ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರದ ನಾಮಫಲಕಕ್ಕೆ ಸಗಣಿ ಎರಚಿದ ಪ್ರಕರಣ: ತಪ್ಪು ಒಪ್ಪಿಕೊಂಡು ಕ್ಷಮೆಯಾಚಿಸಿದ ಕೃತ್ಯ ಎಸಗಿದ್ದ ವ್ಯಕ್ತಿ

ತಾಲ್ಲೂಕಿನ ಕುಂದಾಣ ಹೋಬಳಿಯ ರಾಮನಾಥಪುರ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರವಿರುವ ನಾಮಫಲಕದ ಸ್ಟಿಕ್ಕರ್ ಹರಿದು ಸಗಣಿ ಎರಚಿ ವಿಕೃತಿ ಮೆರೆದಿದ್ದ ಅದೇ ಗ್ರಾಮದ ವೆಂಕಟೇಗೌಡ.

ಇದರಿಂದ ಕುಪಿತಗೊಂಡ ದಲಿತ ಸಂಘಟನೆಗಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಈ ಕುರಿತು ವಿಚಾರಣೆ ನಡೆಸಿದ ವಿಶ್ವನಾಥಪುರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಮಂಜುನಾಥ್. ವಿಚಾರಣೆ ಬಳಿಕ ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡು ಕ್ಷಮೆ‌ಯಾಚಿಸಿ ಅಂಬೇಡ್ಕರ್ ಭಾವಚಿತ್ರವಿರುವ ನಾಮಫಲಕವನ್ನು ಯತಾಸ್ಥಿತಿಗೆ ತರಲಾಗುವುದು ಎಂದು ಭರವಸೆ ನೀಡಿದ ಕೃತ್ಯ ಎಸಗಿದ್ದ ವೆಂಕಟೇಗೌಡ.

ಸೆಪ್ಟೆಂಬರ್ 14ರಂದು ರಾಮನಾಥಪುರ ಕಾಲೋನಿಯ ದಲಿತ ಸಂಘಟನೆಯ ನಾಮಫಲದಲ್ಲಿದ್ದ ಅಂಬೇಡ್ಕರ್ ಸ್ಟಿಕ್ಕರ್ ಹರಿದು ಸಗಣಿ ಎರಚಿದ್ದ. ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ಬೇಕಂತಲೇ ಅಡ್ಡಿಪಡಿಸಲು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಹರಿಯಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದರು.

ಸಗಣಿ ಸುರಿದ ಘಟನೆಯನ್ನು ಕಾಲೋನಿಯ ಕೆಲವು ಗ್ರಾಮಸ್ಥರು ನೋಡಿ ಪ್ರಶ್ನೆ ಮಾಡಿ ಕೂಗಿಕೊಂಡಿದ್ದಾರೆ ಕಾಲೋನಿಯ ಜನರು ಇತರೆ ಯುವಕರು ಎಲ್ಲರೂ ಅಲ್ಲಿಗೆ ಬರುವಷ್ಟರಲ್ಲಿ ಓಡಿ ಹೋಗಿದ್ದಾರೆ ಎನ್ನಲಾಗಿದೆ.

ವಿಷಯ ತಿಳಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಕಾಲೋನಿಯ ಗ್ರಾಮಸ್ಥರೊಂದಿಗೆ ವಿಚಾರಿಸಿ ಫೋಟೋ ಮತ್ತು ಮಾಹಿತಿ ಪಡೆದು ಹತ್ತಿರದಲ್ಲಿರುವ ಸಿಸಿಟಿವಿಗಳ ಕ್ಯಾಮೆರಾವನ್ನು ಪರಿಶೀಲಿಸಿದ್ದಾರೆ.

ಸೂಕ್ತ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಅಂಬೇಡ್ಕರ್ ಫಲಕಕ್ಕೆ ರಕ್ಷಣೆ ಮತ್ತು ಭದ್ರತೆಯೊಂದಿಗೆ ಮರುಸ್ಥಾಪನೆ ಮಾಡಿಕೊಡಬೇಕು ಎಂದು ಗ್ರಾಮಸ್ಥರು ಹಾಗೂ ಪ್ರಜಾ ವಿಮೋಚನಾ ಚಳವಳಿ ಮುಖಂಎರು ಒತ್ತಾಯಿಸಿದ್ದರು.

ಈ ಹಿನ್ನೆಲೆ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ವಿಚಾರಣೆ ನಡೆಸಿ, ಕೃತ್ಯ ಎಸಗಿದವನಿಗೆ ಕಾನೂನು ಪಾಠ ಕಲಿಸಿ ಇನ್ನು ಮುಂದೆ ಈ ರೀತಿ ಮಾಡದಂತೆ ಎಚ್ಚರಿಕೆ ನೀಡಿದ ಪೊಲೀಸ್ ಇಲಾಖೆ

Ramesh Babu

Journalist

Recent Posts

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

2 minutes ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

3 hours ago

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

6 hours ago

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

18 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

19 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

24 hours ago