಡರು ಮತ್ತು ಪಕ್ಷದ ಪರವಾಗಿ ಮತ ಚಲಾಯಿಸಿದ ಎಲ್ಲಾ ಮತದಾರರಿಗೂ ಕೃತಜ್ಞತೆ ತಿಳಿಸಿದರು.
ಮುಂದಿನ ದಿನಗಳಲ್ಲಿ ಹೋಬಳಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಶ್ರಮಿಸುತ್ತೇವೆ. ದೇಶದಲ್ಲಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುತ್ತಾರೆ. ಇದು ಜನರು ನೀಡಿದ ಗೆಲುವು ಎಂದು ಬಣ್ಣಿಸಿದರು.
ಹೋಬಳಿ ಬಿಜೆಪಿ ಅಧ್ಯಕ್ಷ ವಾಸುದೇವ್, ಜೆಡಿಎಸ್ ಮುಖಂಡ ಉದಯ್ ಆರಾಧ್ಯ, ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಪ್ಪ, ಮುನಿಕೃಷ್ಣಪ್ಪ, ಮುಖಂಡರಾದ ಹರೀಶ್, ಕೃಷ್ಣಚಾರಿ, ದೇವರಾಜ್, ಗಂಗರಾಜು ಸೇರಿದಂತೆ ಇತರರು ಭಾಗವಹಿಸಿದ್ದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…