ಡಾ.ಬಿ.ಆರ್. ಅಂಬೇಡ್ಕರ್ ಅವರ ಬದುಕು, ಬರಹಗಳೇ ಭಾರತೀಯರಿಗೆ ಮಾರ್ಗದರ್ಶನ- ಪಿ.ಗೋವಿಂದರಾಜು

ಮಹಾನಾಯಕ ನಮ್ಮ ದೇಶದ ಮಾರ್ಗದರ್ಶಕ ನಮ್ಮ ಭಾರತ ದೇಶ ಕಂಡ ಶ್ರೇಷ್ಠ ನಾಯಕರಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರಮುಖರು. ಡಾ.ಬಿ.ಆರ್. ಅಂಬೇಡ್ಕರ್ ಅವರ ಬದುಕು, ಬರಹಗಳೇ ಭಾರತೀಯರಿಗೆ ಮಾರ್ಗದರ್ಶನವಾಗಿವೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜಕುಮಾರ್ ಕಲಾಮಂದಿರ ಆವರಣದಲ್ಲಿ‌ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕನ್ನಡ ಸಾಹಿತ್ಯಕ್ಕೆ ಮತ್ತು ಸಾಹಿತಿಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳ ಪ್ರಭಾವ ಅಪಾರವಾಗಿದೆ. ಅಂಬೇಡ್ಕರ್ ಚಿಂತನೆಗಳ ಪ್ರಭಾವ ಕನ್ನಡದ ದಲಿತ, ಬಂಡಾಯ, ಪ್ರಗತಿಪರ ಸಾಹಿತಿಗಳ ಮೇಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಜಗತ್ತಿನ ಹಲವಾರು ದೇಶಗಳು ಪ್ರಶಂಸೆ ಮಾಡಿವೆ ಎಂದರು.

ಕನ್ನಡ ಜಾಗೃತ ವೇದಿಕೆ ಜಿಲ್ಲಾಧ್ಯಕ್ಷ ಅಗ್ನಿವೆಂಕಟೇಶ ಮಾತನಾಡಿ, ನಮ್ಮ ದೇಶದ ಸಂವಿಧಾನದ ಶಿಲ್ಪಿ ಅಂಬೇಡ್ಕರ್ ಅವರು ನಮಗೆ ಸಮಾನತೆಯ ಹಾದಿಯನ್ನು ತೋರಿಸಿದರು. ಜನಪರ ಹೋರಾಟಗಾರರಿಗೆ ಅಂಬೇಡ್ಕರ್ ಸದಾ ಸ್ಫೂರ್ತಿ. ಶೋಷಣೆ ಮುಕ್ತವಾದ ಸಮಾಜ ನಿಮಾರ್ಣವಾಗಬೇಕು. ಶಿಕ್ಷಣ, ಸಂಘಟನೆ ಮತ್ತು ಹೋರಾಟ ಮಹತ್ವವನ್ನು ತಿಳಿಸಿದರು ಡಾ.ಬಿ.ಆರ್.ಅಂಬೇಡ್ಕರ್ ಆಗಿದ್ದಾರೆ ಎಂದರು.

ಕವಯಿತ್ರಿ ಆಶಾಗುಡ್ಡದಹಳ್ಳಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ತಮ್ಮ ವೈಯಕ್ತಿಕ ಜೀವನಕ್ಕಿಂತ ದೇಶದ ಒಳಿತಿಗಾಗಿ ಬದುಕಿದ್ದವರು. ತಮ್ಮ ಅಪಾರ ಓದು ಮತ್ತು ಜ್ಞಾನಾರ್ಜನೆಯಿಂದಾಗಿ ಜಗತ್ತೇ ಮೆಚ್ಚುವಂತಹ ಸಂವಿಧಾನ ರಚಿಸಲು ಸಹಕಾರಿ ಆಯಿತು. ಶೋಷಿತ ಸಮುದಾಯಗಳಿಗೆ ಸಮಾನತೆಯ ಹಕ್ಕು ದೊರೆಯಲು ಡಾ.ಬಿ.ಆರ್.ಅಂಬೇಡ್ಕರ್ ಪರಿಶ್ರಮ‌ ಅಪಾರವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಭಾರತ ಸ್ಕೌಟ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ. ವೆಂಕಟರಾಜು, ಕನ್ನಡ ಸಾಹಿತ್ಯ ಪರಿಷತ್ತು ಕೋಶಾಧ್ಯಕ್ಷ ಸಾ.ಲ.ಕಮಲನಾಥ್ , ಕಸಬಾ ಹೋಬಳಿ ಅಧ್ಯಕ್ಷ ಪಿ.ಡಿ.ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ದೊಡ್ಡಬೆಳವಂಗಲ ಹೋಬಳಿ ಘಟದ ಗೌರವ ಕಾರ್ಯದರ್ಶಿ ಮತ್ತು ಮುಖ್ಯಶಿಕ್ಷಕ ಅಂಜನಮೂರ್ತಿ, ಕನ್ನಡ ಜಾಗೃತ ವೇದಿಕೆ ತಾಲ್ಲೂಕು ಅಧ್ಯಕ್ಷ ನಾಗರಾಜು, ದಲಿತ ವಿಮೋಚನಾ ಸೇನೆ ನಗರ ಅಧ್ಯಕ್ಷ ಮಧು, ಪ್ರಗತಿಪರ ಸಂಘಟನೆಯ ಅಬ್ದುಲ್ ಸುಹಾನ್ ಸಾಬ್, ಆರಿಫ್, ದರ್ಗಾಜೋಗಿಹಳ್ಳಿ ಮಲ್ಲೇಶ್ , ದಲಿತ ವಿಮೋಚನಾ ಸೇನೆ ಕಾರ್ಯಕರ್ತರು ಭಾಗವಹಿಸಿದ್ದರು. ‌

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

47 minutes ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

7 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

8 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago