ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರದ ನಾಮಫಲಕಕ್ಕೆ ಸಗಣಿ ಎರಚಿದ ಪ್ರಕರಣ: ತಪ್ಪು ಒಪ್ಪಿಕೊಂಡು ಕ್ಷಮೆಯಾಚಿಸಿದ ಕೃತ್ಯ ಎಸಗಿದ್ದ ವ್ಯಕ್ತಿ

ತಾಲ್ಲೂಕಿನ ಕುಂದಾಣ ಹೋಬಳಿಯ ರಾಮನಾಥಪುರ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರವಿರುವ ನಾಮಫಲಕದ ಸ್ಟಿಕ್ಕರ್ ಹರಿದು ಸಗಣಿ ಎರಚಿ ವಿಕೃತಿ ಮೆರೆದಿದ್ದ ಅದೇ ಗ್ರಾಮದ ವೆಂಕಟೇಗೌಡ.

ಇದರಿಂದ ಕುಪಿತಗೊಂಡ ದಲಿತ ಸಂಘಟನೆಗಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಈ ಕುರಿತು ವಿಚಾರಣೆ ನಡೆಸಿದ ವಿಶ್ವನಾಥಪುರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಮಂಜುನಾಥ್. ವಿಚಾರಣೆ ಬಳಿಕ ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡು ಕ್ಷಮೆ‌ಯಾಚಿಸಿ ಅಂಬೇಡ್ಕರ್ ಭಾವಚಿತ್ರವಿರುವ ನಾಮಫಲಕವನ್ನು ಯತಾಸ್ಥಿತಿಗೆ ತರಲಾಗುವುದು ಎಂದು ಭರವಸೆ ನೀಡಿದ ಕೃತ್ಯ ಎಸಗಿದ್ದ ವೆಂಕಟೇಗೌಡ.

ಸೆಪ್ಟೆಂಬರ್ 14ರಂದು ರಾಮನಾಥಪುರ ಕಾಲೋನಿಯ ದಲಿತ ಸಂಘಟನೆಯ ನಾಮಫಲದಲ್ಲಿದ್ದ ಅಂಬೇಡ್ಕರ್ ಸ್ಟಿಕ್ಕರ್ ಹರಿದು ಸಗಣಿ ಎರಚಿದ್ದ. ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ಬೇಕಂತಲೇ ಅಡ್ಡಿಪಡಿಸಲು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಹರಿಯಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದರು.

ಸಗಣಿ ಸುರಿದ ಘಟನೆಯನ್ನು ಕಾಲೋನಿಯ ಕೆಲವು ಗ್ರಾಮಸ್ಥರು ನೋಡಿ ಪ್ರಶ್ನೆ ಮಾಡಿ ಕೂಗಿಕೊಂಡಿದ್ದಾರೆ ಕಾಲೋನಿಯ ಜನರು ಇತರೆ ಯುವಕರು ಎಲ್ಲರೂ ಅಲ್ಲಿಗೆ ಬರುವಷ್ಟರಲ್ಲಿ ಓಡಿ ಹೋಗಿದ್ದಾರೆ ಎನ್ನಲಾಗಿದೆ.

ವಿಷಯ ತಿಳಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಕಾಲೋನಿಯ ಗ್ರಾಮಸ್ಥರೊಂದಿಗೆ ವಿಚಾರಿಸಿ ಫೋಟೋ ಮತ್ತು ಮಾಹಿತಿ ಪಡೆದು ಹತ್ತಿರದಲ್ಲಿರುವ ಸಿಸಿಟಿವಿಗಳ ಕ್ಯಾಮೆರಾವನ್ನು ಪರಿಶೀಲಿಸಿದ್ದಾರೆ.

ಸೂಕ್ತ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಅಂಬೇಡ್ಕರ್ ಫಲಕಕ್ಕೆ ರಕ್ಷಣೆ ಮತ್ತು ಭದ್ರತೆಯೊಂದಿಗೆ ಮರುಸ್ಥಾಪನೆ ಮಾಡಿಕೊಡಬೇಕು ಎಂದು ಗ್ರಾಮಸ್ಥರು ಹಾಗೂ ಪ್ರಜಾ ವಿಮೋಚನಾ ಚಳವಳಿ ಮುಖಂಎರು ಒತ್ತಾಯಿಸಿದ್ದರು.

ಈ ಹಿನ್ನೆಲೆ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ವಿಚಾರಣೆ ನಡೆಸಿ, ಕೃತ್ಯ ಎಸಗಿದವನಿಗೆ ಕಾನೂನು ಪಾಠ ಕಲಿಸಿ ಇನ್ನು ಮುಂದೆ ಈ ರೀತಿ ಮಾಡದಂತೆ ಎಚ್ಚರಿಕೆ ನೀಡಿದ ಪೊಲೀಸ್ ಇಲಾಖೆ

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

2 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

5 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

13 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

14 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago