ಡಾ.ಬಿ.ಆರ್. ಅಂಬೇಡ್ಕರ್ ಅವರ ಬದುಕು, ಬರಹಗಳೇ ಭಾರತೀಯರಿಗೆ ಮಾರ್ಗದರ್ಶನ- ಪಿ.ಗೋವಿಂದರಾಜು

ಮಹಾನಾಯಕ ನಮ್ಮ ದೇಶದ ಮಾರ್ಗದರ್ಶಕ ನಮ್ಮ ಭಾರತ ದೇಶ ಕಂಡ ಶ್ರೇಷ್ಠ ನಾಯಕರಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರಮುಖರು. ಡಾ.ಬಿ.ಆರ್. ಅಂಬೇಡ್ಕರ್ ಅವರ ಬದುಕು, ಬರಹಗಳೇ ಭಾರತೀಯರಿಗೆ ಮಾರ್ಗದರ್ಶನವಾಗಿವೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜಕುಮಾರ್ ಕಲಾಮಂದಿರ ಆವರಣದಲ್ಲಿ‌ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕನ್ನಡ ಸಾಹಿತ್ಯಕ್ಕೆ ಮತ್ತು ಸಾಹಿತಿಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳ ಪ್ರಭಾವ ಅಪಾರವಾಗಿದೆ. ಅಂಬೇಡ್ಕರ್ ಚಿಂತನೆಗಳ ಪ್ರಭಾವ ಕನ್ನಡದ ದಲಿತ, ಬಂಡಾಯ, ಪ್ರಗತಿಪರ ಸಾಹಿತಿಗಳ ಮೇಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಜಗತ್ತಿನ ಹಲವಾರು ದೇಶಗಳು ಪ್ರಶಂಸೆ ಮಾಡಿವೆ ಎಂದರು.

ಕನ್ನಡ ಜಾಗೃತ ವೇದಿಕೆ ಜಿಲ್ಲಾಧ್ಯಕ್ಷ ಅಗ್ನಿವೆಂಕಟೇಶ ಮಾತನಾಡಿ, ನಮ್ಮ ದೇಶದ ಸಂವಿಧಾನದ ಶಿಲ್ಪಿ ಅಂಬೇಡ್ಕರ್ ಅವರು ನಮಗೆ ಸಮಾನತೆಯ ಹಾದಿಯನ್ನು ತೋರಿಸಿದರು. ಜನಪರ ಹೋರಾಟಗಾರರಿಗೆ ಅಂಬೇಡ್ಕರ್ ಸದಾ ಸ್ಫೂರ್ತಿ. ಶೋಷಣೆ ಮುಕ್ತವಾದ ಸಮಾಜ ನಿಮಾರ್ಣವಾಗಬೇಕು. ಶಿಕ್ಷಣ, ಸಂಘಟನೆ ಮತ್ತು ಹೋರಾಟ ಮಹತ್ವವನ್ನು ತಿಳಿಸಿದರು ಡಾ.ಬಿ.ಆರ್.ಅಂಬೇಡ್ಕರ್ ಆಗಿದ್ದಾರೆ ಎಂದರು.

ಕವಯಿತ್ರಿ ಆಶಾಗುಡ್ಡದಹಳ್ಳಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ತಮ್ಮ ವೈಯಕ್ತಿಕ ಜೀವನಕ್ಕಿಂತ ದೇಶದ ಒಳಿತಿಗಾಗಿ ಬದುಕಿದ್ದವರು. ತಮ್ಮ ಅಪಾರ ಓದು ಮತ್ತು ಜ್ಞಾನಾರ್ಜನೆಯಿಂದಾಗಿ ಜಗತ್ತೇ ಮೆಚ್ಚುವಂತಹ ಸಂವಿಧಾನ ರಚಿಸಲು ಸಹಕಾರಿ ಆಯಿತು. ಶೋಷಿತ ಸಮುದಾಯಗಳಿಗೆ ಸಮಾನತೆಯ ಹಕ್ಕು ದೊರೆಯಲು ಡಾ.ಬಿ.ಆರ್.ಅಂಬೇಡ್ಕರ್ ಪರಿಶ್ರಮ‌ ಅಪಾರವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಭಾರತ ಸ್ಕೌಟ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ. ವೆಂಕಟರಾಜು, ಕನ್ನಡ ಸಾಹಿತ್ಯ ಪರಿಷತ್ತು ಕೋಶಾಧ್ಯಕ್ಷ ಸಾ.ಲ.ಕಮಲನಾಥ್ , ಕಸಬಾ ಹೋಬಳಿ ಅಧ್ಯಕ್ಷ ಪಿ.ಡಿ.ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ದೊಡ್ಡಬೆಳವಂಗಲ ಹೋಬಳಿ ಘಟದ ಗೌರವ ಕಾರ್ಯದರ್ಶಿ ಮತ್ತು ಮುಖ್ಯಶಿಕ್ಷಕ ಅಂಜನಮೂರ್ತಿ, ಕನ್ನಡ ಜಾಗೃತ ವೇದಿಕೆ ತಾಲ್ಲೂಕು ಅಧ್ಯಕ್ಷ ನಾಗರಾಜು, ದಲಿತ ವಿಮೋಚನಾ ಸೇನೆ ನಗರ ಅಧ್ಯಕ್ಷ ಮಧು, ಪ್ರಗತಿಪರ ಸಂಘಟನೆಯ ಅಬ್ದುಲ್ ಸುಹಾನ್ ಸಾಬ್, ಆರಿಫ್, ದರ್ಗಾಜೋಗಿಹಳ್ಳಿ ಮಲ್ಲೇಶ್ , ದಲಿತ ವಿಮೋಚನಾ ಸೇನೆ ಕಾರ್ಯಕರ್ತರು ಭಾಗವಹಿಸಿದ್ದರು. ‌

Ramesh Babu

Journalist

Recent Posts

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

8 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

10 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

11 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

17 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

18 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

21 hours ago