ಮಹಾನಾಯಕ ನಮ್ಮ ದೇಶದ ಮಾರ್ಗದರ್ಶಕ ನಮ್ಮ ಭಾರತ ದೇಶ ಕಂಡ ಶ್ರೇಷ್ಠ ನಾಯಕರಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರಮುಖರು. ಡಾ.ಬಿ.ಆರ್. ಅಂಬೇಡ್ಕರ್ ಅವರ ಬದುಕು, ಬರಹಗಳೇ ಭಾರತೀಯರಿಗೆ ಮಾರ್ಗದರ್ಶನವಾಗಿವೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜಕುಮಾರ್ ಕಲಾಮಂದಿರ ಆವರಣದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕನ್ನಡ ಸಾಹಿತ್ಯಕ್ಕೆ ಮತ್ತು ಸಾಹಿತಿಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳ ಪ್ರಭಾವ ಅಪಾರವಾಗಿದೆ. ಅಂಬೇಡ್ಕರ್ ಚಿಂತನೆಗಳ ಪ್ರಭಾವ ಕನ್ನಡದ ದಲಿತ, ಬಂಡಾಯ, ಪ್ರಗತಿಪರ ಸಾಹಿತಿಗಳ ಮೇಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಜಗತ್ತಿನ ಹಲವಾರು ದೇಶಗಳು ಪ್ರಶಂಸೆ ಮಾಡಿವೆ ಎಂದರು.
ಕನ್ನಡ ಜಾಗೃತ ವೇದಿಕೆ ಜಿಲ್ಲಾಧ್ಯಕ್ಷ ಅಗ್ನಿವೆಂಕಟೇಶ ಮಾತನಾಡಿ, ನಮ್ಮ ದೇಶದ ಸಂವಿಧಾನದ ಶಿಲ್ಪಿ ಅಂಬೇಡ್ಕರ್ ಅವರು ನಮಗೆ ಸಮಾನತೆಯ ಹಾದಿಯನ್ನು ತೋರಿಸಿದರು. ಜನಪರ ಹೋರಾಟಗಾರರಿಗೆ ಅಂಬೇಡ್ಕರ್ ಸದಾ ಸ್ಫೂರ್ತಿ. ಶೋಷಣೆ ಮುಕ್ತವಾದ ಸಮಾಜ ನಿಮಾರ್ಣವಾಗಬೇಕು. ಶಿಕ್ಷಣ, ಸಂಘಟನೆ ಮತ್ತು ಹೋರಾಟ ಮಹತ್ವವನ್ನು ತಿಳಿಸಿದರು ಡಾ.ಬಿ.ಆರ್.ಅಂಬೇಡ್ಕರ್ ಆಗಿದ್ದಾರೆ ಎಂದರು.
ಕವಯಿತ್ರಿ ಆಶಾಗುಡ್ಡದಹಳ್ಳಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ತಮ್ಮ ವೈಯಕ್ತಿಕ ಜೀವನಕ್ಕಿಂತ ದೇಶದ ಒಳಿತಿಗಾಗಿ ಬದುಕಿದ್ದವರು. ತಮ್ಮ ಅಪಾರ ಓದು ಮತ್ತು ಜ್ಞಾನಾರ್ಜನೆಯಿಂದಾಗಿ ಜಗತ್ತೇ ಮೆಚ್ಚುವಂತಹ ಸಂವಿಧಾನ ರಚಿಸಲು ಸಹಕಾರಿ ಆಯಿತು. ಶೋಷಿತ ಸಮುದಾಯಗಳಿಗೆ ಸಮಾನತೆಯ ಹಕ್ಕು ದೊರೆಯಲು ಡಾ.ಬಿ.ಆರ್.ಅಂಬೇಡ್ಕರ್ ಪರಿಶ್ರಮ ಅಪಾರವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಭಾರತ ಸ್ಕೌಟ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ. ವೆಂಕಟರಾಜು, ಕನ್ನಡ ಸಾಹಿತ್ಯ ಪರಿಷತ್ತು ಕೋಶಾಧ್ಯಕ್ಷ ಸಾ.ಲ.ಕಮಲನಾಥ್ , ಕಸಬಾ ಹೋಬಳಿ ಅಧ್ಯಕ್ಷ ಪಿ.ಡಿ.ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ದೊಡ್ಡಬೆಳವಂಗಲ ಹೋಬಳಿ ಘಟದ ಗೌರವ ಕಾರ್ಯದರ್ಶಿ ಮತ್ತು ಮುಖ್ಯಶಿಕ್ಷಕ ಅಂಜನಮೂರ್ತಿ, ಕನ್ನಡ ಜಾಗೃತ ವೇದಿಕೆ ತಾಲ್ಲೂಕು ಅಧ್ಯಕ್ಷ ನಾಗರಾಜು, ದಲಿತ ವಿಮೋಚನಾ ಸೇನೆ ನಗರ ಅಧ್ಯಕ್ಷ ಮಧು, ಪ್ರಗತಿಪರ ಸಂಘಟನೆಯ ಅಬ್ದುಲ್ ಸುಹಾನ್ ಸಾಬ್, ಆರಿಫ್, ದರ್ಗಾಜೋಗಿಹಳ್ಳಿ ಮಲ್ಲೇಶ್ , ದಲಿತ ವಿಮೋಚನಾ ಸೇನೆ ಕಾರ್ಯಕರ್ತರು ಭಾಗವಹಿಸಿದ್ದರು.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…