ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರದ ನಾಮಫಲಕಕ್ಕೆ ಸಗಣಿ ಎರಚಿದ ಪ್ರಕರಣ: ತಪ್ಪು ಒಪ್ಪಿಕೊಂಡು ಕ್ಷಮೆಯಾಚಿಸಿದ ಕೃತ್ಯ ಎಸಗಿದ್ದ ವ್ಯಕ್ತಿ

ತಾಲ್ಲೂಕಿನ ಕುಂದಾಣ ಹೋಬಳಿಯ ರಾಮನಾಥಪುರ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರವಿರುವ ನಾಮಫಲಕದ ಸ್ಟಿಕ್ಕರ್ ಹರಿದು ಸಗಣಿ ಎರಚಿ ವಿಕೃತಿ ಮೆರೆದಿದ್ದ ಅದೇ ಗ್ರಾಮದ ವೆಂಕಟೇಗೌಡ.

ಇದರಿಂದ ಕುಪಿತಗೊಂಡ ದಲಿತ ಸಂಘಟನೆಗಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಈ ಕುರಿತು ವಿಚಾರಣೆ ನಡೆಸಿದ ವಿಶ್ವನಾಥಪುರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಮಂಜುನಾಥ್. ವಿಚಾರಣೆ ಬಳಿಕ ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡು ಕ್ಷಮೆ‌ಯಾಚಿಸಿ ಅಂಬೇಡ್ಕರ್ ಭಾವಚಿತ್ರವಿರುವ ನಾಮಫಲಕವನ್ನು ಯತಾಸ್ಥಿತಿಗೆ ತರಲಾಗುವುದು ಎಂದು ಭರವಸೆ ನೀಡಿದ ಕೃತ್ಯ ಎಸಗಿದ್ದ ವೆಂಕಟೇಗೌಡ.

ಸೆಪ್ಟೆಂಬರ್ 14ರಂದು ರಾಮನಾಥಪುರ ಕಾಲೋನಿಯ ದಲಿತ ಸಂಘಟನೆಯ ನಾಮಫಲದಲ್ಲಿದ್ದ ಅಂಬೇಡ್ಕರ್ ಸ್ಟಿಕ್ಕರ್ ಹರಿದು ಸಗಣಿ ಎರಚಿದ್ದ. ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ಬೇಕಂತಲೇ ಅಡ್ಡಿಪಡಿಸಲು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಹರಿಯಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದರು.

ಸಗಣಿ ಸುರಿದ ಘಟನೆಯನ್ನು ಕಾಲೋನಿಯ ಕೆಲವು ಗ್ರಾಮಸ್ಥರು ನೋಡಿ ಪ್ರಶ್ನೆ ಮಾಡಿ ಕೂಗಿಕೊಂಡಿದ್ದಾರೆ ಕಾಲೋನಿಯ ಜನರು ಇತರೆ ಯುವಕರು ಎಲ್ಲರೂ ಅಲ್ಲಿಗೆ ಬರುವಷ್ಟರಲ್ಲಿ ಓಡಿ ಹೋಗಿದ್ದಾರೆ ಎನ್ನಲಾಗಿದೆ.

ವಿಷಯ ತಿಳಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಕಾಲೋನಿಯ ಗ್ರಾಮಸ್ಥರೊಂದಿಗೆ ವಿಚಾರಿಸಿ ಫೋಟೋ ಮತ್ತು ಮಾಹಿತಿ ಪಡೆದು ಹತ್ತಿರದಲ್ಲಿರುವ ಸಿಸಿಟಿವಿಗಳ ಕ್ಯಾಮೆರಾವನ್ನು ಪರಿಶೀಲಿಸಿದ್ದಾರೆ.

ಸೂಕ್ತ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಅಂಬೇಡ್ಕರ್ ಫಲಕಕ್ಕೆ ರಕ್ಷಣೆ ಮತ್ತು ಭದ್ರತೆಯೊಂದಿಗೆ ಮರುಸ್ಥಾಪನೆ ಮಾಡಿಕೊಡಬೇಕು ಎಂದು ಗ್ರಾಮಸ್ಥರು ಹಾಗೂ ಪ್ರಜಾ ವಿಮೋಚನಾ ಚಳವಳಿ ಮುಖಂಎರು ಒತ್ತಾಯಿಸಿದ್ದರು.

ಈ ಹಿನ್ನೆಲೆ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ವಿಚಾರಣೆ ನಡೆಸಿ, ಕೃತ್ಯ ಎಸಗಿದವನಿಗೆ ಕಾನೂನು ಪಾಠ ಕಲಿಸಿ ಇನ್ನು ಮುಂದೆ ಈ ರೀತಿ ಮಾಡದಂತೆ ಎಚ್ಚರಿಕೆ ನೀಡಿದ ಪೊಲೀಸ್ ಇಲಾಖೆ

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

3 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

3 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

6 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

10 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

15 hours ago