ತಾಲ್ಲೂಕಿನ ಕುಂದಾಣ ಹೋಬಳಿಯ ರಾಮನಾಥಪುರ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರವಿರುವ ನಾಮಫಲಕದ ಸ್ಟಿಕ್ಕರ್ ಹರಿದು ಸಗಣಿ ಎರಚಿ ವಿಕೃತಿ ಮೆರೆದಿದ್ದ ಅದೇ ಗ್ರಾಮದ ವೆಂಕಟೇಗೌಡ.
ಇದರಿಂದ ಕುಪಿತಗೊಂಡ ದಲಿತ ಸಂಘಟನೆಗಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಈ ಕುರಿತು ವಿಚಾರಣೆ ನಡೆಸಿದ ವಿಶ್ವನಾಥಪುರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಮಂಜುನಾಥ್. ವಿಚಾರಣೆ ಬಳಿಕ ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚಿಸಿ ಅಂಬೇಡ್ಕರ್ ಭಾವಚಿತ್ರವಿರುವ ನಾಮಫಲಕವನ್ನು ಯತಾಸ್ಥಿತಿಗೆ ತರಲಾಗುವುದು ಎಂದು ಭರವಸೆ ನೀಡಿದ ಕೃತ್ಯ ಎಸಗಿದ್ದ ವೆಂಕಟೇಗೌಡ.
ಸೆಪ್ಟೆಂಬರ್ 14ರಂದು ರಾಮನಾಥಪುರ ಕಾಲೋನಿಯ ದಲಿತ ಸಂಘಟನೆಯ ನಾಮಫಲದಲ್ಲಿದ್ದ ಅಂಬೇಡ್ಕರ್ ಸ್ಟಿಕ್ಕರ್ ಹರಿದು ಸಗಣಿ ಎರಚಿದ್ದ. ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ಬೇಕಂತಲೇ ಅಡ್ಡಿಪಡಿಸಲು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಹರಿಯಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದರು.
ಸಗಣಿ ಸುರಿದ ಘಟನೆಯನ್ನು ಕಾಲೋನಿಯ ಕೆಲವು ಗ್ರಾಮಸ್ಥರು ನೋಡಿ ಪ್ರಶ್ನೆ ಮಾಡಿ ಕೂಗಿಕೊಂಡಿದ್ದಾರೆ ಕಾಲೋನಿಯ ಜನರು ಇತರೆ ಯುವಕರು ಎಲ್ಲರೂ ಅಲ್ಲಿಗೆ ಬರುವಷ್ಟರಲ್ಲಿ ಓಡಿ ಹೋಗಿದ್ದಾರೆ ಎನ್ನಲಾಗಿದೆ.
ಸೂಕ್ತ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಅಂಬೇಡ್ಕರ್ ಫಲಕಕ್ಕೆ ರಕ್ಷಣೆ ಮತ್ತು ಭದ್ರತೆಯೊಂದಿಗೆ ಮರುಸ್ಥಾಪನೆ ಮಾಡಿಕೊಡಬೇಕು ಎಂದು ಗ್ರಾಮಸ್ಥರು ಹಾಗೂ ಪ್ರಜಾ ವಿಮೋಚನಾ ಚಳವಳಿ ಮುಖಂಎರು ಒತ್ತಾಯಿಸಿದ್ದರು.
ಈ ಹಿನ್ನೆಲೆ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ವಿಚಾರಣೆ ನಡೆಸಿ, ಕೃತ್ಯ ಎಸಗಿದವನಿಗೆ ಕಾನೂನು ಪಾಠ ಕಲಿಸಿ ಇನ್ನು ಮುಂದೆ ಈ ರೀತಿ ಮಾಡದಂತೆ ಎಚ್ಚರಿಕೆ ನೀಡಿದ ಪೊಲೀಸ್ ಇಲಾಖೆ
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…