ತಾಲ್ಲೂಕಿನ ಕುಂದಾಣ ಹೋಬಳಿಯ ರಾಮನಾಥಪುರ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರವಿರುವ ನಾಮಫಲಕದ ಸ್ಟಿಕ್ಕರ್ ಹರಿದು ಸಗಣಿ ಎರಚಿ ವಿಕೃತಿ ಮೆರೆದಿದ್ದ ಅದೇ ಗ್ರಾಮದ ವೆಂಕಟೇಗೌಡ.
ಇದರಿಂದ ಕುಪಿತಗೊಂಡ ದಲಿತ ಸಂಘಟನೆಗಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಈ ಕುರಿತು ವಿಚಾರಣೆ ನಡೆಸಿದ ವಿಶ್ವನಾಥಪುರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಮಂಜುನಾಥ್. ವಿಚಾರಣೆ ಬಳಿಕ ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚಿಸಿ ಅಂಬೇಡ್ಕರ್ ಭಾವಚಿತ್ರವಿರುವ ನಾಮಫಲಕವನ್ನು ಯತಾಸ್ಥಿತಿಗೆ ತರಲಾಗುವುದು ಎಂದು ಭರವಸೆ ನೀಡಿದ ಕೃತ್ಯ ಎಸಗಿದ್ದ ವೆಂಕಟೇಗೌಡ.
ಸೆಪ್ಟೆಂಬರ್ 14ರಂದು ರಾಮನಾಥಪುರ ಕಾಲೋನಿಯ ದಲಿತ ಸಂಘಟನೆಯ ನಾಮಫಲದಲ್ಲಿದ್ದ ಅಂಬೇಡ್ಕರ್ ಸ್ಟಿಕ್ಕರ್ ಹರಿದು ಸಗಣಿ ಎರಚಿದ್ದ. ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ಬೇಕಂತಲೇ ಅಡ್ಡಿಪಡಿಸಲು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಹರಿಯಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದರು.
ಸಗಣಿ ಸುರಿದ ಘಟನೆಯನ್ನು ಕಾಲೋನಿಯ ಕೆಲವು ಗ್ರಾಮಸ್ಥರು ನೋಡಿ ಪ್ರಶ್ನೆ ಮಾಡಿ ಕೂಗಿಕೊಂಡಿದ್ದಾರೆ ಕಾಲೋನಿಯ ಜನರು ಇತರೆ ಯುವಕರು ಎಲ್ಲರೂ ಅಲ್ಲಿಗೆ ಬರುವಷ್ಟರಲ್ಲಿ ಓಡಿ ಹೋಗಿದ್ದಾರೆ ಎನ್ನಲಾಗಿದೆ.
ಸೂಕ್ತ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಅಂಬೇಡ್ಕರ್ ಫಲಕಕ್ಕೆ ರಕ್ಷಣೆ ಮತ್ತು ಭದ್ರತೆಯೊಂದಿಗೆ ಮರುಸ್ಥಾಪನೆ ಮಾಡಿಕೊಡಬೇಕು ಎಂದು ಗ್ರಾಮಸ್ಥರು ಹಾಗೂ ಪ್ರಜಾ ವಿಮೋಚನಾ ಚಳವಳಿ ಮುಖಂಎರು ಒತ್ತಾಯಿಸಿದ್ದರು.
ಈ ಹಿನ್ನೆಲೆ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ವಿಚಾರಣೆ ನಡೆಸಿ, ಕೃತ್ಯ ಎಸಗಿದವನಿಗೆ ಕಾನೂನು ಪಾಠ ಕಲಿಸಿ ಇನ್ನು ಮುಂದೆ ಈ ರೀತಿ ಮಾಡದಂತೆ ಎಚ್ಚರಿಕೆ ನೀಡಿದ ಪೊಲೀಸ್ ಇಲಾಖೆ
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…