ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಂ ಅವರು ಸ್ವಾತಂತ್ರ್ಯ ಹೋರಾಟಗಾರಾಗಿ, ಹಸಿರು ಕ್ರಾಂತಿಯ ಹರಿಕಾರರಾಗಿ, ಕೇಂದ್ರದ ಮಂತ್ರಿಗಳಾಗಿ ದೇಶಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರು ಯಾವುದೇ ವರ್ಗಕ್ಕೆ ಸೀಮಿತವಾಗದೆ ಎಲ್ಲರ ಏಳಿಗೆಗಾಗಿ ಶ್ರಮಿಸಿದ್ದಾರೆ. ಅಂತಹ ಮಹಾನ್ ನಾಯಕರ ಆದರ್ಶ ಮತ್ತು ಚಿಂತನೆಗಳನ್ನು ಪಾಲಿಸೋಣ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಹೇಳಿದರು.
ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಡಾ.ಬಾಬು ಜಗಜೀವನರಾಂ ಅವರ 37ನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಡಾ.ಬಾಬು ಜಗಜೀವನ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನಗಳನ್ನು ಸಲ್ಲಿಸಿ ಅವರು ಮಾತನಾಡಿದರು.
ಡಾ.ಜಗಜೀವನ ರಾಂ ಕಿರಿಯ ವಯಸ್ಸಿನಲ್ಲೇ ಕೇಂದ್ರ ಮಂತ್ರಿಯಾಗಿ ದೇಶದ ಸೇವೆಯಲ್ಲಿ ತೊಡಗಿಕೊಂಡಿದ್ದರು. ಕಾರ್ಮಿಕ ಚಳುವಳಿ, ಸಂವಿಧಾನ ರಚನೆಯಲ್ಲೂ ಅವರ ಕೊಡುಗೆ ಇದೆ. ರಕ್ಷಣಾ ಮಂತ್ರಿಗಳಾಗಿ, ಕಾರ್ಮಿಕ ಮಂತ್ರಿಗಳಾಗಿ, ಕೃಷಿ ಮಂತ್ರಿಗಳಾಗಿ ದೇಶ ಸೇವೆ ಸಲ್ಲಿಸಿದ್ದಾರೆ. ಅವರ ಆದರ್ಶಗಳು ಇಂದಿಗೂ ಪ್ರಸ್ತುತ ಎಂದು ಬಣ್ಣಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕಿ ಪ್ರೇಮ, ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರು, ಸಮುದಾಯದ ಮುಂಖಂಡರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿಯವರ ಕಚೇರಿ ಸಿಬ್ಬಂದಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…