ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರದ ನಾಮಫಲಕಕ್ಕೆ ಸಗಣಿ ಎರಚಿದ ಪ್ರಕರಣ: ತಪ್ಪು ಒಪ್ಪಿಕೊಂಡು ಕ್ಷಮೆಯಾಚಿಸಿದ ಕೃತ್ಯ ಎಸಗಿದ್ದ ವ್ಯಕ್ತಿ

ತಾಲ್ಲೂಕಿನ ಕುಂದಾಣ ಹೋಬಳಿಯ ರಾಮನಾಥಪುರ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರವಿರುವ ನಾಮಫಲಕದ ಸ್ಟಿಕ್ಕರ್ ಹರಿದು ಸಗಣಿ ಎರಚಿ ವಿಕೃತಿ ಮೆರೆದಿದ್ದ ಅದೇ ಗ್ರಾಮದ ವೆಂಕಟೇಗೌಡ.

ಇದರಿಂದ ಕುಪಿತಗೊಂಡ ದಲಿತ ಸಂಘಟನೆಗಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಈ ಕುರಿತು ವಿಚಾರಣೆ ನಡೆಸಿದ ವಿಶ್ವನಾಥಪುರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಮಂಜುನಾಥ್. ವಿಚಾರಣೆ ಬಳಿಕ ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡು ಕ್ಷಮೆ‌ಯಾಚಿಸಿ ಅಂಬೇಡ್ಕರ್ ಭಾವಚಿತ್ರವಿರುವ ನಾಮಫಲಕವನ್ನು ಯತಾಸ್ಥಿತಿಗೆ ತರಲಾಗುವುದು ಎಂದು ಭರವಸೆ ನೀಡಿದ ಕೃತ್ಯ ಎಸಗಿದ್ದ ವೆಂಕಟೇಗೌಡ.

ಸೆಪ್ಟೆಂಬರ್ 14ರಂದು ರಾಮನಾಥಪುರ ಕಾಲೋನಿಯ ದಲಿತ ಸಂಘಟನೆಯ ನಾಮಫಲದಲ್ಲಿದ್ದ ಅಂಬೇಡ್ಕರ್ ಸ್ಟಿಕ್ಕರ್ ಹರಿದು ಸಗಣಿ ಎರಚಿದ್ದ. ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ಬೇಕಂತಲೇ ಅಡ್ಡಿಪಡಿಸಲು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಹರಿಯಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದರು.

ಸಗಣಿ ಸುರಿದ ಘಟನೆಯನ್ನು ಕಾಲೋನಿಯ ಕೆಲವು ಗ್ರಾಮಸ್ಥರು ನೋಡಿ ಪ್ರಶ್ನೆ ಮಾಡಿ ಕೂಗಿಕೊಂಡಿದ್ದಾರೆ ಕಾಲೋನಿಯ ಜನರು ಇತರೆ ಯುವಕರು ಎಲ್ಲರೂ ಅಲ್ಲಿಗೆ ಬರುವಷ್ಟರಲ್ಲಿ ಓಡಿ ಹೋಗಿದ್ದಾರೆ ಎನ್ನಲಾಗಿದೆ.

ವಿಷಯ ತಿಳಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಕಾಲೋನಿಯ ಗ್ರಾಮಸ್ಥರೊಂದಿಗೆ ವಿಚಾರಿಸಿ ಫೋಟೋ ಮತ್ತು ಮಾಹಿತಿ ಪಡೆದು ಹತ್ತಿರದಲ್ಲಿರುವ ಸಿಸಿಟಿವಿಗಳ ಕ್ಯಾಮೆರಾವನ್ನು ಪರಿಶೀಲಿಸಿದ್ದಾರೆ.

ಸೂಕ್ತ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಅಂಬೇಡ್ಕರ್ ಫಲಕಕ್ಕೆ ರಕ್ಷಣೆ ಮತ್ತು ಭದ್ರತೆಯೊಂದಿಗೆ ಮರುಸ್ಥಾಪನೆ ಮಾಡಿಕೊಡಬೇಕು ಎಂದು ಗ್ರಾಮಸ್ಥರು ಹಾಗೂ ಪ್ರಜಾ ವಿಮೋಚನಾ ಚಳವಳಿ ಮುಖಂಎರು ಒತ್ತಾಯಿಸಿದ್ದರು.

ಈ ಹಿನ್ನೆಲೆ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ವಿಚಾರಣೆ ನಡೆಸಿ, ಕೃತ್ಯ ಎಸಗಿದವನಿಗೆ ಕಾನೂನು ಪಾಠ ಕಲಿಸಿ ಇನ್ನು ಮುಂದೆ ಈ ರೀತಿ ಮಾಡದಂತೆ ಎಚ್ಚರಿಕೆ ನೀಡಿದ ಪೊಲೀಸ್ ಇಲಾಖೆ

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

5 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

6 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

12 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

13 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

18 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago