ಡಾ.ಬಿ.ಆರ್. ಅಂಬೇಡ್ಕರ್ ಅವರ ಬದುಕು, ಬರಹಗಳೇ ಭಾರತೀಯರಿಗೆ ಮಾರ್ಗದರ್ಶನ- ಪಿ.ಗೋವಿಂದರಾಜು

ಮಹಾನಾಯಕ ನಮ್ಮ ದೇಶದ ಮಾರ್ಗದರ್ಶಕ ನಮ್ಮ ಭಾರತ ದೇಶ ಕಂಡ ಶ್ರೇಷ್ಠ ನಾಯಕರಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರಮುಖರು. ಡಾ.ಬಿ.ಆರ್. ಅಂಬೇಡ್ಕರ್ ಅವರ ಬದುಕು, ಬರಹಗಳೇ ಭಾರತೀಯರಿಗೆ ಮಾರ್ಗದರ್ಶನವಾಗಿವೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜಕುಮಾರ್ ಕಲಾಮಂದಿರ ಆವರಣದಲ್ಲಿ‌ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕನ್ನಡ ಸಾಹಿತ್ಯಕ್ಕೆ ಮತ್ತು ಸಾಹಿತಿಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳ ಪ್ರಭಾವ ಅಪಾರವಾಗಿದೆ. ಅಂಬೇಡ್ಕರ್ ಚಿಂತನೆಗಳ ಪ್ರಭಾವ ಕನ್ನಡದ ದಲಿತ, ಬಂಡಾಯ, ಪ್ರಗತಿಪರ ಸಾಹಿತಿಗಳ ಮೇಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಜಗತ್ತಿನ ಹಲವಾರು ದೇಶಗಳು ಪ್ರಶಂಸೆ ಮಾಡಿವೆ ಎಂದರು.

ಕನ್ನಡ ಜಾಗೃತ ವೇದಿಕೆ ಜಿಲ್ಲಾಧ್ಯಕ್ಷ ಅಗ್ನಿವೆಂಕಟೇಶ ಮಾತನಾಡಿ, ನಮ್ಮ ದೇಶದ ಸಂವಿಧಾನದ ಶಿಲ್ಪಿ ಅಂಬೇಡ್ಕರ್ ಅವರು ನಮಗೆ ಸಮಾನತೆಯ ಹಾದಿಯನ್ನು ತೋರಿಸಿದರು. ಜನಪರ ಹೋರಾಟಗಾರರಿಗೆ ಅಂಬೇಡ್ಕರ್ ಸದಾ ಸ್ಫೂರ್ತಿ. ಶೋಷಣೆ ಮುಕ್ತವಾದ ಸಮಾಜ ನಿಮಾರ್ಣವಾಗಬೇಕು. ಶಿಕ್ಷಣ, ಸಂಘಟನೆ ಮತ್ತು ಹೋರಾಟ ಮಹತ್ವವನ್ನು ತಿಳಿಸಿದರು ಡಾ.ಬಿ.ಆರ್.ಅಂಬೇಡ್ಕರ್ ಆಗಿದ್ದಾರೆ ಎಂದರು.

ಕವಯಿತ್ರಿ ಆಶಾಗುಡ್ಡದಹಳ್ಳಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ತಮ್ಮ ವೈಯಕ್ತಿಕ ಜೀವನಕ್ಕಿಂತ ದೇಶದ ಒಳಿತಿಗಾಗಿ ಬದುಕಿದ್ದವರು. ತಮ್ಮ ಅಪಾರ ಓದು ಮತ್ತು ಜ್ಞಾನಾರ್ಜನೆಯಿಂದಾಗಿ ಜಗತ್ತೇ ಮೆಚ್ಚುವಂತಹ ಸಂವಿಧಾನ ರಚಿಸಲು ಸಹಕಾರಿ ಆಯಿತು. ಶೋಷಿತ ಸಮುದಾಯಗಳಿಗೆ ಸಮಾನತೆಯ ಹಕ್ಕು ದೊರೆಯಲು ಡಾ.ಬಿ.ಆರ್.ಅಂಬೇಡ್ಕರ್ ಪರಿಶ್ರಮ‌ ಅಪಾರವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಭಾರತ ಸ್ಕೌಟ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ. ವೆಂಕಟರಾಜು, ಕನ್ನಡ ಸಾಹಿತ್ಯ ಪರಿಷತ್ತು ಕೋಶಾಧ್ಯಕ್ಷ ಸಾ.ಲ.ಕಮಲನಾಥ್ , ಕಸಬಾ ಹೋಬಳಿ ಅಧ್ಯಕ್ಷ ಪಿ.ಡಿ.ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ದೊಡ್ಡಬೆಳವಂಗಲ ಹೋಬಳಿ ಘಟದ ಗೌರವ ಕಾರ್ಯದರ್ಶಿ ಮತ್ತು ಮುಖ್ಯಶಿಕ್ಷಕ ಅಂಜನಮೂರ್ತಿ, ಕನ್ನಡ ಜಾಗೃತ ವೇದಿಕೆ ತಾಲ್ಲೂಕು ಅಧ್ಯಕ್ಷ ನಾಗರಾಜು, ದಲಿತ ವಿಮೋಚನಾ ಸೇನೆ ನಗರ ಅಧ್ಯಕ್ಷ ಮಧು, ಪ್ರಗತಿಪರ ಸಂಘಟನೆಯ ಅಬ್ದುಲ್ ಸುಹಾನ್ ಸಾಬ್, ಆರಿಫ್, ದರ್ಗಾಜೋಗಿಹಳ್ಳಿ ಮಲ್ಲೇಶ್ , ದಲಿತ ವಿಮೋಚನಾ ಸೇನೆ ಕಾರ್ಯಕರ್ತರು ಭಾಗವಹಿಸಿದ್ದರು. ‌

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

8 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

9 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

9 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

10 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

15 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

16 hours ago