ತಾಲ್ಲೂಕಿನ ಕುಂದಾಣ ಹೋಬಳಿಯ ರಾಮನಾಥಪುರ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರವಿರುವ ನಾಮಫಲಕದ ಸ್ಟಿಕ್ಕರ್ ಹರಿದು ಸಗಣಿ ಎರಚಿ ವಿಕೃತಿ ಮೆರೆದಿದ್ದ ಅದೇ ಗ್ರಾಮದ ವೆಂಕಟೇಗೌಡ.
ಇದರಿಂದ ಕುಪಿತಗೊಂಡ ದಲಿತ ಸಂಘಟನೆಗಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಈ ಕುರಿತು ವಿಚಾರಣೆ ನಡೆಸಿದ ವಿಶ್ವನಾಥಪುರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಮಂಜುನಾಥ್. ವಿಚಾರಣೆ ಬಳಿಕ ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚಿಸಿ ಅಂಬೇಡ್ಕರ್ ಭಾವಚಿತ್ರವಿರುವ ನಾಮಫಲಕವನ್ನು ಯತಾಸ್ಥಿತಿಗೆ ತರಲಾಗುವುದು ಎಂದು ಭರವಸೆ ನೀಡಿದ ಕೃತ್ಯ ಎಸಗಿದ್ದ ವೆಂಕಟೇಗೌಡ.
ಸೆಪ್ಟೆಂಬರ್ 14ರಂದು ರಾಮನಾಥಪುರ ಕಾಲೋನಿಯ ದಲಿತ ಸಂಘಟನೆಯ ನಾಮಫಲದಲ್ಲಿದ್ದ ಅಂಬೇಡ್ಕರ್ ಸ್ಟಿಕ್ಕರ್ ಹರಿದು ಸಗಣಿ ಎರಚಿದ್ದ. ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ಬೇಕಂತಲೇ ಅಡ್ಡಿಪಡಿಸಲು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಹರಿಯಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದರು.
ಸಗಣಿ ಸುರಿದ ಘಟನೆಯನ್ನು ಕಾಲೋನಿಯ ಕೆಲವು ಗ್ರಾಮಸ್ಥರು ನೋಡಿ ಪ್ರಶ್ನೆ ಮಾಡಿ ಕೂಗಿಕೊಂಡಿದ್ದಾರೆ ಕಾಲೋನಿಯ ಜನರು ಇತರೆ ಯುವಕರು ಎಲ್ಲರೂ ಅಲ್ಲಿಗೆ ಬರುವಷ್ಟರಲ್ಲಿ ಓಡಿ ಹೋಗಿದ್ದಾರೆ ಎನ್ನಲಾಗಿದೆ.
ಸೂಕ್ತ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಅಂಬೇಡ್ಕರ್ ಫಲಕಕ್ಕೆ ರಕ್ಷಣೆ ಮತ್ತು ಭದ್ರತೆಯೊಂದಿಗೆ ಮರುಸ್ಥಾಪನೆ ಮಾಡಿಕೊಡಬೇಕು ಎಂದು ಗ್ರಾಮಸ್ಥರು ಹಾಗೂ ಪ್ರಜಾ ವಿಮೋಚನಾ ಚಳವಳಿ ಮುಖಂಎರು ಒತ್ತಾಯಿಸಿದ್ದರು.
ಈ ಹಿನ್ನೆಲೆ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ವಿಚಾರಣೆ ನಡೆಸಿ, ಕೃತ್ಯ ಎಸಗಿದವನಿಗೆ ಕಾನೂನು ಪಾಠ ಕಲಿಸಿ ಇನ್ನು ಮುಂದೆ ಈ ರೀತಿ ಮಾಡದಂತೆ ಎಚ್ಚರಿಕೆ ನೀಡಿದ ಪೊಲೀಸ್ ಇಲಾಖೆ
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…