ಡಾ.ಬಿ.ಆರ್. ಅಂಬೇಡ್ಕರ್ ಅವರ ಬದುಕು, ಬರಹಗಳೇ ಭಾರತೀಯರಿಗೆ ಮಾರ್ಗದರ್ಶನ- ಪಿ.ಗೋವಿಂದರಾಜು

ಮಹಾನಾಯಕ ನಮ್ಮ ದೇಶದ ಮಾರ್ಗದರ್ಶಕ ನಮ್ಮ ಭಾರತ ದೇಶ ಕಂಡ ಶ್ರೇಷ್ಠ ನಾಯಕರಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರಮುಖರು. ಡಾ.ಬಿ.ಆರ್. ಅಂಬೇಡ್ಕರ್ ಅವರ ಬದುಕು, ಬರಹಗಳೇ ಭಾರತೀಯರಿಗೆ ಮಾರ್ಗದರ್ಶನವಾಗಿವೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜಕುಮಾರ್ ಕಲಾಮಂದಿರ ಆವರಣದಲ್ಲಿ‌ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕನ್ನಡ ಸಾಹಿತ್ಯಕ್ಕೆ ಮತ್ತು ಸಾಹಿತಿಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳ ಪ್ರಭಾವ ಅಪಾರವಾಗಿದೆ. ಅಂಬೇಡ್ಕರ್ ಚಿಂತನೆಗಳ ಪ್ರಭಾವ ಕನ್ನಡದ ದಲಿತ, ಬಂಡಾಯ, ಪ್ರಗತಿಪರ ಸಾಹಿತಿಗಳ ಮೇಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಜಗತ್ತಿನ ಹಲವಾರು ದೇಶಗಳು ಪ್ರಶಂಸೆ ಮಾಡಿವೆ ಎಂದರು.

ಕನ್ನಡ ಜಾಗೃತ ವೇದಿಕೆ ಜಿಲ್ಲಾಧ್ಯಕ್ಷ ಅಗ್ನಿವೆಂಕಟೇಶ ಮಾತನಾಡಿ, ನಮ್ಮ ದೇಶದ ಸಂವಿಧಾನದ ಶಿಲ್ಪಿ ಅಂಬೇಡ್ಕರ್ ಅವರು ನಮಗೆ ಸಮಾನತೆಯ ಹಾದಿಯನ್ನು ತೋರಿಸಿದರು. ಜನಪರ ಹೋರಾಟಗಾರರಿಗೆ ಅಂಬೇಡ್ಕರ್ ಸದಾ ಸ್ಫೂರ್ತಿ. ಶೋಷಣೆ ಮುಕ್ತವಾದ ಸಮಾಜ ನಿಮಾರ್ಣವಾಗಬೇಕು. ಶಿಕ್ಷಣ, ಸಂಘಟನೆ ಮತ್ತು ಹೋರಾಟ ಮಹತ್ವವನ್ನು ತಿಳಿಸಿದರು ಡಾ.ಬಿ.ಆರ್.ಅಂಬೇಡ್ಕರ್ ಆಗಿದ್ದಾರೆ ಎಂದರು.

ಕವಯಿತ್ರಿ ಆಶಾಗುಡ್ಡದಹಳ್ಳಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ತಮ್ಮ ವೈಯಕ್ತಿಕ ಜೀವನಕ್ಕಿಂತ ದೇಶದ ಒಳಿತಿಗಾಗಿ ಬದುಕಿದ್ದವರು. ತಮ್ಮ ಅಪಾರ ಓದು ಮತ್ತು ಜ್ಞಾನಾರ್ಜನೆಯಿಂದಾಗಿ ಜಗತ್ತೇ ಮೆಚ್ಚುವಂತಹ ಸಂವಿಧಾನ ರಚಿಸಲು ಸಹಕಾರಿ ಆಯಿತು. ಶೋಷಿತ ಸಮುದಾಯಗಳಿಗೆ ಸಮಾನತೆಯ ಹಕ್ಕು ದೊರೆಯಲು ಡಾ.ಬಿ.ಆರ್.ಅಂಬೇಡ್ಕರ್ ಪರಿಶ್ರಮ‌ ಅಪಾರವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಭಾರತ ಸ್ಕೌಟ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ. ವೆಂಕಟರಾಜು, ಕನ್ನಡ ಸಾಹಿತ್ಯ ಪರಿಷತ್ತು ಕೋಶಾಧ್ಯಕ್ಷ ಸಾ.ಲ.ಕಮಲನಾಥ್ , ಕಸಬಾ ಹೋಬಳಿ ಅಧ್ಯಕ್ಷ ಪಿ.ಡಿ.ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ದೊಡ್ಡಬೆಳವಂಗಲ ಹೋಬಳಿ ಘಟದ ಗೌರವ ಕಾರ್ಯದರ್ಶಿ ಮತ್ತು ಮುಖ್ಯಶಿಕ್ಷಕ ಅಂಜನಮೂರ್ತಿ, ಕನ್ನಡ ಜಾಗೃತ ವೇದಿಕೆ ತಾಲ್ಲೂಕು ಅಧ್ಯಕ್ಷ ನಾಗರಾಜು, ದಲಿತ ವಿಮೋಚನಾ ಸೇನೆ ನಗರ ಅಧ್ಯಕ್ಷ ಮಧು, ಪ್ರಗತಿಪರ ಸಂಘಟನೆಯ ಅಬ್ದುಲ್ ಸುಹಾನ್ ಸಾಬ್, ಆರಿಫ್, ದರ್ಗಾಜೋಗಿಹಳ್ಳಿ ಮಲ್ಲೇಶ್ , ದಲಿತ ವಿಮೋಚನಾ ಸೇನೆ ಕಾರ್ಯಕರ್ತರು ಭಾಗವಹಿಸಿದ್ದರು. ‌

Ramesh Babu

Journalist

Recent Posts

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

41 minutes ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

2 hours ago

ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ

ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ‌ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…

7 hours ago

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!

ಸಬ್ ಇನ್ಸ್‌ಪೆಕ್ಟರ್‌ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…

9 hours ago

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

20 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

21 hours ago