ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಂ ಅವರು ಸ್ವಾತಂತ್ರ್ಯ ಹೋರಾಟಗಾರಾಗಿ, ಹಸಿರು ಕ್ರಾಂತಿಯ ಹರಿಕಾರರಾಗಿ, ಕೇಂದ್ರದ ಮಂತ್ರಿಗಳಾಗಿ ದೇಶಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರು ಯಾವುದೇ ವರ್ಗಕ್ಕೆ ಸೀಮಿತವಾಗದೆ ಎಲ್ಲರ ಏಳಿಗೆಗಾಗಿ ಶ್ರಮಿಸಿದ್ದಾರೆ. ಅಂತಹ ಮಹಾನ್ ನಾಯಕರ ಆದರ್ಶ ಮತ್ತು ಚಿಂತನೆಗಳನ್ನು ಪಾಲಿಸೋಣ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಹೇಳಿದರು.
ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಡಾ.ಬಾಬು ಜಗಜೀವನರಾಂ ಅವರ 37ನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಡಾ.ಬಾಬು ಜಗಜೀವನ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನಗಳನ್ನು ಸಲ್ಲಿಸಿ ಅವರು ಮಾತನಾಡಿದರು.
ಡಾ.ಜಗಜೀವನ ರಾಂ ಕಿರಿಯ ವಯಸ್ಸಿನಲ್ಲೇ ಕೇಂದ್ರ ಮಂತ್ರಿಯಾಗಿ ದೇಶದ ಸೇವೆಯಲ್ಲಿ ತೊಡಗಿಕೊಂಡಿದ್ದರು. ಕಾರ್ಮಿಕ ಚಳುವಳಿ, ಸಂವಿಧಾನ ರಚನೆಯಲ್ಲೂ ಅವರ ಕೊಡುಗೆ ಇದೆ. ರಕ್ಷಣಾ ಮಂತ್ರಿಗಳಾಗಿ, ಕಾರ್ಮಿಕ ಮಂತ್ರಿಗಳಾಗಿ, ಕೃಷಿ ಮಂತ್ರಿಗಳಾಗಿ ದೇಶ ಸೇವೆ ಸಲ್ಲಿಸಿದ್ದಾರೆ. ಅವರ ಆದರ್ಶಗಳು ಇಂದಿಗೂ ಪ್ರಸ್ತುತ ಎಂದು ಬಣ್ಣಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕಿ ಪ್ರೇಮ, ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರು, ಸಮುದಾಯದ ಮುಂಖಂಡರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿಯವರ ಕಚೇರಿ ಸಿಬ್ಬಂದಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…